Homeಮುಖಪುಟರಾಹುಲ್‍ಗಾಂಧಿಯ `ನ್ಯಾಯ್' ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ.....

ರಾಹುಲ್‍ಗಾಂಧಿಯ `ನ್ಯಾಯ್’ ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ…..

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಸೋಮವಾರ ಮಾರ್ಚ್ 25ನೇ ತಾರೀಖಿನಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ‘ನ್ಯಾಯ’ ಎನ್ನುವ ಕನಿಷ್ಠ ಆದಾಯ ಯೋಜನೆಯನ್ನು ಘೋಷಿಸಿದರು. ಜನೆವರಿ ತಿಂಗಳಲ್ಲಿ ಮೊದಲ ಬಾರಿ ಇದರ ಬಗ್ಗೆ ಮಾತನಾಡಿದ್ದರೂ ಅನೇಕ ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿದ್ದವು. ಎರಡು ತಿಂಗಳ ನಂತರ ಮಾಡಿದ ಈ ಘೋಷಣೆಯ ನಂತರವೂ ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಏನಿದು ‘ನ್ಯಾಯ?’ ‘ನ್ಯೂನತಮ್ ಆದಾಯ್ ಯೋಜನಾ’ ಅಂದರೆ ಕನಿಷ್ಠ ಆದಾಯ ಯೋಜನೆ. ರಾಹುಲ್‍ಗಾಂಧಿ ಘೋಷಿಸಿದ ಪ್ರಕಾರ ಭಾರತದ ಆರ್ಥಿಕವಾಗಿ ಕೆಳಗಿರುವ 20% ಕುಟುಂಬಗಳಿಗೆ ಹಣಸಹಾಯ. ಯಾವುದೇ ಕುಟುಂಬವು ತಿಂಗಳಿಗೆ 12 ಸಾವಿರಕ್ಕಿಂತಲೂ ಕಡಿಮೆ ಆದಾಯ ಹೊಂದಿದ್ದಲ್ಲಿ ಆ ಕುಟುಂಬಕ್ಕೆ ಸರಕಾರದಿಂದ 12 ಸಾವಿರಕ್ಕಿಂತ ಎಷ್ಟು ಕಡಿಮೆ ಇದೆಯೋ, ಅಷ್ಟು ಹಣ ನೀಡಲಾಗುವುದು. ಈ 20% ಕುಟುಂಬಗಳ ಸರಾಸರಿ ಆದಾಯ 6,000/- ಆಗಿರುವುದರಿಂದ ಆ 20% ಅಂದರೆ 5 ಕೋಟಿ ಕುಟುಂಬಗಳಿಗೆ ಪ್ರತಿತಿಂಗಳು 6,000/ ಧನಸಹಾಯ. ಅಂದರೆ ಒಂದು ಕುಟುಂಬಕ್ಕೆ ಪ್ರತೀ ವರ್ಷ 72,000/-, ತಗಲುವ ಒಟ್ಟು ವೆಚ್ಚ 3.6 ಲಕ್ಷ ಕೋಟಿ ರೂಪಾಯಿಗಳು, ಅದು ಭಾರತದ ವಾರ್ಷಿಕ ಬಜೆಟ್‍ನ 13%, ಜಿಡಿಪಿಯ 2%.

ಈ ಘೋಷಣೆಯಿಂದ ಆದ ಮೊದಲ ಬದಲಾವಣೆ- ಎಲ್ಲಾ ಪಕ್ಷಗಳು ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳು ಮಾತನಾಡಬೇಕಿರುವ ಅಸಲೀ ವಿಷಯಗಳ ಬಗ್ಗೆ ಮಾತನಾಡಲಾರಂಭಿಸಿವೆ. ಭಯೋತ್ಪಾದನೆ, ರಾಷ್ಟ್ರೀಯ ಸುರಕ್ಷತೆಯಂತಹ ಎಲ್ಲರ ಒಮ್ಮತವಿರುವ ವಿಷಯಗಳಲ್ಲಿ ಸುಖಾಸುಮ್ಮನೇ ಅರಚಾಡಿ, ಸುಳ್ಳು ಹೇಳಿ, ಅಸಲೀ ಸಮಸ್ಯೆಗಳನ್ನು ಮರೆಸಲು ಯತ್ನಿಸುತ್ತಿದ್ದರು. ಈ ಘೋಷಣೆಯಿಂದ ಅದು ಬದಲಾಗಿ, ರಾಹುಲ್ ಗಾಂಧಿ ಘೋಷಿಸಿರುವ ಯೋಜನೆಯ ಬಗ್ಗೆ, ಇಂತಹ ಯೋಜನೆಗಳ ಬಗ್ಗೆ ಈ ಸರಕಾರದ ಪ್ರದರ್ಶನದ ಬಗ್ಗೆ ಸೂಕ್ತ ಪ್ರಶ್ನೆಗಳನ್ನು ಎಲ್ಲರೂ ಎತ್ತಲಾರಂಭಿಸಿದ್ದಾರೆ.

