Homeಮುಖಪುಟದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.

“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...