Homeಮುಖಪುಟರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

- Advertisement -
- Advertisement -

ಕಳೆದೆರಡು ದಿನಗಳಿಂದ ಲೋಕಸಭೆಯಲ್ಲಿ ವಿಪಕ್ಷ ನಾಯಕರು ತೀವ್ರ ತರಾಟೆಗೆ ತಗೆದುಕೊಂಡ ಬಳಿಕ ಕೇಂದ್ರ ಸರ್ಕಾರ ತೀವ್ರ ಮುಜುಗಕ್ಕಿಡಾಯಿತು. ಈ ವೇಳೆ ಕಾಂಗ್ರೆಸ್ ನಾಯಕ ಆದಿರ್ ಚೌಧರಿ ಅವರು, ರಾಹುಲ್ ಗಾಂಧಿಯವರನ್ನು ನೀವು ಎಷ್ಟೇ ‘ಪಪ್ಪು’ ಎಂದು ಹೇಳಿದರೂ ಸಾಬೀತುಮಾಡಲಾಗಲಿಲ್ಲ. ಆದರೆ ರಾಹುಲ್ ಗಾಂಧಿಯವರೇ ನಿಮ್ಮನ್ನು ‘ಪಪ್ಪು’ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

”ರಾಹುಲ್ ಗಾಂಧಿಯವರು ಸರಿಯಾದ ವಿಚಾರವನ್ನೇ ಆಯ್ಕೆ ಮಾಡಿಕೊಂಡು, ನಿಮ್ಮ ಮೇಲೆ ದಾಳಿ ಮಾಡಿದ್ದಾರೆ. ಅದರಿಂದ ಬಿಜೆಪಿಯಲ್ಲಿ ಕೋಲಾಹಲ ಎದ್ದಿದೆ. ಮೊದಲ ಬಾರಿಗೆ, ಆಡಳಿತ ಪಕ್ಷವು ಕೈಗಾರಿಕೋದ್ಯಮಿಗಾಗಿ ವಕಾಲತ್ತು ವಹಿಸುತ್ತಿದೆ. ‘ಇದನ್ನು ನಾವು ಹೇಳುತ್ತಿಲ್ಲ, ಇದು ಹಿಂಡೆನ್‌ಬರ್ಗ್ ವರದಿಯಲ್ಲಿ ಬಂದಿದೆ. ನಾವು ಆ ಸಮಸ್ಯೆಯನ್ನು ಎತ್ತುತ್ತಿದ್ದೇವೆ ಅದರಲ್ಲಿ ತಪ್ಪೇನು?” ಎಂದರು.

ಈ ವೇಳೆ ಚೀನಾ ವಿಷಯವನ್ನು ಪ್ರಸ್ತಾಪಿಸಿ, 1962ರ ಭಾರತ-ಚೀನಾ ಯುದ್ಧದ ನಂತರ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮನವಿಯ ಮೇಲೆ ಚರ್ಚೆಗೆ ಒಪ್ಪಿದರು, ಆದರೆ ಪ್ರಸ್ತುತ ಬಿಜೆಪಿ ಸರ್ಕಾರ ಚರ್ಚೆಯೇ ಬೇಡ ಎಂದು ಹೇಳುತ್ತದೆ.

“ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಡಿಜಿಗಳು ಮತ್ತು ಐಜಿಗಳ ಸಭೆ ನಡೆಯಿತು, ಪೊಲೀಸ್ ಅಧಿಕಾರಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಅದರಲ್ಲಿ ನಾವು ಮೊದಲು ಪೂರ್ವ ಲಡಾಖ್‌ನಲ್ಲಿ 65 ಪಾಯಿಂಟ್‌ಗಳಲ್ಲಿ ಗಸ್ತು ತಿರುಗುತ್ತಿದ್ದೆವು ಆದರೆ ನಮಗೆ ಆನಂತರ ಗಸ್ತು ತಿರುಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಏಕೆಂದರೆ ಭಾರತಕ್ಕೆ ಚೀನೀ ಆಕ್ರಮಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡತದಿಂದ ರಾಹುಲ್ ಭಾಷಣ ಕಡಿತ; ಪ್ರಜಾಪ್ರಭುತ್ವ ದಹನ ಎಂದ ಕಾಂಗ್ರೆಸ್