ಈ ಘೋಷಣೆಯಿಂದ ಆದ ಇನ್ನೊಂದು ಬದಲಾವಣೆ- ‘ಭಾರತದ ಬಡಜನರ’ ಮೇಲೆ ಮತ್ತೊಮ್ಮೆ ಗಮನ ಕೇಂದ್ರೀಕೃತವಾಗಿದೆ. ಮಧ್ಯಮ ಮತ್ತು ಉಚ್ಚ ವರ್ಗದ ಜನರಿಗೆ ಕಲ್ಯಾಣ ಯೋಜನೆಗಳ ಬಗ್ಗೆ ಅಸಮಾಧಾನ ಇರುವುದರಿಂದ, ಅವರನ್ನು ಮೆಚ್ಚಿಸಲು ನಮ್ಮ ರಾಜಕೀಯ ಪಕ್ಷಗಳು ಕಲ್ಯಾಣ ಯೋಜನೆಗಳನ್ನು ಘೋಷಿಸಲು ಹಿಂಜರಿಯುವುದು ವಾಸ್ತವ. 2004 ರಲ್ಲಿ ಕಾಂಗ್ರೆಸ್ ಪಕ್ಷವು ‘ಆಮ್‍ಆದ್ಮಿ’ ಯ ವಿಷಯವನ್ನು ತಂದಿದ್ದೂ ಇದೇ ಕಾರಣಕ್ಕೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆಗಳನ್ನು ಕೇಳಲೇಬೇಕಿದೆ. ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗುವುದಕ್ಕಿಂತ ಮುಂಚೆ ಯಾವ ಕಾರಣಕ್ಕೂ ನಂಬಲೇಬಾರದು. ಕಳೆದ ಬಾರಿ ಮೋದಿ ಅವರು ಪ್ರತಿ ಖಾತೆಗೆ 15 ಲಕ್ಷದ ಮಾತುಗಳನ್ನಾಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಸೃಷ್ಟಿಯ ಬಗ್ಗೆ ಮಾತನಾಡಿದ್ದರು, ರೈತರ ಆದಾಯವನ್ನು ದ್ವಿಗುಣಗೊಳಿಸುವ ಬಗ್ಗೆ ಮಾತನಾಡಿದ್ದರು. ಆದರೆ ಯಾವುದೇ ಯೋಜನೆಗೆ ನೀಲನಕ್ಷೆಯನ್ನು ನೀಡಿರಲಿಲ್ಲ. ಈಗ ಆ ಭರವಸೆಗಳ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷ ಇವೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ತನಕ ಬೇತಾಳದಂತೆ ಬೆನ್ನಟ್ಟಬೇಕಿದೆ.

