Homeಮುಖಪುಟಬಿಹಾರದಲ್ಲಿ 'ವೋಟರ್ ಅಧಿಕಾರ್' ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು...

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಬಿಹಾರದಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರಾ’ಗೆ(ಮತದಾರನ ಅಧಿಕಾರ ಯಾತ್ರೆ) ಸಸಾರಾಮ್‌ನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ, 2024ರ ಲೋಕಸಭೆ ಚುನಾವಣೆಯಲ್ಲಿ ದೇಶದಾದ್ಯಂತ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ,”ಬಿಹಾರದಲ್ಲಿ ‘ಮತ ಕಳ್ಳತನ’ ಮಾಡುವುದಕ್ಕೆ ಬಿಜೆಪಿಗರು ಮತ್ತು ಚುನಾವಣಾ ಆಯೋಗಕ್ಕೆ ನಾವು ಅವಕಾಶ ನೀಡುವುದಿಲ್ಲ. ಬಡವರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ದೇಶದಾದ್ಯಂತ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ. ನಮ್ಮದು ಸಂವಿಧಾನ ಉಳಿಸುವ ಹೋರಾಟವಾಗಿದ್ದರೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ” ಎಂದು ರಾಹುಲ್ ಗಾಂಧಿ ದೂರಿದ್ದಾರೆ.

‘ವೋಟ್‌ ಚೋರಿ’ (ಮತಗಳ್ಳತನ) ಬಗ್ಗೆ ನಾವು ಧ್ವನಿ ಎತ್ತಿದ ಬೆನ್ನಲ್ಲೇ ಅಫಿಡವಿಟ್ ಸಲ್ಲಿಸಲು ಚುನಾವಣಾ ಆಯೋಗ ನನ್ನನ್ನು ಕೇಳಿದೆ. ಆದರೆ, ಅಫಿಡವಿಟ್ ಸಲ್ಲಿಸುವ ಕುರಿತು ಬಿಜೆಪಿ ನಾಯಕರನ್ನು ಆಯೋಗ ಪ್ರಶ್ನಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ವೋಟರ್ ಅಧಿಕಾರ್ ಯಾತ್ರಾ 16 ದಿನಗಳಲ್ಲಿ 1,300 ಕಿಲೋಮೀಟರ್ ಕ್ರಮಿಸಲಿದ್ದು, ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಬೃಹತ್ ರ‍್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಅಲ್ಲಿನ ಕಾರ್ಯಕ್ರಮದಲ್ಲಿ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಯಾತ್ರೆಯ ವಿವರಗಳನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “16 ದಿನಗಳು, 20ಕ್ಕೂ ಹೆಚ್ಚು ಜಿಲ್ಲೆಗಳು, 1,300ಕ್ಕೂ ಹೆಚ್ಚು ಕಿ.ಮೀ ದೂರ ಮತದಾರರ ಹಕ್ಕುಗಳ ಯಾತ್ರೆಯೊಂದಿಗೆ ನಾವು ಜನರ ನಡುವೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಇದು ಅತ್ಯಂತ ಮೂಲಭೂತ ಪ್ರಜಾಪ್ರಭುತ್ವದ ಹಕ್ಕನ್ನು ರಕ್ಷಿಸುವ ಹೋರಾಟ.’ಒಬ್ಬ ವ್ಯಕ್ತಿ, ಒಂದು ಮತ. ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ” ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಸಸಾರಾಮ್‌ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲಾಲೂ ಪ್ರಸಾದ್ ಯಾದವ್, ತೇಜಸ್ವಿ ಯಾದವ್, ದೀಂಪಕರ್ ಭಟ್ಟಾಚಾರ್ಯ ಸೇರಿದಂತೆ ಪ್ರಮುಖರು ಇದ್ದರು.

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...