Homeಮುಖಪುಟಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ತಮ್ಮ ಮನೆ ತಲುಪಲು ಪ್ರಯತ್ನಿಸುತ್ತಿರುವ ವಲಸಿಗರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

ದೇಶಾದ್ಯಂತದ ಜನರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ಅವರಿಗೆ ಆಹಾರ ಅಥವಾ ಆಶ್ರಯ ನೀಡುವ ಮೂಲಕ ಸಹಾಯ ಮಾಡಬೇಕೆಂದು ರಾಹುಲ್ ಗಾಂಧಿ ಆಗ್ರಹಿಸಿದರು. “ಹಸಿವಿನಿಂದ ಬಳಲುತ್ತಿರುವ ನಮ್ಮ ನೂರಾರು ಸಹೋದರರು ಮತ್ತು ಸಹೋದರಿಯರು ತಮ್ಮ ಕುಟುಂಬಗಳೊಂದಿಗೆ ಕಾಲ್ನಡಿಗೆಯಲ್ಲಿ ಹಳ್ಳಿಗಳ ಮನೆಗಳಿಗೆ ತೆರಳುವಂತಹ ಪರಿಸ್ಥಿತಿ ಬಂದಿದೆ. ಅವರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ನಿಮಗೆ ಸಾಧ್ಯವಾದರೆ ಅವರಿಗೆ ಆಹಾರ, ಆಶ್ರಯ ನೀಡುವ ಮೂಲಕ ಅವರಿಗೆ ಸಹಾಯ ಮಾಡಿ … ವಿಶೇಷ ಮನವಿ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ವಿಶೇಷ ಮನವಿ ಮಾಡುತ್ತಿದ್ದೇನೆ. ಜೈ ಹಿಂದ್! ” ಎಂದು ಟ್ವೀಟ್ ಮಾಡಿದ್ದಾರೆ.

 

ಕೊರೋನ ವೈರಸ್ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಪ್ರಯಾಣಿಕರ ರೈಲುಗಳು ಮತ್ತು ಅಂತರರಾಜ್ಯ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳನ್ನು ಮುಚ್ಚಲಾಗಿದೆ. ದೇಶಾದ್ಯಂತ ಗರಿಷ್ಠ ಸಂಖ್ಯೆಯ ಕಾರ್ಮಿಕರನ್ನು ಕಳುಹಿಸುವ ಬಂಗಾಳ, ಬಿಹಾರ ಮತ್ತು ಒಡಿಶಾ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉಪಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ ‘ಬ್ರಿಯಾನ್ ಟ್ವೀಟ್ ಮಾಡಿ “ಸಾಗರದಲ್ಲಿ ಒಂದು ಹನಿ … ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೊಳಗಾದರು. ಚೆನ್ನೈನಲ್ಲಿ ಸಿಕ್ಕಿಬಿದ್ದ ಬಂಗಾಳದ 40 ಮಂದಿ ನಮ್ಮನ್ನು ಸಂಪರ್ಕಿಸಿದಾಗ ನಾವು ಎಂಕೆ ಸ್ಟಾಲಿನ್ ಅವರನ್ನು ತಲುಪಿದೆವು, ಅವರ ತಂಡ ವಲಸಿಗರನ್ನು ಭೇಟಿಯಾಗಿ ಕಾಳಜಿ ವಹಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿಗಳ ಅಡಿಯಲ್ಲಿ ವಿವಿಧ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರಿಗೆ ಆಹಾರ / ಆಶ್ರಯ ನೀಡಲಾಗುತ್ತಿದೆ.” ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಈ ಜನರಿಗೆ ಸಾರಿಗೆ ಸೌಲಭ್ಯವನ್ನು ಖಾತ್ರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು. “ಕೆಲವು ಕಾರ್ಮಿಕರು ಕಾಲ್ನಡಿಗೆಯಲ್ಲಿ ಮನೆಗೆ ಹೊರಡುತ್ತಿದ್ದಾರೆ. ಕಳೆದ ರಾತ್ರಿ ಕೆಲವು ನೋವಿನ ಚಿತ್ರಗಳು ಹೊರಬಂದಿದೆ. ಕಾರ್ಮಿಕರನ್ನು ಮನೆಗೆ ಕಳುಹಿಸಲು ಕೈಗೊಂಡ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಎಂಬ ವಿನಂತಿ. ಹೆಚ್ಚಿನ ಸಂಖ್ಯೆಯ ಜನರು ಸಿಕ್ಕಿಹಾಕಿಕೊಂಡರೆ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ತಾತ್ಕಾಲಿಕ ಆಶ್ರಯ ಮನೆಗಳಾಗಿ ಬಳಸಬೇಕು, ನಂತರ ಕಾರ್ಮಿಕರನ್ನು ಮನೆಗೆ ಕಳುಹಿಸಬಹುದು “ಎಂದಿದ್ದಾರೆ.

ಕೇರಳ ಹಣಕಾಸು ಸಚಿವರಾದ ತೋಮಸ್ ಐಸಾಕ್ ಟ್ವೀಟ್ ಮಾಡಿ “ವಲಸೆ ಕಾರ್ಮಿಕ ಕುಟುಂಬಗಳು ಮನೆಗೆ ನಡೆಯುವ ಮಾಡುವ ಚಿತ್ರಗಳು ವಿಭಜನಾ ದಿನಗಳನ್ನು ನೆನಪಿಸುತ್ತವೆ” ಎಂದಿದ್ದಾರೆ.

ಇಲ್ಲಿಯವರೆಗೆ, ಭಾರತವು ಕಳೆದ 24 ಗಂಟೆಗಳಲ್ಲಿ 149 ಹೊಸ ಕೊರೊನ ಪ್ರಕರಣಗಳೊಂದಿಗೆ ಅತಿ ಹೆಚ್ಚು ಏರಿಕೆಯನ್ನು ದಾಖಲಿಸಿದ ನಂತರ 873 ಕೊರೊನ ವೈರಸ್ ಪ್ರಕರಣಗಳನ್ನು ವರದಿಯಾದೆ. ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...