Homeಮುಖಪುಟಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು.

ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ ಪತ್ನಿ ಹಿಮಾಂಶಿ, ತಂದೆ ರಾಜೇಶ್ ಕುಮಾರ್, ತಾಯಿ ಆಶಾ ದೇವಿ, ಸಹೋದರಿ ಸೃಷ್ಟಿ ಮತ್ತು ಅಜ್ಜ ಹವಾ ಸಿಂಗ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ನೀಡಿದ ವೇಳೆ ಲೆಫ್ಟಿನೆಂಟ್ ನರ್ವಾಲ್ ಅವರ ಮನೆಯಲ್ಲಿ ಕಾಂಗ್ರೆಸ್‌ನ ರೋಹ್ತಕ್ ಸಂಸದ ದೀಪೇಂದರ್ ಹೂಡಾ ಮತ್ತು ಹರಿಯಾಣ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಉದಯ್ ಭನ್ ಹಾಜರಿದ್ದರು. ಮನೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಮತ್ತು ವರದಿಗಾರರು ಜಮಾಯಿಸಿದ್ದರು, ಆದರೆ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಹೂಡಾ, “ರಾಹುಲ್ ಜಿ ನಮ್ಮ ಪ್ರೀತಿಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅವರು ಏನು ಹೇಳಿದರು ಎಂಬುದನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವುದಿಲ್ಲ. ನಾವು ಒಬ್ಬ ಮಗನನ್ನು, ನಮ್ಮ ರಾಷ್ಟ್ರದ ವೀರ ಸೈನಿಕನನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಹೇಳಿದ್ದಾರೆ.

ಹರಿಯಾಣದ ಬಿಜೆಪಿ ಸರ್ಕಾರ ಮೃತ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರು ನರ್ವಾಲ್ ಅವರ ಹುಟ್ಟೂರು ಕರ್ನಾಲ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕೇವಲ ಏಳು ದಿನಗಳ ಮೊದಲು ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿ ಅವರು ಮದುವೆಯಾಗಿದ್ದರು. ಏಪ್ರಿಲ್ 21ರಂದು ಹನಿಮೂನ್‌ಗಾಗಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಏಪ್ರಿಲ್ 22ರಂದು ನಡೆದ ದಾಳಿಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಮೊದಲ ಕ್ಲಿಪ್ ಹಿಮಾಂಶಿ ಅವರದ್ದಾಗಿತ್ತು. ಅದರಲ್ಲಿ ಅವರು “ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸುವ ಮೊದಲು ಅವರ ಧರ್ಮದ ಬಗ್ಗೆ ಕೇಳಿದ್ದಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ಮುಂದಿಟ್ಟಕೊಂಡು ಹಲವು ಮಾಧ್ಯಮಗಳು ದೇಶದ ಮುಸ್ಲಿಮರು, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಮುಸ್ಲಿಮರನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಿತು.

ಆದರೆ, ಮೇ 1ರಂದು ಮೃತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಹರಿಯಾಣದ ಕರ್ನಾಲ್‌ನಲ್ಲಿ ಅಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ್ದ ಪತ್ನಿ ಹಿಮಾಂಶಿ, “ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದಿದ್ದರು.

ಹಿಮಾಂಶಿ ಅವರು ದೇಶದ ಸಾಮರಸ್ಯದ ಪರ ನೀಡಿದ ಈ ಹೇಳಿಕೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಹಿಮಾಂಶಿ ಅವರ ವೈಯುಕ್ತ ವಿಚಾರಗಳನ್ನು ಎಳೆದು ತಂದು ಅವರನ್ನು ತೇಜೋವಧೆ ಮಾಡಲಾಗುತ್ತಿದೆ.

ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ಸಾವಿಗೂ ಮುನ್ನ ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಏಪ್ರಿಲ್ 19ರಂದು ಮಸ್ಸೂರಿಯಲ್ಲಿ ಅವರ ಮದುವೆ ನಡೆದಿತ್ತು ಈ ಹಿನ್ನೆಲೆ ಅವರು ಮಾರ್ಚ್ 28ರಿಂದ ರಜೆಯ ಮೇಲೆ ಮನೆಗೆ ತೆರಳಿದ್ದರು. ಏಪ್ರಿಲ್ 20ರಂದು, ಕರ್ನಾಲ್‌ನಲ್ಲಿ ಮದುವೆಯ ಆರತಕ್ಷತೆ ಬಳಿಕ, ನವ ದಂಪತಿ ಗುರುಗಾಂವ್‌ನ ಹಿಮಾಂಶಿ ಅವರ ಮನೆಗೆ ಹೋಗಿದ್ದರು. ಅಲ್ಲಿಂದ ಏಪ್ರಿಲ್ 21ರಂದು ಶ್ರೀನಗರಕ್ಕೆ ವಿಮಾನ ಹತ್ತಿದ್ದರು.

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...