Homeಮುಖಪುಟರಾಹುಲ್‍ಗಾಂಧಿಯ `ನ್ಯಾಯ್' ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ.....

ರಾಹುಲ್‍ಗಾಂಧಿಯ `ನ್ಯಾಯ್’ ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ…..

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಸೋಮವಾರ ಮಾರ್ಚ್ 25ನೇ ತಾರೀಖಿನಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ‘ನ್ಯಾಯ’ ಎನ್ನುವ ಕನಿಷ್ಠ ಆದಾಯ ಯೋಜನೆಯನ್ನು ಘೋಷಿಸಿದರು. ಜನೆವರಿ ತಿಂಗಳಲ್ಲಿ ಮೊದಲ ಬಾರಿ ಇದರ ಬಗ್ಗೆ ಮಾತನಾಡಿದ್ದರೂ ಅನೇಕ ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿದ್ದವು. ಎರಡು ತಿಂಗಳ ನಂತರ ಮಾಡಿದ ಈ ಘೋಷಣೆಯ ನಂತರವೂ ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಏನಿದು ‘ನ್ಯಾಯ?’ ‘ನ್ಯೂನತಮ್ ಆದಾಯ್ ಯೋಜನಾ’ ಅಂದರೆ ಕನಿಷ್ಠ ಆದಾಯ ಯೋಜನೆ. ರಾಹುಲ್‍ಗಾಂಧಿ ಘೋಷಿಸಿದ ಪ್ರಕಾರ ಭಾರತದ ಆರ್ಥಿಕವಾಗಿ ಕೆಳಗಿರುವ 20% ಕುಟುಂಬಗಳಿಗೆ ಹಣಸಹಾಯ. ಯಾವುದೇ ಕುಟುಂಬವು ತಿಂಗಳಿಗೆ 12 ಸಾವಿರಕ್ಕಿಂತಲೂ ಕಡಿಮೆ ಆದಾಯ ಹೊಂದಿದ್ದಲ್ಲಿ ಆ ಕುಟುಂಬಕ್ಕೆ ಸರಕಾರದಿಂದ 12 ಸಾವಿರಕ್ಕಿಂತ ಎಷ್ಟು ಕಡಿಮೆ ಇದೆಯೋ, ಅಷ್ಟು ಹಣ ನೀಡಲಾಗುವುದು. ಈ 20% ಕುಟುಂಬಗಳ ಸರಾಸರಿ ಆದಾಯ 6,000/- ಆಗಿರುವುದರಿಂದ ಆ 20% ಅಂದರೆ 5 ಕೋಟಿ ಕುಟುಂಬಗಳಿಗೆ ಪ್ರತಿತಿಂಗಳು 6,000/ ಧನಸಹಾಯ. ಅಂದರೆ ಒಂದು ಕುಟುಂಬಕ್ಕೆ ಪ್ರತೀ ವರ್ಷ 72,000/-, ತಗಲುವ ಒಟ್ಟು ವೆಚ್ಚ 3.6 ಲಕ್ಷ ಕೋಟಿ ರೂಪಾಯಿಗಳು, ಅದು ಭಾರತದ ವಾರ್ಷಿಕ ಬಜೆಟ್‍ನ 13%, ಜಿಡಿಪಿಯ 2%.

ಈ ಘೋಷಣೆಯಿಂದ ಆದ ಮೊದಲ ಬದಲಾವಣೆ- ಎಲ್ಲಾ ಪಕ್ಷಗಳು ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳು ಮಾತನಾಡಬೇಕಿರುವ ಅಸಲೀ ವಿಷಯಗಳ ಬಗ್ಗೆ ಮಾತನಾಡಲಾರಂಭಿಸಿವೆ. ಭಯೋತ್ಪಾದನೆ, ರಾಷ್ಟ್ರೀಯ ಸುರಕ್ಷತೆಯಂತಹ ಎಲ್ಲರ ಒಮ್ಮತವಿರುವ ವಿಷಯಗಳಲ್ಲಿ ಸುಖಾಸುಮ್ಮನೇ ಅರಚಾಡಿ, ಸುಳ್ಳು ಹೇಳಿ, ಅಸಲೀ ಸಮಸ್ಯೆಗಳನ್ನು ಮರೆಸಲು ಯತ್ನಿಸುತ್ತಿದ್ದರು. ಈ ಘೋಷಣೆಯಿಂದ ಅದು ಬದಲಾಗಿ, ರಾಹುಲ್ ಗಾಂಧಿ ಘೋಷಿಸಿರುವ ಯೋಜನೆಯ ಬಗ್ಗೆ, ಇಂತಹ ಯೋಜನೆಗಳ ಬಗ್ಗೆ ಈ ಸರಕಾರದ ಪ್ರದರ್ಶನದ ಬಗ್ಗೆ ಸೂಕ್ತ ಪ್ರಶ್ನೆಗಳನ್ನು ಎಲ್ಲರೂ ಎತ್ತಲಾರಂಭಿಸಿದ್ದಾರೆ.

