Homeಮುಖಪುಟಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ತಮ್ಮ ಮನೆ ತಲುಪಲು ಪ್ರಯತ್ನಿಸುತ್ತಿರುವ ವಲಸಿಗರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

ದೇಶಾದ್ಯಂತದ ಜನರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ಅವರಿಗೆ ಆಹಾರ ಅಥವಾ ಆಶ್ರಯ ನೀಡುವ ಮೂಲಕ ಸಹಾಯ ಮಾಡಬೇಕೆಂದು ರಾಹುಲ್ ಗಾಂಧಿ ಆಗ್ರಹಿಸಿದರು. “ಹಸಿವಿನಿಂದ ಬಳಲುತ್ತಿರುವ ನಮ್ಮ ನೂರಾರು ಸಹೋದರರು ಮತ್ತು ಸಹೋದರಿಯರು ತಮ್ಮ ಕುಟುಂಬಗಳೊಂದಿಗೆ ಕಾಲ್ನಡಿಗೆಯಲ್ಲಿ ಹಳ್ಳಿಗಳ ಮನೆಗಳಿಗೆ ತೆರಳುವಂತಹ ಪರಿಸ್ಥಿತಿ ಬಂದಿದೆ. ಅವರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ನಿಮಗೆ ಸಾಧ್ಯವಾದರೆ ಅವರಿಗೆ ಆಹಾರ, ಆಶ್ರಯ ನೀಡುವ ಮೂಲಕ ಅವರಿಗೆ ಸಹಾಯ ಮಾಡಿ … ವಿಶೇಷ ಮನವಿ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ವಿಶೇಷ ಮನವಿ ಮಾಡುತ್ತಿದ್ದೇನೆ. ಜೈ ಹಿಂದ್! ” ಎಂದು ಟ್ವೀಟ್ ಮಾಡಿದ್ದಾರೆ.

 

ಕೊರೋನ ವೈರಸ್ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಪ್ರಯಾಣಿಕರ ರೈಲುಗಳು ಮತ್ತು ಅಂತರರಾಜ್ಯ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳನ್ನು ಮುಚ್ಚಲಾಗಿದೆ. ದೇಶಾದ್ಯಂತ ಗರಿಷ್ಠ ಸಂಖ್ಯೆಯ ಕಾರ್ಮಿಕರನ್ನು ಕಳುಹಿಸುವ ಬಂಗಾಳ, ಬಿಹಾರ ಮತ್ತು ಒಡಿಶಾ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉಪಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ ‘ಬ್ರಿಯಾನ್ ಟ್ವೀಟ್ ಮಾಡಿ “ಸಾಗರದಲ್ಲಿ ಒಂದು ಹನಿ … ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೊಳಗಾದರು. ಚೆನ್ನೈನಲ್ಲಿ ಸಿಕ್ಕಿಬಿದ್ದ ಬಂಗಾಳದ 40 ಮಂದಿ ನಮ್ಮನ್ನು ಸಂಪರ್ಕಿಸಿದಾಗ ನಾವು ಎಂಕೆ ಸ್ಟಾಲಿನ್ ಅವರನ್ನು ತಲುಪಿದೆವು, ಅವರ ತಂಡ ವಲಸಿಗರನ್ನು ಭೇಟಿಯಾಗಿ ಕಾಳಜಿ ವಹಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿಗಳ ಅಡಿಯಲ್ಲಿ ವಿವಿಧ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರಿಗೆ ಆಹಾರ / ಆಶ್ರಯ ನೀಡಲಾಗುತ್ತಿದೆ.” ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಈ ಜನರಿಗೆ ಸಾರಿಗೆ ಸೌಲಭ್ಯವನ್ನು ಖಾತ್ರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು. “ಕೆಲವು ಕಾರ್ಮಿಕರು ಕಾಲ್ನಡಿಗೆಯಲ್ಲಿ ಮನೆಗೆ ಹೊರಡುತ್ತಿದ್ದಾರೆ. ಕಳೆದ ರಾತ್ರಿ ಕೆಲವು ನೋವಿನ ಚಿತ್ರಗಳು ಹೊರಬಂದಿದೆ. ಕಾರ್ಮಿಕರನ್ನು ಮನೆಗೆ ಕಳುಹಿಸಲು ಕೈಗೊಂಡ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಎಂಬ ವಿನಂತಿ. ಹೆಚ್ಚಿನ ಸಂಖ್ಯೆಯ ಜನರು ಸಿಕ್ಕಿಹಾಕಿಕೊಂಡರೆ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ತಾತ್ಕಾಲಿಕ ಆಶ್ರಯ ಮನೆಗಳಾಗಿ ಬಳಸಬೇಕು, ನಂತರ ಕಾರ್ಮಿಕರನ್ನು ಮನೆಗೆ ಕಳುಹಿಸಬಹುದು “ಎಂದಿದ್ದಾರೆ.

ಕೇರಳ ಹಣಕಾಸು ಸಚಿವರಾದ ತೋಮಸ್ ಐಸಾಕ್ ಟ್ವೀಟ್ ಮಾಡಿ “ವಲಸೆ ಕಾರ್ಮಿಕ ಕುಟುಂಬಗಳು ಮನೆಗೆ ನಡೆಯುವ ಮಾಡುವ ಚಿತ್ರಗಳು ವಿಭಜನಾ ದಿನಗಳನ್ನು ನೆನಪಿಸುತ್ತವೆ” ಎಂದಿದ್ದಾರೆ.

ಇಲ್ಲಿಯವರೆಗೆ, ಭಾರತವು ಕಳೆದ 24 ಗಂಟೆಗಳಲ್ಲಿ 149 ಹೊಸ ಕೊರೊನ ಪ್ರಕರಣಗಳೊಂದಿಗೆ ಅತಿ ಹೆಚ್ಚು ಏರಿಕೆಯನ್ನು ದಾಖಲಿಸಿದ ನಂತರ 873 ಕೊರೊನ ವೈರಸ್ ಪ್ರಕರಣಗಳನ್ನು ವರದಿಯಾದೆ. ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...