Homeಮುಖಪುಟರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

- Advertisement -
- Advertisement -

ಕಳೆದೆರಡು ದಿನಗಳಿಂದ ಲೋಕಸಭೆಯಲ್ಲಿ ವಿಪಕ್ಷ ನಾಯಕರು ತೀವ್ರ ತರಾಟೆಗೆ ತಗೆದುಕೊಂಡ ಬಳಿಕ ಕೇಂದ್ರ ಸರ್ಕಾರ ತೀವ್ರ ಮುಜುಗಕ್ಕಿಡಾಯಿತು. ಈ ವೇಳೆ ಕಾಂಗ್ರೆಸ್ ನಾಯಕ ಆದಿರ್ ಚೌಧರಿ ಅವರು, ರಾಹುಲ್ ಗಾಂಧಿಯವರನ್ನು ನೀವು ಎಷ್ಟೇ ‘ಪಪ್ಪು’ ಎಂದು ಹೇಳಿದರೂ ಸಾಬೀತುಮಾಡಲಾಗಲಿಲ್ಲ. ಆದರೆ ರಾಹುಲ್ ಗಾಂಧಿಯವರೇ ನಿಮ್ಮನ್ನು ‘ಪಪ್ಪು’ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

”ರಾಹುಲ್ ಗಾಂಧಿಯವರು ಸರಿಯಾದ ವಿಚಾರವನ್ನೇ ಆಯ್ಕೆ ಮಾಡಿಕೊಂಡು, ನಿಮ್ಮ ಮೇಲೆ ದಾಳಿ ಮಾಡಿದ್ದಾರೆ. ಅದರಿಂದ ಬಿಜೆಪಿಯಲ್ಲಿ ಕೋಲಾಹಲ ಎದ್ದಿದೆ. ಮೊದಲ ಬಾರಿಗೆ, ಆಡಳಿತ ಪಕ್ಷವು ಕೈಗಾರಿಕೋದ್ಯಮಿಗಾಗಿ ವಕಾಲತ್ತು ವಹಿಸುತ್ತಿದೆ. ‘ಇದನ್ನು ನಾವು ಹೇಳುತ್ತಿಲ್ಲ, ಇದು ಹಿಂಡೆನ್‌ಬರ್ಗ್ ವರದಿಯಲ್ಲಿ ಬಂದಿದೆ. ನಾವು ಆ ಸಮಸ್ಯೆಯನ್ನು ಎತ್ತುತ್ತಿದ್ದೇವೆ ಅದರಲ್ಲಿ ತಪ್ಪೇನು?” ಎಂದರು.

ಈ ವೇಳೆ ಚೀನಾ ವಿಷಯವನ್ನು ಪ್ರಸ್ತಾಪಿಸಿ, 1962ರ ಭಾರತ-ಚೀನಾ ಯುದ್ಧದ ನಂತರ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮನವಿಯ ಮೇಲೆ ಚರ್ಚೆಗೆ ಒಪ್ಪಿದರು, ಆದರೆ ಪ್ರಸ್ತುತ ಬಿಜೆಪಿ ಸರ್ಕಾರ ಚರ್ಚೆಯೇ ಬೇಡ ಎಂದು ಹೇಳುತ್ತದೆ.

“ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಡಿಜಿಗಳು ಮತ್ತು ಐಜಿಗಳ ಸಭೆ ನಡೆಯಿತು, ಪೊಲೀಸ್ ಅಧಿಕಾರಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಅದರಲ್ಲಿ ನಾವು ಮೊದಲು ಪೂರ್ವ ಲಡಾಖ್‌ನಲ್ಲಿ 65 ಪಾಯಿಂಟ್‌ಗಳಲ್ಲಿ ಗಸ್ತು ತಿರುಗುತ್ತಿದ್ದೆವು ಆದರೆ ನಮಗೆ ಆನಂತರ ಗಸ್ತು ತಿರುಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಏಕೆಂದರೆ ಭಾರತಕ್ಕೆ ಚೀನೀ ಆಕ್ರಮಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡತದಿಂದ ರಾಹುಲ್ ಭಾಷಣ ಕಡಿತ; ಪ್ರಜಾಪ್ರಭುತ್ವ ದಹನ ಎಂದ ಕಾಂಗ್ರೆಸ್

