Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ ಸರಕಾರದಿಂದ ರೈತರಿಗೆ ಅನ್ಯಾಯ; ರಾಹುಲ್‌ ಗಾಂಧಿ ವಾಗ್ಧಾಳಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ ಸರಕಾರದಿಂದ ರೈತರಿಗೆ ಅನ್ಯಾಯ; ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಛತ್ತೀಸ್‌ಗಢದಲ್ಲಿ ಮುಂದುವರಿದಿದ್ದು, ಯಾತ್ರೆ ವೇಳೆ ರಾಹುಲ್‌ ಗಾಂಧಿ ‘ದೆಹಲಿ ಚಲೋ’ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ ನಾಳೆ ಜಾರ್ಖಂಡ್‌ಗೆ ಪ್ರವೇಶಿಸಲಿದೆ. ಇದಕ್ಕೂ ಮೊದಲು ಯಾತ್ರೆ  ರಾಯ್‌ಗಢ್, ಶಕ್ತಿ, ಕೊರ್ಬಾ, ಸೂರಜ್‌ಪುರ, ಸುರ್ಗುಜಾ ಮತ್ತು ಬಲರಾಮ್‌ಪುರ ಜಿಲ್ಲೆಗಳ ಮೂಲಕ ಛತ್ತೀಸ್‌ಗಢದಲ್ಲಿ 536 ಕಿಲೋಮೀಟರ್ ಕ್ರಮಿಸಲಿದೆ. ಕೆಲವು ದಿನಗಳ ಹಿಂದೆ ಯಾತ್ರೆಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಉಕ್ಕಿನ ಮಿಲ್‌ಗಳನ್ನು ತಮ್ಮ ಕೋಟ್ಯಾಧಿಪತಿ ಸ್ನೇಹಿತರಿಗೆ ಹಸ್ತಾಂತರಿಸಲಿದ್ದಾರೆ. ದೇಶದಲ್ಲಿ ಆರ್ಥಿಕ ಅನ್ಯಾಯ ನಡೆಯುತ್ತಿದೆ. ಪ್ರಧಾನಿ ಮೋದಿ ದೇಶದ ಸಂಪತ್ತನ್ನು ಕೆಲವೇ ಕೆಲ ಗೆಳೆಯರಿಗೆ ಹಸ್ತಾತರಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದರು.

ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಈ ದೇಶದಲ್ಲಿ ಪ್ರತಿದಿನ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ ಅನ್ಯಾಯ ನಡೆಯುತ್ತಿದೆ, ಅನ್ಯಾಯ ಇರುವ ಸಮಾಜದಲ್ಲಿ ಹಿಂಸೆ ಮತ್ತು ದ್ವೇಷ ಇರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಿಸಿದೆ. ಆದರೆ ಅವರು ಎಂಎಸ್ ಸ್ವಾಮಿನಾಥನ್ ಹೇಳಿದ್ದನ್ನು ಜಾರಿಗೆ ತರಲು ಸಿದ್ಧರಿಲ್ಲ. ಅವರು ತಮ್ಮ ವರದಿಯಲ್ಲಿ ರೈತರಿಗೆ ಎಂಎಸ್‌ಪಿಗೆ ಕಾನೂನುಬದ್ಧ ಹಕ್ಕನ್ನು ನೀಡಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರು. ಆದರೆ ಬಿಜೆಪಿ ಸರ್ಕಾರ ಅದನ್ನು ಮಾಡುತ್ತಿಲ್ಲ. INDIA ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ಭಾರತದ ರೈತರಿಗೆ ಎಂಎಸ್‌ಪಿ ಖಾತರಿಪಡಿಸುವ ಕಾನೂನು ಜಾರಿಗೆ ತರುತ್ತೇವೆ. ಸ್ವಾಮಿನಾಥನ್ ವರದಿಯಲ್ಲಿ ಉಲ್ಲೇಖಿಸಿದ್ದನ್ನು ನಾವು ಈಡೇರಿಸುತ್ತೇವೆ. ಇಂದು ರೈತರು ದಿಲ್ಲಿಯತ್ತ ಪಾದಯಾತ್ರೆ ನಡೆಸುತ್ತಿದ್ದಾರೆ, ಅವರನ್ನು ತಡೆಯಲಾಗುತ್ತಿದೆ, ಅಶ್ರುವಾಯು ಪ್ರಯೋಗಿಸಲಾಗುತ್ತಿದೆ. ಅವರು ಏನು ಹೇಳುತ್ತಿದ್ದಾರೆ, ಅವರು ತಮ್ಮ ದುಡಿಮೆಯ ಫಲವನ್ನು ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಎಂಎಸ್ ಸ್ವಾಮಿನಾಥನ್ ಮತ್ತು ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತ ಸಂಘಟನೆಗಳು 3-4 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಸ್ವಾಮಿನಾಥನ್ ಸೂತ್ರವನ್ನು ಜಾರಿಗೆ ತರಬೇಕೆಂಬುದು ಅವರ ದೊಡ್ಡ ಬೇಡಿಕೆಯಾಗಿದೆ. ಎಂಎಸ್ಪಿ ‘ಮೋದಿ ಮಾರಾಟ ಬೆಲೆ’ ಅಲ್ಲ. MSP ಎಂದರೆ ‘ಕನಿಷ್ಠ ಬೆಂಬಲ ಬೆಲೆ’ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ರೈತರಿಗೆ ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಂತೆ ರೈತ ಸಂಘಗಳು ಒತ್ತಾಯಿಸುತ್ತಿವೆ. ಆದರೆ ಪ್ರಧಾನಿ ಮೋದಿ ಅವರ ಸರ್ಕಾರವು ರಾಷ್ಟ್ರ ರಾಜಧಾನಿಗೆ ಪ್ರವೇಶಿಸದಂತೆ ರೈತರನ್ನು ತಡೆಯಲು ಪ್ರಯತ್ನಿಸುತ್ತಿದೆ. ಇದು ತುಂಬಾ ದುರದೃಷ್ಟಕರ,  ರಾಹುಲ್ ಗಾಂಧಿ ರೈತ ಸಂಘಗಳನ್ನು ಭೇಟಿ ಮಾಡಿ ಎಂಎಸ್‌ಪಿ, ಸಾಲ ಮನ್ನಾ ಮತ್ತು ಪಿಎಂ ಫಸಲ್ ಬಿಮಾ ಯೋಜನೆ ಕುರಿತು ಚರ್ಚಿಸಿದ್ದಾರೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಿ ಮಾರ್ಚ್ 20ರಂದು ಮುಂಬೈನಲ್ಲಿ ಕೊನೆಗೊಳ್ಳಲಿದೆ.

ಇದನ್ನು ಓದಿ: ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...