Homeಮುಖಪುಟಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು.

ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ ಪತ್ನಿ ಹಿಮಾಂಶಿ, ತಂದೆ ರಾಜೇಶ್ ಕುಮಾರ್, ತಾಯಿ ಆಶಾ ದೇವಿ, ಸಹೋದರಿ ಸೃಷ್ಟಿ ಮತ್ತು ಅಜ್ಜ ಹವಾ ಸಿಂಗ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ನೀಡಿದ ವೇಳೆ ಲೆಫ್ಟಿನೆಂಟ್ ನರ್ವಾಲ್ ಅವರ ಮನೆಯಲ್ಲಿ ಕಾಂಗ್ರೆಸ್‌ನ ರೋಹ್ತಕ್ ಸಂಸದ ದೀಪೇಂದರ್ ಹೂಡಾ ಮತ್ತು ಹರಿಯಾಣ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಉದಯ್ ಭನ್ ಹಾಜರಿದ್ದರು. ಮನೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಮತ್ತು ವರದಿಗಾರರು ಜಮಾಯಿಸಿದ್ದರು, ಆದರೆ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಹೂಡಾ, “ರಾಹುಲ್ ಜಿ ನಮ್ಮ ಪ್ರೀತಿಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅವರು ಏನು ಹೇಳಿದರು ಎಂಬುದನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವುದಿಲ್ಲ. ನಾವು ಒಬ್ಬ ಮಗನನ್ನು, ನಮ್ಮ ರಾಷ್ಟ್ರದ ವೀರ ಸೈನಿಕನನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಹೇಳಿದ್ದಾರೆ.

ಹರಿಯಾಣದ ಬಿಜೆಪಿ ಸರ್ಕಾರ ಮೃತ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರು ನರ್ವಾಲ್ ಅವರ ಹುಟ್ಟೂರು ಕರ್ನಾಲ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕೇವಲ ಏಳು ದಿನಗಳ ಮೊದಲು ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿ ಅವರು ಮದುವೆಯಾಗಿದ್ದರು. ಏಪ್ರಿಲ್ 21ರಂದು ಹನಿಮೂನ್‌ಗಾಗಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಏಪ್ರಿಲ್ 22ರಂದು ನಡೆದ ದಾಳಿಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಮೊದಲ ಕ್ಲಿಪ್ ಹಿಮಾಂಶಿ ಅವರದ್ದಾಗಿತ್ತು. ಅದರಲ್ಲಿ ಅವರು “ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸುವ ಮೊದಲು ಅವರ ಧರ್ಮದ ಬಗ್ಗೆ ಕೇಳಿದ್ದಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ಮುಂದಿಟ್ಟಕೊಂಡು ಹಲವು ಮಾಧ್ಯಮಗಳು ದೇಶದ ಮುಸ್ಲಿಮರು, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಮುಸ್ಲಿಮರನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಿತು.

ಆದರೆ, ಮೇ 1ರಂದು ಮೃತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಹರಿಯಾಣದ ಕರ್ನಾಲ್‌ನಲ್ಲಿ ಅಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ್ದ ಪತ್ನಿ ಹಿಮಾಂಶಿ, “ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದಿದ್ದರು.

ಹಿಮಾಂಶಿ ಅವರು ದೇಶದ ಸಾಮರಸ್ಯದ ಪರ ನೀಡಿದ ಈ ಹೇಳಿಕೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಹಿಮಾಂಶಿ ಅವರ ವೈಯುಕ್ತ ವಿಚಾರಗಳನ್ನು ಎಳೆದು ತಂದು ಅವರನ್ನು ತೇಜೋವಧೆ ಮಾಡಲಾಗುತ್ತಿದೆ.

ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ಸಾವಿಗೂ ಮುನ್ನ ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಏಪ್ರಿಲ್ 19ರಂದು ಮಸ್ಸೂರಿಯಲ್ಲಿ ಅವರ ಮದುವೆ ನಡೆದಿತ್ತು ಈ ಹಿನ್ನೆಲೆ ಅವರು ಮಾರ್ಚ್ 28ರಿಂದ ರಜೆಯ ಮೇಲೆ ಮನೆಗೆ ತೆರಳಿದ್ದರು. ಏಪ್ರಿಲ್ 20ರಂದು, ಕರ್ನಾಲ್‌ನಲ್ಲಿ ಮದುವೆಯ ಆರತಕ್ಷತೆ ಬಳಿಕ, ನವ ದಂಪತಿ ಗುರುಗಾಂವ್‌ನ ಹಿಮಾಂಶಿ ಅವರ ಮನೆಗೆ ಹೋಗಿದ್ದರು. ಅಲ್ಲಿಂದ ಏಪ್ರಿಲ್ 21ರಂದು ಶ್ರೀನಗರಕ್ಕೆ ವಿಮಾನ ಹತ್ತಿದ್ದರು.

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...