Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಕಾರ್ಮಿಕರ ಜೊತೆ ಸಮಾಲೋಚನೆಯನ್ನು ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪುನರಾರಂಭಿಸಿದ್ದಾರೆ,  ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಿನ್ನೆ ಯಾತ್ರೆಯು ಮಾಲ್ಡಾ ಜಿಲ್ಲೆಯ ಹರಿಶ್ಚಂದ್ರಪುರದಿಂದ ಪಶ್ಚಿಮ ಬಂಗಾಳಕ್ಕೆ ಮರುಪ್ರವೇಶಿಸುತ್ತಿದ್ದಂತೆ, ಸಿಪಿಐ(ಎಂ) ಕಾರ್ಯಕರ್ತರು ಮತ್ತು ಬೆಂಬಲಿಗರು ಕಾಂಗ್ರೆಸ್‌ ಯಾತ್ರೆಯಲ್ಲಿ ಸೇರಿಕೊಂಡಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಾಲ್ಡಾ ಜಿಲ್ಲೆಯಲ್ಲಿ ಯಾತ್ರೆಯ ಮಾರ್ಗದುದ್ದಕ್ಕೂ ಸಿಪಿಐ(ಎಂ) ಬೆಂಬಲಿಗರು ಪಕ್ಷದ ಕೆಂಪು ಬಾವುಟಗಳನ್ನು ಹಿಡಿದು ರಾಹುಲ್‌ ಗಾಂಧಿ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ರೀತಿಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇಂದು “ಅಭೂತಪೂರ್ವ” ಎಂದು ಬಣ್ಣಿಸಿದ್ದಾರೆ. ಪ.ಬಂಗಾಳದಲ್ಲಿ ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಈ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಕಾರಿಗೆ ಕಲ್ಲು ತೂರಾಟ ನಡೆಸಲಾಗಿದೆಯಾ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ವಾಹನದ ಮುಂದೆ ಬರುತ್ತಿದ್ದಂತೆ ಹಠಾತ್ ಬ್ರೇಕ್ ಹಾಕಿದಾಗ ರಾಹುಲ್ ಗಾಂಧಿ ಅವರ ಕಾರಿನ ಹಿಂದಿನ ಕಿಟಕಿ ಗಾಜು ಪುಡಿಪುಡಿಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿಕೊಂಡಿದೆ. ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಜಿ ಅವರನ್ನು ಭೇಟಿಯಾಗಲು ಭಾರಿ ಜನರು ಬಂದಿದ್ದರು. ಈ ಗುಂಪಿನಲ್ಲಿ, ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಾಹುಲ್ ಜಿ ಅವರನ್ನು ಭೇಟಿ ಮಾಡಲು ಅವರ ಕಾರಿನ ಮುಂದೆ ಬಂದರು, ಇದರಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಲಾಯಿತು. ಆಗ ಭದ್ರತಾ ವೃತ್ತದಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜಿಗೆ ಹಾನಿಯಾಗಿದೆ. ಜನನಾಯಕ ರಾಹುಲ್ ಗಾಂಧಿ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಸಾರ್ವಜನಿಕರು ಅವರೊಂದಿಗಿದ್ದಾರೆ, ಸಾರ್ವಜನಿಕರು ಅವರನ್ನು ಸುರಕ್ಷಿತವಾಗಿರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಪ.ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿಗೆ “ಕಲ್ಲು ತೂರಾಟ” ಮಾಡದ್ದಾರೆ ಎಂದು ಹೇಳಿದ್ದರು.

ಈ ಕುರಿತು ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಟೆ ಅವರು ಸ್ಪಷ್ಟನೆಯನ್ನು ನೀಡಿದ್ದು, ಸುಳ್ಳು ಸುದ್ದಿಗಳಿಗೆ ಸ್ಪಷ್ಟೀಕರಣದ ಅಗತ್ಯವಿದೆ. ರಾಹುಲ್ ಜೀ ಅವರನ್ನು ಭೇಟಿಯಾಗಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಅವರನ್ನು ಭೇಟಿ ಮಾಡಲು ಮುಂದಾದಾಗ, ಕಾರು ನಿಲ್ಲಿಸಬೇಕಾಯಿತು. ಸೆಕ್ಯುರಿಟಿ ಸರ್ಕಲ್ ನಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜು ಮುರಿದಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದ್ದು, 67 ದಿನಗಳಲ್ಲಿ 6,713 ಕಿಲೋಮೀಟರ್ ಕ್ರಮಿಸಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಯಾತ್ರೆ ಸಾಗಿ ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...