Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಕಾರ್ಮಿಕರ ಜೊತೆ ಸಮಾಲೋಚನೆಯನ್ನು ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪುನರಾರಂಭಿಸಿದ್ದಾರೆ,  ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಿನ್ನೆ ಯಾತ್ರೆಯು ಮಾಲ್ಡಾ ಜಿಲ್ಲೆಯ ಹರಿಶ್ಚಂದ್ರಪುರದಿಂದ ಪಶ್ಚಿಮ ಬಂಗಾಳಕ್ಕೆ ಮರುಪ್ರವೇಶಿಸುತ್ತಿದ್ದಂತೆ, ಸಿಪಿಐ(ಎಂ) ಕಾರ್ಯಕರ್ತರು ಮತ್ತು ಬೆಂಬಲಿಗರು ಕಾಂಗ್ರೆಸ್‌ ಯಾತ್ರೆಯಲ್ಲಿ ಸೇರಿಕೊಂಡಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಾಲ್ಡಾ ಜಿಲ್ಲೆಯಲ್ಲಿ ಯಾತ್ರೆಯ ಮಾರ್ಗದುದ್ದಕ್ಕೂ ಸಿಪಿಐ(ಎಂ) ಬೆಂಬಲಿಗರು ಪಕ್ಷದ ಕೆಂಪು ಬಾವುಟಗಳನ್ನು ಹಿಡಿದು ರಾಹುಲ್‌ ಗಾಂಧಿ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ರೀತಿಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇಂದು “ಅಭೂತಪೂರ್ವ” ಎಂದು ಬಣ್ಣಿಸಿದ್ದಾರೆ. ಪ.ಬಂಗಾಳದಲ್ಲಿ ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಈ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಕಾರಿಗೆ ಕಲ್ಲು ತೂರಾಟ ನಡೆಸಲಾಗಿದೆಯಾ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ವಾಹನದ ಮುಂದೆ ಬರುತ್ತಿದ್ದಂತೆ ಹಠಾತ್ ಬ್ರೇಕ್ ಹಾಕಿದಾಗ ರಾಹುಲ್ ಗಾಂಧಿ ಅವರ ಕಾರಿನ ಹಿಂದಿನ ಕಿಟಕಿ ಗಾಜು ಪುಡಿಪುಡಿಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿಕೊಂಡಿದೆ. ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಜಿ ಅವರನ್ನು ಭೇಟಿಯಾಗಲು ಭಾರಿ ಜನರು ಬಂದಿದ್ದರು. ಈ ಗುಂಪಿನಲ್ಲಿ, ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಾಹುಲ್ ಜಿ ಅವರನ್ನು ಭೇಟಿ ಮಾಡಲು ಅವರ ಕಾರಿನ ಮುಂದೆ ಬಂದರು, ಇದರಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಲಾಯಿತು. ಆಗ ಭದ್ರತಾ ವೃತ್ತದಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜಿಗೆ ಹಾನಿಯಾಗಿದೆ. ಜನನಾಯಕ ರಾಹುಲ್ ಗಾಂಧಿ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಸಾರ್ವಜನಿಕರು ಅವರೊಂದಿಗಿದ್ದಾರೆ, ಸಾರ್ವಜನಿಕರು ಅವರನ್ನು ಸುರಕ್ಷಿತವಾಗಿರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಪ.ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿಗೆ “ಕಲ್ಲು ತೂರಾಟ” ಮಾಡದ್ದಾರೆ ಎಂದು ಹೇಳಿದ್ದರು.

ಈ ಕುರಿತು ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಟೆ ಅವರು ಸ್ಪಷ್ಟನೆಯನ್ನು ನೀಡಿದ್ದು, ಸುಳ್ಳು ಸುದ್ದಿಗಳಿಗೆ ಸ್ಪಷ್ಟೀಕರಣದ ಅಗತ್ಯವಿದೆ. ರಾಹುಲ್ ಜೀ ಅವರನ್ನು ಭೇಟಿಯಾಗಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಅವರನ್ನು ಭೇಟಿ ಮಾಡಲು ಮುಂದಾದಾಗ, ಕಾರು ನಿಲ್ಲಿಸಬೇಕಾಯಿತು. ಸೆಕ್ಯುರಿಟಿ ಸರ್ಕಲ್ ನಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜು ಮುರಿದಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದ್ದು, 67 ದಿನಗಳಲ್ಲಿ 6,713 ಕಿಲೋಮೀಟರ್ ಕ್ರಮಿಸಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಯಾತ್ರೆ ಸಾಗಿ ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...