ಈ ವೇಳೆ ಪ್ರತಿಕ್ರಿಯಿಸಿದ ಅಮಿತ್ ಶಾ, ”ಅಧಿರ್ ರಂಜನ್ ಜೀ ಇದನ್ನು ಈಗ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆಗ ನ್ಯೂನತೆಗಳಿದ್ದವು ಮತ್ತು ಈಗ ಯಾವುದೂ ಇಲ್ಲ. ಆಗ (ನೆಹರು-ವಾಜಪೇಯಿ) ಸಾವಿರಾರು ಹೆಕ್ಟೇರ್ ನಷ್ಟವಾದ ನಂತರ ಚರ್ಚೆ ಪ್ರಾರಂಭವಾಯಿತು” ಎಂದು ಹೇಳಿದರು.

ಲೋಕಸಭೆಯಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಬಿಜೆಪಿ ಸಂಸದರನ್ನು ಗೇಲಿ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ‘ಚಾಮ್ಚೆ’ ಎಂದು ಕರೆದಿದ್ದಾರೆ.

”ಪ್ರಧಾನಿಯವರು ತಪ್ಪುದಾರಿಗೆಳೆಯುವ ಭಾಷಣಕ್ಕೆ ಎಲ್ಲ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿದರು. ಪ್ರಧಾನಿ ಹೋದ ನಂತರ (ಲೋಕಸಭೆಯಿಂದ) ಎಲ್ಲಾ ‘ಚಾಮ್ಚೆ’ಗಳು ಹೋದವು. ಇದರಿಂದಾಗಿ ಸದನವನ್ನು ನಡೆಸಲು ಅಗತ್ಯವಿರುವ ಕನಿಷ್ಠ ಬಲ ಇರಲಿಲ್ಲ ಹಾಗಾಗಿ ಸದನವನ್ನು ಮುಂದೂಡಲಾಯಿತು. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ”ಪ್ರಧಾನಿ ಉತ್ತಮ ಭಾಷಣ ಮಾಡಿದರು ಆದರೆ ಪ್ರತಿಪಕ್ಷಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ” ಎಂದು ಹೇಳಿದರು.

“ಪ್ರಧಾನಿಯವರ ಭಾಷಣವು ​​ಪುನರಾವರ್ತಿತ, ವಾಕ್ಚಾತುರ್ಯ ಮತ್ತು ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯದಿಂದ ಕೂಡಿತ್ತು. ಪ್ರತಿಪಕ್ಷಗಳನ್ನು ಕೆಣಕುವುದರಿಂದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ದೇಶವು ನಿಮ್ಮನ್ನು ನೋಡುತ್ತಿದೆ ಮತ್ತು ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಬಿಆರ್‍‌ಎಸ್‌ ನಾಯಕಿ ಕವಿತಾ ಕಲ್ವಕುಂಟ್ಲ ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದಿಂದ ತೃಪ್ತರಾಗಿಲ್ಲ, ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.

”ನನಗೆ (ಪ್ರಧಾನಿ ಭಾಷಣ) ​​ತೃಪ್ತಿ ಇಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಏನೂ ಮಾತನಾಡಲಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತರಲ್ಲದಿದ್ದರೆ ಪ್ರಧಾನ ಮಂತ್ರಿಯವರು ತನಿಖೆ ನಡೆಸಲು ಸೂಚಿಸಿಬೇಕು. ಪ್ರಧಾನಿ ಅವರನ್ನು (ಗೌತಮ್ ಅದಾನಿ) ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.” ಪ್ರಧಾನಿ ಭಾಷಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...