ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.
ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.
“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದೆ.
ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ
माता-पिता के आँसू सिर्फ़ एक बात कह रहे हैं-
उनकी बेटी, देश की बेटी न्याय की हक़दार है।और इस न्याय के रास्ते पर मैं उनके साथ हूँ। pic.twitter.com/ewgzGkWrHd
— Rahul Gandhi (@RahulGandhi) August 4, 2021
ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.
ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
मैं सिर्फ ये जानता हूं कि मेरा काम इनकी मदद करने का है: श्री @RahulGandhi #JusticeForDelhiCanttGirl#राहुल_का_हाथ_न्याय_के_साथ pic.twitter.com/6NqBJowJX3
— Congress (@INCIndia) August 4, 2021
ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.
ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ
??