ಈ ಘೋಷಣೆಯಿಂದ ಆದ ಇನ್ನೊಂದು ಬದಲಾವಣೆ- ‘ಭಾರತದ ಬಡಜನರ’ ಮೇಲೆ ಮತ್ತೊಮ್ಮೆ ಗಮನ ಕೇಂದ್ರೀಕೃತವಾಗಿದೆ. ಮಧ್ಯಮ ಮತ್ತು ಉಚ್ಚ ವರ್ಗದ ಜನರಿಗೆ ಕಲ್ಯಾಣ ಯೋಜನೆಗಳ ಬಗ್ಗೆ ಅಸಮಾಧಾನ ಇರುವುದರಿಂದ, ಅವರನ್ನು ಮೆಚ್ಚಿಸಲು ನಮ್ಮ ರಾಜಕೀಯ ಪಕ್ಷಗಳು ಕಲ್ಯಾಣ ಯೋಜನೆಗಳನ್ನು ಘೋಷಿಸಲು ಹಿಂಜರಿಯುವುದು ವಾಸ್ತವ. 2004 ರಲ್ಲಿ ಕಾಂಗ್ರೆಸ್ ಪಕ್ಷವು ‘ಆಮ್‍ಆದ್ಮಿ’ ಯ ವಿಷಯವನ್ನು ತಂದಿದ್ದೂ ಇದೇ ಕಾರಣಕ್ಕೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆಗಳನ್ನು ಕೇಳಲೇಬೇಕಿದೆ. ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗುವುದಕ್ಕಿಂತ ಮುಂಚೆ ಯಾವ ಕಾರಣಕ್ಕೂ ನಂಬಲೇಬಾರದು. ಕಳೆದ ಬಾರಿ ಮೋದಿ ಅವರು ಪ್ರತಿ ಖಾತೆಗೆ 15 ಲಕ್ಷದ ಮಾತುಗಳನ್ನಾಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಸೃಷ್ಟಿಯ ಬಗ್ಗೆ ಮಾತನಾಡಿದ್ದರು, ರೈತರ ಆದಾಯವನ್ನು ದ್ವಿಗುಣಗೊಳಿಸುವ ಬಗ್ಗೆ ಮಾತನಾಡಿದ್ದರು. ಆದರೆ ಯಾವುದೇ ಯೋಜನೆಗೆ ನೀಲನಕ್ಷೆಯನ್ನು ನೀಡಿರಲಿಲ್ಲ. ಈಗ ಆ ಭರವಸೆಗಳ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷ ಇವೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ತನಕ ಬೇತಾಳದಂತೆ ಬೆನ್ನಟ್ಟಬೇಕಿದೆ.

ಈ ಘೋಷಣೆ ಮತದಾರರನ್ನು ತನ್ನತ್ತ ಸೆಳೆಯಲು ಮಾಡಿದ ತಂತ್ರವೇ ಎನ್ನುವ ಪ್ರಶ್ನೆಯನ್ನು ಕೈಬಿಡುವ. ಉತ್ತರ ಎಲ್ಲರಿಗೂ ಗೊತ್ತು, ಆದರೆ ಭರವಸೆ ನೀಡಿದ ಭರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದು ಈ ನೀತಿಗಳನ್ನು ಜಾರಿಗೊಳಿಸಿದಲ್ಲಿ ಲಾಭ ಆಗುವುದು ಬಡವರಿಗೆ. ಈ ಯೋಜನೆಯಿಂದ ಬಡವರು ಸೋಮಾರಿಗಳಾಗುವುದಿಲ್ಲವೇ ಎನ್ನುವ ಮೂರ್ಖ ಪ್ರಶ್ನೆಯನ್ನು ಕೈಬಿಡುವ. ತಮ್ಮ ಜೀವನಮಟ್ಟವನ್ನು ಹೆಚ್ಚಿಸಲು ಎಲ್ಲರೂ ದುಡಿಯುತ್ತಲೇ ಇರುತ್ತಾರೆ ಹಾಗೂ ಒಂದು ವೇಳೆ ಈ ಯೋಜನೆ ಅನ್ವಯವಾದರೆ ಅವರ ಪ್ರಯತ್ನಕ್ಕೆ ಚೈತನ್ಯ ಬರುವುದು ಸರಳ ಸತ್ಯ. ಸದ್ಯಕ್ಕೆ ಈಗಾಗಲೇ ಕೇಂದ್ರ ಸರಕಾರದ ಅನೇಕ ಕಲ್ಯಾಣ ಯೋಜನೆಗಳು ಜಾರಿಯಲ್ಲಿವೆ, ಈ ಯೋಜನೆ ಜಾರಿಯಾದಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ ಯೋಜನೆಗಳನ್ನು ಕೈಬಿಡಲಾಗುತ್ತದೆಯೇ ಅಥವಾ ಎಲ್ಲ ಕಲ್ಯಾಣ ಯೋಜನೆಗಳೊಂದಿಗೆ ಹೆಚ್ಚುವರಿಯಾಗಿ ಇದನ್ನು ಅನುಷ್ಠಾನಗೊಳಿಸಲಾಗುತ್ತದೆಯೇ ಎನ್ನುವುದನ್ನು ಸ್ಪಷ್ಟಪಡಿಸದೇ ಇರುವುದು ಅಪರಾಧವಾಗಿ ಕಾಣಿಸಿಕೊಳ್ಳುತ್ತದೆ.

