Homeಮುಖಪುಟ‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

- Advertisement -
- Advertisement -

ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರನ್ನು ಅನುಕರಿಸುವ ವಿಡಿಯೋವನ್ನು ನಾನು ಎಲ್ಲಿಯೂ ಹಂಚಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಸಭೆ ಕಲಾಪದಲ್ಲಿನ ಉಪರಾಷ್ಟ್ರಪತಿಯವರ ನಡೆ-ನುಡಿಯನ್ನು ಅನುಕರಿಸಿದ ಟಿಎಂಸಿ ಸಂಸದರ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು.

‘ಯಾರು ಮತ್ತು ಹೇಗೆ ಅವಮಾನಿಸಿದರು?’ ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, ‘ಸಂಸದರು ಅಲ್ಲಿ ಕುಳಿತಿದ್ದರು, ನಾನು ಅವರ ವೀಡಿಯೋವನ್ನು ನನ್ನ ಫೋನ್‌ನಲ್ಲಿ ತೆಗೆದುಕೊಂಡಿದ್ದೇನೆ. ಮಾಧ್ಯಮಗಳು ಅದನ್ನು ತೋರಿಸುತ್ತಾ ಟೀಕೆಗಳನ್ನು ಮಾಡುತ್ತಿವೆ. ಮೋದಿಯವರು ಕೂಡ ಹಲವು ಟೀಕೆಗಳನ್ನು ಮಾಡುತ್ತಿದ್ದಾರೆ, ಯಾರೂ ಏನನ್ನೂ ಹೇಳಲಿಲ್ಲ’ ಎಂದು ಅವರು ಹೇಳಿದರು.

‘ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿವ್ಯಕ್ತಿ ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಈ ವಿವಾದದ ಕುರಿತು ಮಾಧ್ಯಮಗಳ ಪಕ್ಷಪಾತದ ವಿರುದ್ಧ ಆಕ್ರೋಶ ಹೊರಹಾಕಿರುವ ರಾಹುಲ್ ಗಾಂಧಿ, ‘ಉಭಯ ಸದನಗಳಿಂದ 150 ಸಂಸದರನ್ನು ಹೊರಹಾಕಲಾಗಿದೆ. ಆ ಬಗ್ಗೆ ಮಾಧ್ಯಮಗಳು ಮಾತನಾಡುತ್ತಲೇ ಇಲ್ಲ. ಅದಾನಿ ಮತ್ತು ರಫೇಲ್ ವಿಷಯಗಳ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ಚರ್ಚೆಯಾಗಿಲ್ಲ’ ಎಂದು ಕಿಡಿಕಾರಿದರು.

‘ಮಾಧ್ಯಮಗಳಲ್ಲಿ ಅದಾನಿ ಮತ್ತು ರಫೇಲ್ ಬಗ್ಗೆ ಯಾವುದೇ ಚರ್ಚೆ ಇಲ್ಲ. ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ಫ್ರಾನ್ಸ್ ಹೇಳಿದೆ. ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ, ನಿರುದ್ಯೋಗದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅಮಾನತಾಗಿರುವ ನಮ್ಮ ಸಂಸದರು ದುಃಖಿತರಾಗಿದ್ದಾರೆ. ಅಲ್ಲಿ ಕುಳಿತು ನೀವು ಚರ್ಚಿಸುತ್ತಿದ್ದೀರಿ’ ಎಂದು ಅವರು ಹೇಳಿದರು.

ಗಮನ ಬೇರೆಡೆ ಸೆಳೆಯುತ್ತಿರುವ ಬಿಜೆಪಿ:

ಡಿ.13, 22ರಂದು ಲೋಕಸಭೆಗೆ ಇಬ್ಬರು ನುಸುಳುಕೋರರ ಪ್ರವೇಶವನ್ನು ಬಿಜೆಪಿ ಸಂಸದರೊಬ್ಬರು ಹೇಗೆ ಸುಗಮಗೊಳಿಸಿದರು ಎಂಬ ಬಗ್ಗೆ ಗಮನ ಬೇರೆಡೆ ಸೆಳೆಯಲು ‘ಮಿಮಿಕ್ರಿ ಅಲ್ಲದ ವಿಷಯ’ವನ್ನು ಬಿಜೆಪಿ ವಿವಾದ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಮಿಮಿಕ್ರಿ ಅಲ್ಲದ ವಿಷಯವನ್ನು ವಿವಾದ ಮಾಡಲು ಇಡೀ ಮೋದಿ ಪರಿಸರ ವ್ಯವಸ್ಥೆಯು ಉತ್ಸಾಹಭರಿತವಾಗಿದೆ. ಆದರೆ, ಮೈಸೂರಿನ ಬಿಜೆಪಿ ಸಂಸದರೊಬ್ಬರು ಏಕೆ ಮತ್ತು ಹೇಗೆ ಲೋಕಸಭೆಗೆ ಇಬ್ಬರು ನುಸುಳುಕೋರರು ಪ್ರವೇಶವನ್ನು ಸುಗಮಗೊಳಿಸಿದರು ಎಂಬ ನೈಜ ವಿಷಯದ ಬಗ್ಗೆ ಮೌನವಾಗಿದೆ. ಈಗ ಅವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸಂಪೂರ್ಣ ನ್ಯಾಯಸಮ್ಮತ ಬೇಡಿಕೆಗಾಗಿ 142 ಸಂಸದರ ಅಮಾನತು ಕುರಿತು ಅವರ ಇಡೀ ಪರಿಸರ ವ್ಯವಸ್ಥೆಯು ಮೌನವಾಗಿದೆ. ಬುಧವಾರ ಮತ್ತೆ ಇಬ್ಬರು ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಒಟ್ಟು ಸಂಖ್ಯೆ 143ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದ್ದಾರೆ.

ತನ್ನ ಕುರಿತು ಅನುಕರಣೆ ಮಾಡಿದ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಧನ್ಖರ್, ‘ಸೆರಾಂಪೋರ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮಿಮಿಕ್ರಿ ಮತ್ತು ರಾಹುಲ್ ಗಾಂಧಿ ಅವರ ಚಿತ್ರೀಕರಣವು ರೈತರು ಮತ್ತು ಜಾಟ್ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ’ ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಉದ್ದೇಶಿಸಿ ಮಾತನಾಡಿದ ಧನ್ಖರ್, ‘ಚಿದಂಬರಂ ನೀವು ತುಂಬಾ ಹಿರಿಯ ಸದಸ್ಯರು. ನಿಮ್ಮ ಪಕ್ಷದ ಹಿರಿಯ ನಾಯಕ, ಸಂಸದರೊಬ್ಬರು ನನ್ನನ್ನು ಗೇಲಿ ಮಾಡುವ ಕೃತ್ಯವನ್ನು ಚಿತ್ರೀಕರಿಸಿದಾಗ ನನಗೆ ಏನನಿಸಿತು ಎಂದು ಊಹಿಸಿ. ಇದು ಕೇವಲ ರೈತ ಅಥವಾ ಸಮುದಾಯದ ಅವಮಾನವಲ್ಲ, ಇದು ರಾಜ್ಯಸಭಾ ಅಧ್ಯಕ್ಷ ಸ್ಥಾನಕ್ಕೆ ಅಗೌರವ. ಅದೂ ಕೂಡ ದೇಶವನ್ನು ದೀರ್ಘಕಾಲ ಆಳಿದ ಪಕ್ಷದಿಂದ ನನಗೆ ತುಂಬಾ ನೋವಾಗಿದೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ; ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...