Homeಮುಖಪುಟರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆ ಆರಂಭಿಸಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಖಂಡಿಸಿ, ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಶುರು ಮಾಡಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ. ತಮಿಳುನಾಡಿನಲ್ಲಿ ಪಾದಯಾತ್ರೆ ನಡೆಯುವ ವೇಳೆ ಮಹಿಳೆಯೊಬ್ಬರು ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗಲಿದ್ದಾರೆ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿಯವರು ಯಾತ್ರೆಯ ಭಾಗವಾಗಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ಈ ತಮಾಷೆಯ ಘಟನೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್‌ರವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಸಂವಾದದ ಸಂದರ್ಭದಲ್ಲಿ ಮಹಿಳೆಯೊಬ್ಬರು, “ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಾರೆ. ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ದರಿದ್ದಾರೆ” ಎಂದು ಹೇಳುವ ಮೂಲಕ ಎಲ್ಲರ ಮುಖದಲ್ಲಿ ನಗು ತಂದಿದ್ದಾರೆ.

ಭಾರತ್ ಜೋಡೋ ಯಾತ್ರೆಯ 3ನೇ ದಿನ ಒಂದು ಉಲ್ಲಾಸದ ಕ್ಷಣ ದಾಖಲಾಗಿದೆ. ಇಂದು ಮಧ್ಯಾಹ್ನ ಮಾರ್ತಾಂಡಮ್‌ನಲ್ಲಿ ಮಹಿಳಾ ನರೇಗಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುವ ಸಂದರ್ಭದಲ್ಲಿ, ಒಬ್ಬ ಮಹಿಳೆ, ‘ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಿದ್ದಾರೆ ಮತ್ತು ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ’ ಎಂದು ಹೇಳಿದರು. ರಾಹುಲ್ ಗಾಂಧಿ ವರ್ಣರಂಜಿತವಾಗಿ ಕಾಣುತ್ತಿದ್ದಾರೆ, ಫೋಟೊ ಅದನ್ನು ತೋರಿಸುತ್ತಿದೆ ಎಂದು ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

5 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...