Homeಮುಖಪುಟರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಶುಕ್ರವಾರ ಭೇಟಿಯಾದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದಾರೆ.

ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದೇಶದ ವಿವಿಧ ಭಾಗಗಳ ಸುಮಾರು 50 ಲೋಕೋ ಪೈಲಟ್‌ಗಳನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದು, ಲೋಕೋ ಪೈಲಟ್‌ಗಳನ್ನು ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಬಹಳ ದೂರದ ಪ್ರದೇಶಗಳಿಗೆ ರೈಲು ಗಾಡಿಗಳನ್ನು ಓಡಿಸುವ ಲೋಕೋ ಪೈಲಟ್‌ಗಳಿಗೆ ಸರಿಯಾಗಿ ವಿಶ್ರಾಂತಿ ಸಿಗುತ್ತಿಲ್ಲ. ಇದರಿಂದ ಅವರು ಹೆಚ್ಚಿನ ಒತ್ತಡ ಮತ್ತು ಏಕಾಗ್ರತೆಯ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.

ವಿಶಾಖಪಟ್ಟಣದಲ್ಲಿ ನಡೆದ ರೈಲು ಅಪಘಾತದ ಸೇರಿದಂತೆ ಇತರ ಹಲವು ರೈಲು ಅಪಘಾತಗಳ ಪ್ರಕರಣಗಳಲ್ಲಿ ರೈಲ್ವೆ ಇಲಾಖೆ ಈ ವಿಚಾರವನ್ನು ಒಪ್ಪಿಕೊಂಡಿದೆ. ಲೋಕೋ ಪೈಲಟ್‌ಗಳು ಸಾಪ್ತಾಹಿಕ 46 ಗಂಟೆಗಳ ವಿಶ್ರಾಂತಿಯನ್ನು ಕೋರಿದ್ದಾರೆ. ಅಂದರೆ, ಶುಕ್ರವಾರ ಮಧ್ಯಾಹ್ನ ಮನೆಗೆ ಹಿಂದಿರುಗುವ ರೈಲು ಚಾಲಕ, ಭಾನುವಾರ ಬೆಳಿಗ್ಗೆಯ ನಂತರ ಕರ್ತವ್ಯಕ್ಕೆ ವಾಪಾಸಾಗಬೇಕು ಎಂಬುವುದು ಅವರ ಬೇಡಿಕೆಯಾಗಿದೆ.

ರೈಲ್ವೆ ಕಾಯ್ದೆ-1989 ಮತ್ತು ಇತರ ನಿಯಮಗಳು ಲೋಕೋ ಪೈಲಟ್‌ಗಳಿಗೆ ವಾರಕ್ಕೆ 30+16 ಗಂಟೆಗಳ ವಿಶ್ರಾಂತಿ ನೀಡುವಂತೆ ಹೇಳುತ್ತದೆ. ಆದರೆ, ಅದನ್ನು ಕಾರ್ಯಗತಗೊಳಿಸುತ್ತಿಲ್ಲ ಎಂಬ ಆರೋಪಗಳಿಗೆ. ವಿಮಾನದ ಪೈಲಟ್‌ಗಳು ಸಹ ಸಾಮಾನ್ಯವಾಗಿ ಇಷ್ಟು ವಿಶ್ರಾಂತಿ ಪಡೆಯುತ್ತಾರೆ.

ಸತತ ಎರಡು ರಾತ್ರಿ ಕರ್ತವ್ಯದ ನಂತರ ಒಂದು ರಾತ್ರಿ ವಿಶ್ರಾಂತಿ ನೀಡಬೇಕು. ರೈಲುಗಳಲ್ಲಿ ಚಾಲಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಲೋಕೋ ಪೈಲಟ್‌ಗಳು ಒತ್ತಾಯಿಸಿದ್ದಾರೆ.

ಲೋಕೋ ಪೈಲಟ್‌ಗಳ ನೇಮಕಾತಿಯನ್ನು ಸರ್ಕಾರ ಸ್ಥಗಿತಗೊಳಿಸಿರುವುದರಿಂದ ಸಿಬ್ಬಂದಿ ಕೊರತೆಯಿಂದಾಗಿ ವಿಶ್ರಾಂತಿ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

“ಕಳೆದ ನಾಲ್ಕು ವರ್ಷಗಳಲ್ಲಿ ರೈಲ್ವೆ ನೇಮಕಾತಿ ಮಂಡಳಿಯು ಹತ್ತು ಸಾವಿರ ಖಾಲಿ ಹುದ್ದೆಗಳಿದ್ದರೂ ಒಬ್ಬರೇ ಒಬ್ಬರು ಲೋಕೋ ಪೈಲಟ್ ಅನ್ನು ನೇಮಕ ಮಾಡಿಲ್ಲ. ಈ ಉದ್ದೇಶಪೂರ್ವಕ ಕ್ರಮವು ರೈಲ್ವೆಯನ್ನು ಖಾಸಗೀಕರಣಗೊಳಿಸುವ ಮೋದಿ ಸರ್ಕಾರದ ಹುನ್ನಾರವಾಗಿದೆ ಎಂದು ಪೈಲಟ್‌ಗಳು ತಮ್ಮ ಭಯವನ್ನು ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

“ರೈಲ್ವೆಯ ಖಾಸಗೀಕರಣ ಮತ್ತು ನೇಮಕಾತಿ ಸ್ಥಗಿತ’ದ ವಿಷಯವನ್ನು ಲೋಕಸಭೆಯಲ್ಲಿ ಈಗಾಗಲೇ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಮತ್ತೊಮ್ಮೆ ಈ ವಿಷಯದಲ್ಲಿ ಧ್ವನಿ ಎತ್ತಲಾಗುವುದು. ನಿಯಮದ ಪ್ರಕಾರ ವಿಶ್ರಾಂತಿ ಸಿಗಬೇಕು ಎಂಬ ನಿಮ್ಮ ಬೇಡಿಕೆಯನ್ನು ಬೆಂಬಲಿಸುತ್ತೇನೆ” ಎಂದು ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ದೆಹಲಿಯಲ್ಲಿ ಗಾರೆ ಕಾರ್ಮಿಕರನ್ನು ಭೇಟಿಯಾಗಿ, ಅವರ ಜೊತೆ ಕೆಲಸ ಮಾಡಿ ರಾಹುಲ್ ಗಾಂಧಿ ಸಮಸ್ಯೆ ಆಲಿಸಿದ್ದರು.

ಇದನ್ನೂ ಓದಿ : ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷನ ಹತ್ಯೆ : 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...