ಇನ್ನು ಎಲ್ಲರೂ ಕೇಳುತ್ತಿರುವ ಪ್ರಶ್ನೆ, ಈ ಯೋಜನೆಗೆ ಬೇಕಾಗಿರುವ 3.6 ಲಕ್ಷ ಕೋಟಿ ಬರುವುದು ಎಲ್ಲಿಂದ? ಇದು ವಿತ್ತೀಯ ಹೊರೆಯಾಗುವುದಿಲ್ಲವೇ? ಇದು ಕಷ್ಟಸಾಧ್ಯವಾದರೂ ಅಸಾಧ್ಯವಂತೂ ಅಲ್ಲ. ಹಾಗೂ 7ನೇ ವೇತನ ಆಯೋಗ ಸರಕಾರೀ ನೌಕರರ ವೇತನ ಹೆಚ್ಚಿಸಿ ವರ್ಷಕ್ಕೆ 1 ಲಕ್ಷ ಕೋಟಿಗಿಂತಲೂ ಹೊರೆಯಾದಾಗ ಈ ಪ್ರಶ್ನೆ ಏಕೆ ಏಳುವುದಿಲ್ಲ ಎನ್ನುವುದನ್ನು ಗಮನಿಸಬೇಕಿದೆ. ಪ್ರತಿ ವರ್ಷ ಮೂರು ಲಕ್ಷ ಕೋಟಿಗಿಂತಲೂ ಹೆಚ್ಚಿನ ಸಾಲವನ್ನು ಕಾರ್ಪೋರೇಟ್‍ಗಳಿಗೆ ಮನ್ನಾ ಮಾಡಿದಾಗ ಈ ಪ್ರಶ್ನೆ ಏಕೆ ಏಳುವುದಿಲ್ಲ? ಈ ಪ್ರಶ್ನೆಗಳು ಸರಿಯಾಗಿದ್ದರೂ ಈ ಪ್ರಶ್ನೆಗಳಿಂದ ದುಡ್ಡೆಲ್ಲಿಂದ ಬರುವುದು ಎನ್ನುವ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ಕಾರ್ಪೋರೇಟ್‍ಗಳಿಗೆ ನೀಡುವ ಸಾಲ ಮನ್ನಾ, ತೆರಿಗೆ ಮನ್ನಾದಂತಹ ಕೊಡುಗೆಗಳಿಗೆ ಕಡಿವಾಣ ಹಾಕುವ ಧೈರ್ಯವನ್ನು ಕಾಂಗ್ರೆಸ್ ಪಕ್ಷ ಪ್ರದರ್ಶಿಸುವುದೇ? ಹಾಗೂ ಈ ಯೋಜನೆಯ ಎಲ್ಲ ವೆಚ್ಚವನ್ನು ಕೇಂದ್ರ ಸರಕಾರವೇ ಭರಿಸುವುದೇ ಅಥವಾ ರಾಜ್ಯ ಸರಕಾರಗಳ ಮೇಲೆಯೂ ಹೊರೆ ಬೀಳುವುದೇ ಎನ್ನುವುದರ ಬಗ್ಗೆಯೂ ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಹಾಗೂ ವೆಚ್ಚವನ್ನು ಭರಿಸಲು ಹೊಸ ತೆರಿಗೆಗಳನ್ನು ಪರಿಚಯಿಸಲಾಗುವುದೇ?