ಈ ವೇಳೆ ಪ್ರತಿಕ್ರಿಯಿಸಿದ ಅಮಿತ್ ಶಾ, ”ಅಧಿರ್ ರಂಜನ್ ಜೀ ಇದನ್ನು ಈಗ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆಗ ನ್ಯೂನತೆಗಳಿದ್ದವು ಮತ್ತು ಈಗ ಯಾವುದೂ ಇಲ್ಲ. ಆಗ (ನೆಹರು-ವಾಜಪೇಯಿ) ಸಾವಿರಾರು ಹೆಕ್ಟೇರ್ ನಷ್ಟವಾದ ನಂತರ ಚರ್ಚೆ ಪ್ರಾರಂಭವಾಯಿತು” ಎಂದು ಹೇಳಿದರು.

ಲೋಕಸಭೆಯಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಬಿಜೆಪಿ ಸಂಸದರನ್ನು ಗೇಲಿ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ‘ಚಾಮ್ಚೆ’ ಎಂದು ಕರೆದಿದ್ದಾರೆ.

”ಪ್ರಧಾನಿಯವರು ತಪ್ಪುದಾರಿಗೆಳೆಯುವ ಭಾಷಣಕ್ಕೆ ಎಲ್ಲ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿದರು. ಪ್ರಧಾನಿ ಹೋದ ನಂತರ (ಲೋಕಸಭೆಯಿಂದ) ಎಲ್ಲಾ ‘ಚಾಮ್ಚೆ’ಗಳು ಹೋದವು. ಇದರಿಂದಾಗಿ ಸದನವನ್ನು ನಡೆಸಲು ಅಗತ್ಯವಿರುವ ಕನಿಷ್ಠ ಬಲ ಇರಲಿಲ್ಲ ಹಾಗಾಗಿ ಸದನವನ್ನು ಮುಂದೂಡಲಾಯಿತು. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ”ಪ್ರಧಾನಿ ಉತ್ತಮ ಭಾಷಣ ಮಾಡಿದರು ಆದರೆ ಪ್ರತಿಪಕ್ಷಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ” ಎಂದು ಹೇಳಿದರು.

“ಪ್ರಧಾನಿಯವರ ಭಾಷಣವು ​​ಪುನರಾವರ್ತಿತ, ವಾಕ್ಚಾತುರ್ಯ ಮತ್ತು ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯದಿಂದ ಕೂಡಿತ್ತು. ಪ್ರತಿಪಕ್ಷಗಳನ್ನು ಕೆಣಕುವುದರಿಂದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ದೇಶವು ನಿಮ್ಮನ್ನು ನೋಡುತ್ತಿದೆ ಮತ್ತು ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಬಿಆರ್‍‌ಎಸ್‌ ನಾಯಕಿ ಕವಿತಾ ಕಲ್ವಕುಂಟ್ಲ ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದಿಂದ ತೃಪ್ತರಾಗಿಲ್ಲ, ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.

”ನನಗೆ (ಪ್ರಧಾನಿ ಭಾಷಣ) ​​ತೃಪ್ತಿ ಇಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಏನೂ ಮಾತನಾಡಲಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತರಲ್ಲದಿದ್ದರೆ ಪ್ರಧಾನ ಮಂತ್ರಿಯವರು ತನಿಖೆ ನಡೆಸಲು ಸೂಚಿಸಿಬೇಕು. ಪ್ರಧಾನಿ ಅವರನ್ನು (ಗೌತಮ್ ಅದಾನಿ) ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.” ಪ್ರಧಾನಿ ಭಾಷಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...