Homeಮುಖಪುಟರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಶುಕ್ರವಾರ ಭೇಟಿಯಾದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದಾರೆ.

ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದೇಶದ ವಿವಿಧ ಭಾಗಗಳ ಸುಮಾರು 50 ಲೋಕೋ ಪೈಲಟ್‌ಗಳನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದು, ಲೋಕೋ ಪೈಲಟ್‌ಗಳನ್ನು ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಬಹಳ ದೂರದ ಪ್ರದೇಶಗಳಿಗೆ ರೈಲು ಗಾಡಿಗಳನ್ನು ಓಡಿಸುವ ಲೋಕೋ ಪೈಲಟ್‌ಗಳಿಗೆ ಸರಿಯಾಗಿ ವಿಶ್ರಾಂತಿ ಸಿಗುತ್ತಿಲ್ಲ. ಇದರಿಂದ ಅವರು ಹೆಚ್ಚಿನ ಒತ್ತಡ ಮತ್ತು ಏಕಾಗ್ರತೆಯ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.

ವಿಶಾಖಪಟ್ಟಣದಲ್ಲಿ ನಡೆದ ರೈಲು ಅಪಘಾತದ ಸೇರಿದಂತೆ ಇತರ ಹಲವು ರೈಲು ಅಪಘಾತಗಳ ಪ್ರಕರಣಗಳಲ್ಲಿ ರೈಲ್ವೆ ಇಲಾಖೆ ಈ ವಿಚಾರವನ್ನು ಒಪ್ಪಿಕೊಂಡಿದೆ. ಲೋಕೋ ಪೈಲಟ್‌ಗಳು ಸಾಪ್ತಾಹಿಕ 46 ಗಂಟೆಗಳ ವಿಶ್ರಾಂತಿಯನ್ನು ಕೋರಿದ್ದಾರೆ. ಅಂದರೆ, ಶುಕ್ರವಾರ ಮಧ್ಯಾಹ್ನ ಮನೆಗೆ ಹಿಂದಿರುಗುವ ರೈಲು ಚಾಲಕ, ಭಾನುವಾರ ಬೆಳಿಗ್ಗೆಯ ನಂತರ ಕರ್ತವ್ಯಕ್ಕೆ ವಾಪಾಸಾಗಬೇಕು ಎಂಬುವುದು ಅವರ ಬೇಡಿಕೆಯಾಗಿದೆ.

ರೈಲ್ವೆ ಕಾಯ್ದೆ-1989 ಮತ್ತು ಇತರ ನಿಯಮಗಳು ಲೋಕೋ ಪೈಲಟ್‌ಗಳಿಗೆ ವಾರಕ್ಕೆ 30+16 ಗಂಟೆಗಳ ವಿಶ್ರಾಂತಿ ನೀಡುವಂತೆ ಹೇಳುತ್ತದೆ. ಆದರೆ, ಅದನ್ನು ಕಾರ್ಯಗತಗೊಳಿಸುತ್ತಿಲ್ಲ ಎಂಬ ಆರೋಪಗಳಿಗೆ. ವಿಮಾನದ ಪೈಲಟ್‌ಗಳು ಸಹ ಸಾಮಾನ್ಯವಾಗಿ ಇಷ್ಟು ವಿಶ್ರಾಂತಿ ಪಡೆಯುತ್ತಾರೆ.

ಸತತ ಎರಡು ರಾತ್ರಿ ಕರ್ತವ್ಯದ ನಂತರ ಒಂದು ರಾತ್ರಿ ವಿಶ್ರಾಂತಿ ನೀಡಬೇಕು. ರೈಲುಗಳಲ್ಲಿ ಚಾಲಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಲೋಕೋ ಪೈಲಟ್‌ಗಳು ಒತ್ತಾಯಿಸಿದ್ದಾರೆ.

ಲೋಕೋ ಪೈಲಟ್‌ಗಳ ನೇಮಕಾತಿಯನ್ನು ಸರ್ಕಾರ ಸ್ಥಗಿತಗೊಳಿಸಿರುವುದರಿಂದ ಸಿಬ್ಬಂದಿ ಕೊರತೆಯಿಂದಾಗಿ ವಿಶ್ರಾಂತಿ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

“ಕಳೆದ ನಾಲ್ಕು ವರ್ಷಗಳಲ್ಲಿ ರೈಲ್ವೆ ನೇಮಕಾತಿ ಮಂಡಳಿಯು ಹತ್ತು ಸಾವಿರ ಖಾಲಿ ಹುದ್ದೆಗಳಿದ್ದರೂ ಒಬ್ಬರೇ ಒಬ್ಬರು ಲೋಕೋ ಪೈಲಟ್ ಅನ್ನು ನೇಮಕ ಮಾಡಿಲ್ಲ. ಈ ಉದ್ದೇಶಪೂರ್ವಕ ಕ್ರಮವು ರೈಲ್ವೆಯನ್ನು ಖಾಸಗೀಕರಣಗೊಳಿಸುವ ಮೋದಿ ಸರ್ಕಾರದ ಹುನ್ನಾರವಾಗಿದೆ ಎಂದು ಪೈಲಟ್‌ಗಳು ತಮ್ಮ ಭಯವನ್ನು ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

“ರೈಲ್ವೆಯ ಖಾಸಗೀಕರಣ ಮತ್ತು ನೇಮಕಾತಿ ಸ್ಥಗಿತ’ದ ವಿಷಯವನ್ನು ಲೋಕಸಭೆಯಲ್ಲಿ ಈಗಾಗಲೇ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಮತ್ತೊಮ್ಮೆ ಈ ವಿಷಯದಲ್ಲಿ ಧ್ವನಿ ಎತ್ತಲಾಗುವುದು. ನಿಯಮದ ಪ್ರಕಾರ ವಿಶ್ರಾಂತಿ ಸಿಗಬೇಕು ಎಂಬ ನಿಮ್ಮ ಬೇಡಿಕೆಯನ್ನು ಬೆಂಬಲಿಸುತ್ತೇನೆ” ಎಂದು ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ದೆಹಲಿಯಲ್ಲಿ ಗಾರೆ ಕಾರ್ಮಿಕರನ್ನು ಭೇಟಿಯಾಗಿ, ಅವರ ಜೊತೆ ಕೆಲಸ ಮಾಡಿ ರಾಹುಲ್ ಗಾಂಧಿ ಸಮಸ್ಯೆ ಆಲಿಸಿದ್ದರು.

ಇದನ್ನೂ ಓದಿ : ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷನ ಹತ್ಯೆ : 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...