Homeಮುಖಪುಟಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ತಮ್ಮ ಮನೆ ತಲುಪಲು ಪ್ರಯತ್ನಿಸುತ್ತಿರುವ ವಲಸಿಗರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

ದೇಶಾದ್ಯಂತದ ಜನರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ಅವರಿಗೆ ಆಹಾರ ಅಥವಾ ಆಶ್ರಯ ನೀಡುವ ಮೂಲಕ ಸಹಾಯ ಮಾಡಬೇಕೆಂದು ರಾಹುಲ್ ಗಾಂಧಿ ಆಗ್ರಹಿಸಿದರು. “ಹಸಿವಿನಿಂದ ಬಳಲುತ್ತಿರುವ ನಮ್ಮ ನೂರಾರು ಸಹೋದರರು ಮತ್ತು ಸಹೋದರಿಯರು ತಮ್ಮ ಕುಟುಂಬಗಳೊಂದಿಗೆ ಕಾಲ್ನಡಿಗೆಯಲ್ಲಿ ಹಳ್ಳಿಗಳ ಮನೆಗಳಿಗೆ ತೆರಳುವಂತಹ ಪರಿಸ್ಥಿತಿ ಬಂದಿದೆ. ಅವರು ಕಠಿಣ ಪ್ರಯಾಣವನ್ನು ಕೈಗೊಳ್ಳುವಾಗ ನಿಮಗೆ ಸಾಧ್ಯವಾದರೆ ಅವರಿಗೆ ಆಹಾರ, ಆಶ್ರಯ ನೀಡುವ ಮೂಲಕ ಅವರಿಗೆ ಸಹಾಯ ಮಾಡಿ … ವಿಶೇಷ ಮನವಿ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ವಿಶೇಷ ಮನವಿ ಮಾಡುತ್ತಿದ್ದೇನೆ. ಜೈ ಹಿಂದ್! ” ಎಂದು ಟ್ವೀಟ್ ಮಾಡಿದ್ದಾರೆ.

 

ಕೊರೋನ ವೈರಸ್ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಪ್ರಯಾಣಿಕರ ರೈಲುಗಳು ಮತ್ತು ಅಂತರರಾಜ್ಯ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳನ್ನು ಮುಚ್ಚಲಾಗಿದೆ. ದೇಶಾದ್ಯಂತ ಗರಿಷ್ಠ ಸಂಖ್ಯೆಯ ಕಾರ್ಮಿಕರನ್ನು ಕಳುಹಿಸುವ ಬಂಗಾಳ, ಬಿಹಾರ ಮತ್ತು ಒಡಿಶಾ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉಪಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ ‘ಬ್ರಿಯಾನ್ ಟ್ವೀಟ್ ಮಾಡಿ “ಸಾಗರದಲ್ಲಿ ಒಂದು ಹನಿ … ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೊಳಗಾದರು. ಚೆನ್ನೈನಲ್ಲಿ ಸಿಕ್ಕಿಬಿದ್ದ ಬಂಗಾಳದ 40 ಮಂದಿ ನಮ್ಮನ್ನು ಸಂಪರ್ಕಿಸಿದಾಗ ನಾವು ಎಂಕೆ ಸ್ಟಾಲಿನ್ ಅವರನ್ನು ತಲುಪಿದೆವು, ಅವರ ತಂಡ ವಲಸಿಗರನ್ನು ಭೇಟಿಯಾಗಿ ಕಾಳಜಿ ವಹಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿಗಳ ಅಡಿಯಲ್ಲಿ ವಿವಿಧ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರಿಗೆ ಆಹಾರ / ಆಶ್ರಯ ನೀಡಲಾಗುತ್ತಿದೆ.” ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಈ ಜನರಿಗೆ ಸಾರಿಗೆ ಸೌಲಭ್ಯವನ್ನು ಖಾತ್ರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರು ತಮ್ಮ ಸ್ವಸ್ಥಾನಗಳಿಗೆ ತಲುಪಲು 1000 ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು. “ಕೆಲವು ಕಾರ್ಮಿಕರು ಕಾಲ್ನಡಿಗೆಯಲ್ಲಿ ಮನೆಗೆ ಹೊರಡುತ್ತಿದ್ದಾರೆ. ಕಳೆದ ರಾತ್ರಿ ಕೆಲವು ನೋವಿನ ಚಿತ್ರಗಳು ಹೊರಬಂದಿದೆ. ಕಾರ್ಮಿಕರನ್ನು ಮನೆಗೆ ಕಳುಹಿಸಲು ಕೈಗೊಂಡ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಎಂಬ ವಿನಂತಿ. ಹೆಚ್ಚಿನ ಸಂಖ್ಯೆಯ ಜನರು ಸಿಕ್ಕಿಹಾಕಿಕೊಂಡರೆ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ತಾತ್ಕಾಲಿಕ ಆಶ್ರಯ ಮನೆಗಳಾಗಿ ಬಳಸಬೇಕು, ನಂತರ ಕಾರ್ಮಿಕರನ್ನು ಮನೆಗೆ ಕಳುಹಿಸಬಹುದು “ಎಂದಿದ್ದಾರೆ.

ಕೇರಳ ಹಣಕಾಸು ಸಚಿವರಾದ ತೋಮಸ್ ಐಸಾಕ್ ಟ್ವೀಟ್ ಮಾಡಿ “ವಲಸೆ ಕಾರ್ಮಿಕ ಕುಟುಂಬಗಳು ಮನೆಗೆ ನಡೆಯುವ ಮಾಡುವ ಚಿತ್ರಗಳು ವಿಭಜನಾ ದಿನಗಳನ್ನು ನೆನಪಿಸುತ್ತವೆ” ಎಂದಿದ್ದಾರೆ.

ಇಲ್ಲಿಯವರೆಗೆ, ಭಾರತವು ಕಳೆದ 24 ಗಂಟೆಗಳಲ್ಲಿ 149 ಹೊಸ ಕೊರೊನ ಪ್ರಕರಣಗಳೊಂದಿಗೆ ಅತಿ ಹೆಚ್ಚು ಏರಿಕೆಯನ್ನು ದಾಖಲಿಸಿದ ನಂತರ 873 ಕೊರೊನ ವೈರಸ್ ಪ್ರಕರಣಗಳನ್ನು ವರದಿಯಾದೆ. ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...