Homeಮುಖಪುಟ‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

- Advertisement -
- Advertisement -

ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರನ್ನು ಅನುಕರಿಸುವ ವಿಡಿಯೋವನ್ನು ನಾನು ಎಲ್ಲಿಯೂ ಹಂಚಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಸಭೆ ಕಲಾಪದಲ್ಲಿನ ಉಪರಾಷ್ಟ್ರಪತಿಯವರ ನಡೆ-ನುಡಿಯನ್ನು ಅನುಕರಿಸಿದ ಟಿಎಂಸಿ ಸಂಸದರ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು.

‘ಯಾರು ಮತ್ತು ಹೇಗೆ ಅವಮಾನಿಸಿದರು?’ ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, ‘ಸಂಸದರು ಅಲ್ಲಿ ಕುಳಿತಿದ್ದರು, ನಾನು ಅವರ ವೀಡಿಯೋವನ್ನು ನನ್ನ ಫೋನ್‌ನಲ್ಲಿ ತೆಗೆದುಕೊಂಡಿದ್ದೇನೆ. ಮಾಧ್ಯಮಗಳು ಅದನ್ನು ತೋರಿಸುತ್ತಾ ಟೀಕೆಗಳನ್ನು ಮಾಡುತ್ತಿವೆ. ಮೋದಿಯವರು ಕೂಡ ಹಲವು ಟೀಕೆಗಳನ್ನು ಮಾಡುತ್ತಿದ್ದಾರೆ, ಯಾರೂ ಏನನ್ನೂ ಹೇಳಲಿಲ್ಲ’ ಎಂದು ಅವರು ಹೇಳಿದರು.

‘ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿವ್ಯಕ್ತಿ ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಈ ವಿವಾದದ ಕುರಿತು ಮಾಧ್ಯಮಗಳ ಪಕ್ಷಪಾತದ ವಿರುದ್ಧ ಆಕ್ರೋಶ ಹೊರಹಾಕಿರುವ ರಾಹುಲ್ ಗಾಂಧಿ, ‘ಉಭಯ ಸದನಗಳಿಂದ 150 ಸಂಸದರನ್ನು ಹೊರಹಾಕಲಾಗಿದೆ. ಆ ಬಗ್ಗೆ ಮಾಧ್ಯಮಗಳು ಮಾತನಾಡುತ್ತಲೇ ಇಲ್ಲ. ಅದಾನಿ ಮತ್ತು ರಫೇಲ್ ವಿಷಯಗಳ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ಚರ್ಚೆಯಾಗಿಲ್ಲ’ ಎಂದು ಕಿಡಿಕಾರಿದರು.

‘ಮಾಧ್ಯಮಗಳಲ್ಲಿ ಅದಾನಿ ಮತ್ತು ರಫೇಲ್ ಬಗ್ಗೆ ಯಾವುದೇ ಚರ್ಚೆ ಇಲ್ಲ. ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ಫ್ರಾನ್ಸ್ ಹೇಳಿದೆ. ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ, ನಿರುದ್ಯೋಗದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅಮಾನತಾಗಿರುವ ನಮ್ಮ ಸಂಸದರು ದುಃಖಿತರಾಗಿದ್ದಾರೆ. ಅಲ್ಲಿ ಕುಳಿತು ನೀವು ಚರ್ಚಿಸುತ್ತಿದ್ದೀರಿ’ ಎಂದು ಅವರು ಹೇಳಿದರು.

ಗಮನ ಬೇರೆಡೆ ಸೆಳೆಯುತ್ತಿರುವ ಬಿಜೆಪಿ:

ಡಿ.13, 22ರಂದು ಲೋಕಸಭೆಗೆ ಇಬ್ಬರು ನುಸುಳುಕೋರರ ಪ್ರವೇಶವನ್ನು ಬಿಜೆಪಿ ಸಂಸದರೊಬ್ಬರು ಹೇಗೆ ಸುಗಮಗೊಳಿಸಿದರು ಎಂಬ ಬಗ್ಗೆ ಗಮನ ಬೇರೆಡೆ ಸೆಳೆಯಲು ‘ಮಿಮಿಕ್ರಿ ಅಲ್ಲದ ವಿಷಯ’ವನ್ನು ಬಿಜೆಪಿ ವಿವಾದ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಮಿಮಿಕ್ರಿ ಅಲ್ಲದ ವಿಷಯವನ್ನು ವಿವಾದ ಮಾಡಲು ಇಡೀ ಮೋದಿ ಪರಿಸರ ವ್ಯವಸ್ಥೆಯು ಉತ್ಸಾಹಭರಿತವಾಗಿದೆ. ಆದರೆ, ಮೈಸೂರಿನ ಬಿಜೆಪಿ ಸಂಸದರೊಬ್ಬರು ಏಕೆ ಮತ್ತು ಹೇಗೆ ಲೋಕಸಭೆಗೆ ಇಬ್ಬರು ನುಸುಳುಕೋರರು ಪ್ರವೇಶವನ್ನು ಸುಗಮಗೊಳಿಸಿದರು ಎಂಬ ನೈಜ ವಿಷಯದ ಬಗ್ಗೆ ಮೌನವಾಗಿದೆ. ಈಗ ಅವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸಂಪೂರ್ಣ ನ್ಯಾಯಸಮ್ಮತ ಬೇಡಿಕೆಗಾಗಿ 142 ಸಂಸದರ ಅಮಾನತು ಕುರಿತು ಅವರ ಇಡೀ ಪರಿಸರ ವ್ಯವಸ್ಥೆಯು ಮೌನವಾಗಿದೆ. ಬುಧವಾರ ಮತ್ತೆ ಇಬ್ಬರು ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಒಟ್ಟು ಸಂಖ್ಯೆ 143ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದ್ದಾರೆ.

ತನ್ನ ಕುರಿತು ಅನುಕರಣೆ ಮಾಡಿದ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಧನ್ಖರ್, ‘ಸೆರಾಂಪೋರ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮಿಮಿಕ್ರಿ ಮತ್ತು ರಾಹುಲ್ ಗಾಂಧಿ ಅವರ ಚಿತ್ರೀಕರಣವು ರೈತರು ಮತ್ತು ಜಾಟ್ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ’ ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಉದ್ದೇಶಿಸಿ ಮಾತನಾಡಿದ ಧನ್ಖರ್, ‘ಚಿದಂಬರಂ ನೀವು ತುಂಬಾ ಹಿರಿಯ ಸದಸ್ಯರು. ನಿಮ್ಮ ಪಕ್ಷದ ಹಿರಿಯ ನಾಯಕ, ಸಂಸದರೊಬ್ಬರು ನನ್ನನ್ನು ಗೇಲಿ ಮಾಡುವ ಕೃತ್ಯವನ್ನು ಚಿತ್ರೀಕರಿಸಿದಾಗ ನನಗೆ ಏನನಿಸಿತು ಎಂದು ಊಹಿಸಿ. ಇದು ಕೇವಲ ರೈತ ಅಥವಾ ಸಮುದಾಯದ ಅವಮಾನವಲ್ಲ, ಇದು ರಾಜ್ಯಸಭಾ ಅಧ್ಯಕ್ಷ ಸ್ಥಾನಕ್ಕೆ ಅಗೌರವ. ಅದೂ ಕೂಡ ದೇಶವನ್ನು ದೀರ್ಘಕಾಲ ಆಳಿದ ಪಕ್ಷದಿಂದ ನನಗೆ ತುಂಬಾ ನೋವಾಗಿದೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ; ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...