Homeಮುಖಪುಟಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು.

ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ ಪತ್ನಿ ಹಿಮಾಂಶಿ, ತಂದೆ ರಾಜೇಶ್ ಕುಮಾರ್, ತಾಯಿ ಆಶಾ ದೇವಿ, ಸಹೋದರಿ ಸೃಷ್ಟಿ ಮತ್ತು ಅಜ್ಜ ಹವಾ ಸಿಂಗ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ನೀಡಿದ ವೇಳೆ ಲೆಫ್ಟಿನೆಂಟ್ ನರ್ವಾಲ್ ಅವರ ಮನೆಯಲ್ಲಿ ಕಾಂಗ್ರೆಸ್‌ನ ರೋಹ್ತಕ್ ಸಂಸದ ದೀಪೇಂದರ್ ಹೂಡಾ ಮತ್ತು ಹರಿಯಾಣ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಉದಯ್ ಭನ್ ಹಾಜರಿದ್ದರು. ಮನೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಮತ್ತು ವರದಿಗಾರರು ಜಮಾಯಿಸಿದ್ದರು, ಆದರೆ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಹೂಡಾ, “ರಾಹುಲ್ ಜಿ ನಮ್ಮ ಪ್ರೀತಿಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅವರು ಏನು ಹೇಳಿದರು ಎಂಬುದನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವುದಿಲ್ಲ. ನಾವು ಒಬ್ಬ ಮಗನನ್ನು, ನಮ್ಮ ರಾಷ್ಟ್ರದ ವೀರ ಸೈನಿಕನನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಹೇಳಿದ್ದಾರೆ.

ಹರಿಯಾಣದ ಬಿಜೆಪಿ ಸರ್ಕಾರ ಮೃತ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರು ನರ್ವಾಲ್ ಅವರ ಹುಟ್ಟೂರು ಕರ್ನಾಲ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕೇವಲ ಏಳು ದಿನಗಳ ಮೊದಲು ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿ ಅವರು ಮದುವೆಯಾಗಿದ್ದರು. ಏಪ್ರಿಲ್ 21ರಂದು ಹನಿಮೂನ್‌ಗಾಗಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಏಪ್ರಿಲ್ 22ರಂದು ನಡೆದ ದಾಳಿಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಮೊದಲ ಕ್ಲಿಪ್ ಹಿಮಾಂಶಿ ಅವರದ್ದಾಗಿತ್ತು. ಅದರಲ್ಲಿ ಅವರು “ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸುವ ಮೊದಲು ಅವರ ಧರ್ಮದ ಬಗ್ಗೆ ಕೇಳಿದ್ದಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ಮುಂದಿಟ್ಟಕೊಂಡು ಹಲವು ಮಾಧ್ಯಮಗಳು ದೇಶದ ಮುಸ್ಲಿಮರು, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಮುಸ್ಲಿಮರನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಿತು.

ಆದರೆ, ಮೇ 1ರಂದು ಮೃತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಹರಿಯಾಣದ ಕರ್ನಾಲ್‌ನಲ್ಲಿ ಅಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ್ದ ಪತ್ನಿ ಹಿಮಾಂಶಿ, “ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದಿದ್ದರು.

ಹಿಮಾಂಶಿ ಅವರು ದೇಶದ ಸಾಮರಸ್ಯದ ಪರ ನೀಡಿದ ಈ ಹೇಳಿಕೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಹಿಮಾಂಶಿ ಅವರ ವೈಯುಕ್ತ ವಿಚಾರಗಳನ್ನು ಎಳೆದು ತಂದು ಅವರನ್ನು ತೇಜೋವಧೆ ಮಾಡಲಾಗುತ್ತಿದೆ.

ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ಸಾವಿಗೂ ಮುನ್ನ ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಏಪ್ರಿಲ್ 19ರಂದು ಮಸ್ಸೂರಿಯಲ್ಲಿ ಅವರ ಮದುವೆ ನಡೆದಿತ್ತು ಈ ಹಿನ್ನೆಲೆ ಅವರು ಮಾರ್ಚ್ 28ರಿಂದ ರಜೆಯ ಮೇಲೆ ಮನೆಗೆ ತೆರಳಿದ್ದರು. ಏಪ್ರಿಲ್ 20ರಂದು, ಕರ್ನಾಲ್‌ನಲ್ಲಿ ಮದುವೆಯ ಆರತಕ್ಷತೆ ಬಳಿಕ, ನವ ದಂಪತಿ ಗುರುಗಾಂವ್‌ನ ಹಿಮಾಂಶಿ ಅವರ ಮನೆಗೆ ಹೋಗಿದ್ದರು. ಅಲ್ಲಿಂದ ಏಪ್ರಿಲ್ 21ರಂದು ಶ್ರೀನಗರಕ್ಕೆ ವಿಮಾನ ಹತ್ತಿದ್ದರು.

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...