Homeಮುಖಪುಟರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆ ಆರಂಭಿಸಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಖಂಡಿಸಿ, ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಶುರು ಮಾಡಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ. ತಮಿಳುನಾಡಿನಲ್ಲಿ ಪಾದಯಾತ್ರೆ ನಡೆಯುವ ವೇಳೆ ಮಹಿಳೆಯೊಬ್ಬರು ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗಲಿದ್ದಾರೆ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿಯವರು ಯಾತ್ರೆಯ ಭಾಗವಾಗಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ಈ ತಮಾಷೆಯ ಘಟನೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್‌ರವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಸಂವಾದದ ಸಂದರ್ಭದಲ್ಲಿ ಮಹಿಳೆಯೊಬ್ಬರು, “ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಾರೆ. ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ದರಿದ್ದಾರೆ” ಎಂದು ಹೇಳುವ ಮೂಲಕ ಎಲ್ಲರ ಮುಖದಲ್ಲಿ ನಗು ತಂದಿದ್ದಾರೆ.

ಭಾರತ್ ಜೋಡೋ ಯಾತ್ರೆಯ 3ನೇ ದಿನ ಒಂದು ಉಲ್ಲಾಸದ ಕ್ಷಣ ದಾಖಲಾಗಿದೆ. ಇಂದು ಮಧ್ಯಾಹ್ನ ಮಾರ್ತಾಂಡಮ್‌ನಲ್ಲಿ ಮಹಿಳಾ ನರೇಗಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುವ ಸಂದರ್ಭದಲ್ಲಿ, ಒಬ್ಬ ಮಹಿಳೆ, ‘ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಿದ್ದಾರೆ ಮತ್ತು ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ’ ಎಂದು ಹೇಳಿದರು. ರಾಹುಲ್ ಗಾಂಧಿ ವರ್ಣರಂಜಿತವಾಗಿ ಕಾಣುತ್ತಿದ್ದಾರೆ, ಫೋಟೊ ಅದನ್ನು ತೋರಿಸುತ್ತಿದೆ ಎಂದು ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

5 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...