Homeಮುಖಪುಟದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.

“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...