HomeUncategorizedಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ನಡೆಸಲಿದ್ದಾರೆ.

- Advertisement -
- Advertisement -

ವಿದಾದಿತ ಕೃಷಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಈ ಕಾಯ್ದೆಗಳ ವಿರುದ್ಧ ರೈಲ್ ರೋಕೋ, ಪಂಜಾಬ್‌ನಲ್ಲಿ ಬಂದ್‌ಗಳು ನಡೆದವು.  ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದ, ಮಾಜಿ ಸಚಿವೆ ಹರ್ಸಿಮ್ರತ್ ಕೌರ್‌ ಬಾದಲ್ ನಿನ್ನೆ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಿ ಜೈಲು ಸೇರಿ ಬಿಡುಗಡೆಯಾಗಿದ್ದಾರೆ. ಇದೀಗ ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲಿದೆ.

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ನಡೆಸಲಿದ್ದಾರೆ. ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರವರೆಗೆ ರ್‍ಯಾಲಿ ನಿರ್ಧರಿಸಲಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್, ರಾಹುಲ್ ಗಾಂಧಿ ಟ್ರ್ಯಾಕ್ಟರ್ ರ್‍ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಅಕ್ಟೋಬರ್ 4, 5, 6 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಖರ್, ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಮತ್ತು ಎಲ್ಲಾ ರಾಜ್ಯ ಸಚಿವರು ಮತ್ತು ಪಕ್ಷದ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಟ್ರ್ಯಾಕ್ಟರ್ ರ್‍ಯಾಲಿಗಳಿಗೆ ರೈತರ ಸಂಘಟನೆಗಳು ಬೆಂಬಲ ನೀಡಲಿದ್ದು, ಮೂರು ದಿನಗಳಲ್ಲಿ 50 ಕಿ.ಮೀ ಗಿಂತಲೂ ಹೆಚ್ಚು ದೂರ ಕ್ರಮಿಸಲಿದೆ. ರ್‍ಯಾಲಿಗಳು ಪ್ರತಿದಿನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕೊವೀಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ಕೇಂದ್ರದ ಕೃಷಿ ಮಸೂದೆಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ. ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಲಾಭದಾಯಕವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಮೋದಿ ಸರ್ಕಾರದ ತಪ್ಪಾದ ಜಿಎಸ್‌ಟಿಯು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್ಎಂಇ) ನಾಶಪಡಿಸಿತು. ಈಗ ಹೊಸ ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುತ್ತವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು.


ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...