Homeಮುಖಪುಟದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.

“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...