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಆಸ್ತಿಗೆ ತೆರಿಗೆ ವಿಧಿಸಲಾಗುತ್ತದೆ ಹಾಗೂ ವಾರಸುದಾರಿಕೆ ತೆರಿಗೆಯೂ ಹಲವಾರು ದೇಶಗಳಲ್ಲಿ ಚಾಲ್ತಿಯಲ್ಲಿದೆ. 100 ಕೋಟಿ ಆಸ್ತಿ ಹೊಂದಿದವರಿಗೆ ಈ ಎರಡೂ ತೆರಿಗೆಗಳನ್ನು ವಿಧಿಸುವುದು ತಪ್ಪಾಗಲಾರದು. ಆ ತೆರಿಗೆಯ ಹಣದಿಂದ ಈ ಯೋಜನೆಯ ವೆಚ್ಚವನ್ನು ಸುಲಭವಾಗಿ ಭರಿಸಬಹುದು. ಆದರೆ ನಮ್ಮ ರಾಜಕೀಯ ಪಕ್ಷಗಳಿಗೆ ಈ ಕ್ರಮವನ್ನು ಕೈಗೊಳ್ಳುವ ಧೈರ್ಯ ಮತ್ತು ಇಚ್ಛಾಶಕ್ತಿ ಇದೆಯೇ? ಇದ್ದರೆ ಅದನ್ನು ಬಹಿರಂಗಪಡಿಸಬಲ್ಲರೆ? ಇವ್ಯಾವ ಇರಾದೆಗಳೂ ಇಲ್ಲದೇ ಹಣ ಹೊಂದಿಸುವುದು ಹೇಗೆ ಎಂದು ಹೇಳದೇ ಹೋದರೆ ಇದನ್ನು ಇನ್ನೊಂದು ಚುನಾವಣಾ ‘ಜುಮ್ಲಾ’ ಎಂತಲೇ ಪರಿಗಣಿಸಬೇಕಾಗುತ್ತದೆ.

ನಿಜಕ್ಕೂ ಇಂತಹದೊಂದು ಯೋಜನೆಯು ಜಾರಿಗೆ ಬರುವುದಾದರೆ, ಅದು ಹಲವು ರೀತಿಯ ಸಕಾರಾತ್ಮಕ ಬೆಳವಣಿಗೆಗಳನ್ನು ತರಲಿದೆ. ದೇಶದ ಜನರಲ್ಲಿನ ಅತ್ಯಂತ ತಳದಲ್ಲಿರುವ ಶೇ.25ರಷ್ಟು ಜನರಿಗೆ ಒಂದಷ್ಟಾದರೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸುತ್ತದೆ. ಅಷ್ಟು ಬೃಹತ್ ಪ್ರಮಾಣದ ಜನರು ಮಾರುಕಟ್ಟೆಯಲ್ಲಿ ಇನ್ನಷ್ಟು ಸರಕುಗಳನ್ನು ಕೊಳ್ಳುವುದು, ಆರ್ಥಿಕತೆಗೆ ಲಾಭ ತಂದುಕೊಡುವುದೇ ಹೊರತು, ಅದು ಹೊರೆಯಾಗುವುದಿಲ್ಲ.

ವಿಶ್ವದ ಅನೇಕ ದೇಶಗಳಲ್ಲಿ ಬೇಸಿಕ್ ಯುನಿವರ್ಸಲ್ ಸ್ಕೀಮ್, ಸೋಷಿಯಲ್ ಸೆಕ್ಯುರಿಟಿ ಸ್ಕೀಮ್ ಮುಂತಾದ ಯೋಜನೆಗಳು ಚಾಲ್ತಿಯಲ್ಲಿವೆ. ಆದರೆ ಗಮನಿಸಬೇಕಾದದ್ದೇನೆಂದರೆ, ಎಲ್ಲ ದೇಶಗಳು ಎರಡನೇ ಮಹಾಯುದ್ಧದಲ್ಲಿ ಗೆದ್ದು ಸೋತು, ಬಸವಳಿದು, ಬಡತನ, ನಿರುದ್ಯೋಗದ ಸಮಸ್ಯೆಗಳನ್ನು ತಮ್ಮ ಸಮರ್ಥ ಆರ್ಥಿಕ ನೀತಿಗಳಿಂದ ಎದುರಿಸಿ ಅಭಿವೃದ್ಧಿ ಹೊಂದಿದ ದೇಶಗಳ ಪಟ್ಟಿಯಲ್ಲಿ ಬರುತ್ತವೆ. ಆ ಎಲ್ಲ ದೇಶಗಳು ಶಿಕ್ಷಣ, ಆರೋಗ್ಯಕ್ಕೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಿ ತದನಂತರ ಇಂತಹ ಯೋಜನೆಗಳನ್ನು ತಂದಿದ್ದು. ಈ ಎಲ್ಲಾ ಪ್ರಶ್ನೆಗಳ ಮೇಲೆ ಚರ್ಚೆ ನಡೆಯಬೇಕಿದೆ. ಎಲ್ಲಾ ಪಕ್ಷಗಳು ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಉತ್ತರ ನೀಡುವಂತೆ ರಾಜಕೀಯ ಪಕ್ಷಗಳನ್ನು ಬೇತಾಳನಂತೆ ಕಾಡುವುದು ನಮ್ಮ ಮಾಧ್ಯಮಗಳ ಮತ್ತು ನಮ್ಮ ಇಂದಿನ ಕರ್ತವ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....