Homeಮುಖಪುಟ‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

- Advertisement -
- Advertisement -

ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರನ್ನು ಅನುಕರಿಸುವ ವಿಡಿಯೋವನ್ನು ನಾನು ಎಲ್ಲಿಯೂ ಹಂಚಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಸಭೆ ಕಲಾಪದಲ್ಲಿನ ಉಪರಾಷ್ಟ್ರಪತಿಯವರ ನಡೆ-ನುಡಿಯನ್ನು ಅನುಕರಿಸಿದ ಟಿಎಂಸಿ ಸಂಸದರ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು.

‘ಯಾರು ಮತ್ತು ಹೇಗೆ ಅವಮಾನಿಸಿದರು?’ ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, ‘ಸಂಸದರು ಅಲ್ಲಿ ಕುಳಿತಿದ್ದರು, ನಾನು ಅವರ ವೀಡಿಯೋವನ್ನು ನನ್ನ ಫೋನ್‌ನಲ್ಲಿ ತೆಗೆದುಕೊಂಡಿದ್ದೇನೆ. ಮಾಧ್ಯಮಗಳು ಅದನ್ನು ತೋರಿಸುತ್ತಾ ಟೀಕೆಗಳನ್ನು ಮಾಡುತ್ತಿವೆ. ಮೋದಿಯವರು ಕೂಡ ಹಲವು ಟೀಕೆಗಳನ್ನು ಮಾಡುತ್ತಿದ್ದಾರೆ, ಯಾರೂ ಏನನ್ನೂ ಹೇಳಲಿಲ್ಲ’ ಎಂದು ಅವರು ಹೇಳಿದರು.

‘ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿವ್ಯಕ್ತಿ ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಈ ವಿವಾದದ ಕುರಿತು ಮಾಧ್ಯಮಗಳ ಪಕ್ಷಪಾತದ ವಿರುದ್ಧ ಆಕ್ರೋಶ ಹೊರಹಾಕಿರುವ ರಾಹುಲ್ ಗಾಂಧಿ, ‘ಉಭಯ ಸದನಗಳಿಂದ 150 ಸಂಸದರನ್ನು ಹೊರಹಾಕಲಾಗಿದೆ. ಆ ಬಗ್ಗೆ ಮಾಧ್ಯಮಗಳು ಮಾತನಾಡುತ್ತಲೇ ಇಲ್ಲ. ಅದಾನಿ ಮತ್ತು ರಫೇಲ್ ವಿಷಯಗಳ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ಚರ್ಚೆಯಾಗಿಲ್ಲ’ ಎಂದು ಕಿಡಿಕಾರಿದರು.

‘ಮಾಧ್ಯಮಗಳಲ್ಲಿ ಅದಾನಿ ಮತ್ತು ರಫೇಲ್ ಬಗ್ಗೆ ಯಾವುದೇ ಚರ್ಚೆ ಇಲ್ಲ. ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ಫ್ರಾನ್ಸ್ ಹೇಳಿದೆ. ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ, ನಿರುದ್ಯೋಗದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅಮಾನತಾಗಿರುವ ನಮ್ಮ ಸಂಸದರು ದುಃಖಿತರಾಗಿದ್ದಾರೆ. ಅಲ್ಲಿ ಕುಳಿತು ನೀವು ಚರ್ಚಿಸುತ್ತಿದ್ದೀರಿ’ ಎಂದು ಅವರು ಹೇಳಿದರು.

ಗಮನ ಬೇರೆಡೆ ಸೆಳೆಯುತ್ತಿರುವ ಬಿಜೆಪಿ:

ಡಿ.13, 22ರಂದು ಲೋಕಸಭೆಗೆ ಇಬ್ಬರು ನುಸುಳುಕೋರರ ಪ್ರವೇಶವನ್ನು ಬಿಜೆಪಿ ಸಂಸದರೊಬ್ಬರು ಹೇಗೆ ಸುಗಮಗೊಳಿಸಿದರು ಎಂಬ ಬಗ್ಗೆ ಗಮನ ಬೇರೆಡೆ ಸೆಳೆಯಲು ‘ಮಿಮಿಕ್ರಿ ಅಲ್ಲದ ವಿಷಯ’ವನ್ನು ಬಿಜೆಪಿ ವಿವಾದ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಮಿಮಿಕ್ರಿ ಅಲ್ಲದ ವಿಷಯವನ್ನು ವಿವಾದ ಮಾಡಲು ಇಡೀ ಮೋದಿ ಪರಿಸರ ವ್ಯವಸ್ಥೆಯು ಉತ್ಸಾಹಭರಿತವಾಗಿದೆ. ಆದರೆ, ಮೈಸೂರಿನ ಬಿಜೆಪಿ ಸಂಸದರೊಬ್ಬರು ಏಕೆ ಮತ್ತು ಹೇಗೆ ಲೋಕಸಭೆಗೆ ಇಬ್ಬರು ನುಸುಳುಕೋರರು ಪ್ರವೇಶವನ್ನು ಸುಗಮಗೊಳಿಸಿದರು ಎಂಬ ನೈಜ ವಿಷಯದ ಬಗ್ಗೆ ಮೌನವಾಗಿದೆ. ಈಗ ಅವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸಂಪೂರ್ಣ ನ್ಯಾಯಸಮ್ಮತ ಬೇಡಿಕೆಗಾಗಿ 142 ಸಂಸದರ ಅಮಾನತು ಕುರಿತು ಅವರ ಇಡೀ ಪರಿಸರ ವ್ಯವಸ್ಥೆಯು ಮೌನವಾಗಿದೆ. ಬುಧವಾರ ಮತ್ತೆ ಇಬ್ಬರು ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಒಟ್ಟು ಸಂಖ್ಯೆ 143ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದ್ದಾರೆ.

ತನ್ನ ಕುರಿತು ಅನುಕರಣೆ ಮಾಡಿದ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಧನ್ಖರ್, ‘ಸೆರಾಂಪೋರ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮಿಮಿಕ್ರಿ ಮತ್ತು ರಾಹುಲ್ ಗಾಂಧಿ ಅವರ ಚಿತ್ರೀಕರಣವು ರೈತರು ಮತ್ತು ಜಾಟ್ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ’ ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಉದ್ದೇಶಿಸಿ ಮಾತನಾಡಿದ ಧನ್ಖರ್, ‘ಚಿದಂಬರಂ ನೀವು ತುಂಬಾ ಹಿರಿಯ ಸದಸ್ಯರು. ನಿಮ್ಮ ಪಕ್ಷದ ಹಿರಿಯ ನಾಯಕ, ಸಂಸದರೊಬ್ಬರು ನನ್ನನ್ನು ಗೇಲಿ ಮಾಡುವ ಕೃತ್ಯವನ್ನು ಚಿತ್ರೀಕರಿಸಿದಾಗ ನನಗೆ ಏನನಿಸಿತು ಎಂದು ಊಹಿಸಿ. ಇದು ಕೇವಲ ರೈತ ಅಥವಾ ಸಮುದಾಯದ ಅವಮಾನವಲ್ಲ, ಇದು ರಾಜ್ಯಸಭಾ ಅಧ್ಯಕ್ಷ ಸ್ಥಾನಕ್ಕೆ ಅಗೌರವ. ಅದೂ ಕೂಡ ದೇಶವನ್ನು ದೀರ್ಘಕಾಲ ಆಳಿದ ಪಕ್ಷದಿಂದ ನನಗೆ ತುಂಬಾ ನೋವಾಗಿದೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ; ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...