ಈ ಘೋಷಣೆ ಮತದಾರರನ್ನು ತನ್ನತ್ತ ಸೆಳೆಯಲು ಮಾಡಿದ ತಂತ್ರವೇ ಎನ್ನುವ ಪ್ರಶ್ನೆಯನ್ನು ಕೈಬಿಡುವ. ಉತ್ತರ ಎಲ್ಲರಿಗೂ ಗೊತ್ತು, ಆದರೆ ಭರವಸೆ ನೀಡಿದ ಭರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದು ಈ ನೀತಿಗಳನ್ನು ಜಾರಿಗೊಳಿಸಿದಲ್ಲಿ ಲಾಭ ಆಗುವುದು ಬಡವರಿಗೆ. ಈ ಯೋಜನೆಯಿಂದ ಬಡವರು ಸೋಮಾರಿಗಳಾಗುವುದಿಲ್ಲವೇ ಎನ್ನುವ ಮೂರ್ಖ ಪ್ರಶ್ನೆಯನ್ನು ಕೈಬಿಡುವ. ತಮ್ಮ ಜೀವನಮಟ್ಟವನ್ನು ಹೆಚ್ಚಿಸಲು ಎಲ್ಲರೂ ದುಡಿಯುತ್ತಲೇ ಇರುತ್ತಾರೆ ಹಾಗೂ ಒಂದು ವೇಳೆ ಈ ಯೋಜನೆ ಅನ್ವಯವಾದರೆ ಅವರ ಪ್ರಯತ್ನಕ್ಕೆ ಚೈತನ್ಯ ಬರುವುದು ಸರಳ ಸತ್ಯ. ಸದ್ಯಕ್ಕೆ ಈಗಾಗಲೇ ಕೇಂದ್ರ ಸರಕಾರದ ಅನೇಕ ಕಲ್ಯಾಣ ಯೋಜನೆಗಳು ಜಾರಿಯಲ್ಲಿವೆ, ಈ ಯೋಜನೆ ಜಾರಿಯಾದಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ ಯೋಜನೆಗಳನ್ನು ಕೈಬಿಡಲಾಗುತ್ತದೆಯೇ ಅಥವಾ ಎಲ್ಲ ಕಲ್ಯಾಣ ಯೋಜನೆಗಳೊಂದಿಗೆ ಹೆಚ್ಚುವರಿಯಾಗಿ ಇದನ್ನು ಅನುಷ್ಠಾನಗೊಳಿಸಲಾಗುತ್ತದೆಯೇ ಎನ್ನುವುದನ್ನು ಸ್ಪಷ್ಟಪಡಿಸದೇ ಇರುವುದು ಅಪರಾಧವಾಗಿ ಕಾಣಿಸಿಕೊಳ್ಳುತ್ತದೆ.

ಇನ್ನು ಎಲ್ಲರೂ ಕೇಳುತ್ತಿರುವ ಪ್ರಶ್ನೆ, ಈ ಯೋಜನೆಗೆ ಬೇಕಾಗಿರುವ 3.6 ಲಕ್ಷ ಕೋಟಿ ಬರುವುದು ಎಲ್ಲಿಂದ? ಇದು ವಿತ್ತೀಯ ಹೊರೆಯಾಗುವುದಿಲ್ಲವೇ? ಇದು ಕಷ್ಟಸಾಧ್ಯವಾದರೂ ಅಸಾಧ್ಯವಂತೂ ಅಲ್ಲ. ಹಾಗೂ 7ನೇ ವೇತನ ಆಯೋಗ ಸರಕಾರೀ ನೌಕರರ ವೇತನ ಹೆಚ್ಚಿಸಿ ವರ್ಷಕ್ಕೆ 1 ಲಕ್ಷ ಕೋಟಿಗಿಂತಲೂ ಹೊರೆಯಾದಾಗ ಈ ಪ್ರಶ್ನೆ ಏಕೆ ಏಳುವುದಿಲ್ಲ ಎನ್ನುವುದನ್ನು ಗಮನಿಸಬೇಕಿದೆ. ಪ್ರತಿ ವರ್ಷ ಮೂರು ಲಕ್ಷ ಕೋಟಿಗಿಂತಲೂ ಹೆಚ್ಚಿನ ಸಾಲವನ್ನು ಕಾರ್ಪೋರೇಟ್‍ಗಳಿಗೆ ಮನ್ನಾ ಮಾಡಿದಾಗ ಈ ಪ್ರಶ್ನೆ ಏಕೆ ಏಳುವುದಿಲ್ಲ? ಈ ಪ್ರಶ್ನೆಗಳು ಸರಿಯಾಗಿದ್ದರೂ ಈ ಪ್ರಶ್ನೆಗಳಿಂದ ದುಡ್ಡೆಲ್ಲಿಂದ ಬರುವುದು ಎನ್ನುವ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ಕಾರ್ಪೋರೇಟ್‍ಗಳಿಗೆ ನೀಡುವ ಸಾಲ ಮನ್ನಾ, ತೆರಿಗೆ ಮನ್ನಾದಂತಹ ಕೊಡುಗೆಗಳಿಗೆ ಕಡಿವಾಣ ಹಾಕುವ ಧೈರ್ಯವನ್ನು ಕಾಂಗ್ರೆಸ್ ಪಕ್ಷ ಪ್ರದರ್ಶಿಸುವುದೇ? ಹಾಗೂ ಈ ಯೋಜನೆಯ ಎಲ್ಲ ವೆಚ್ಚವನ್ನು ಕೇಂದ್ರ ಸರಕಾರವೇ ಭರಿಸುವುದೇ ಅಥವಾ ರಾಜ್ಯ ಸರಕಾರಗಳ ಮೇಲೆಯೂ ಹೊರೆ ಬೀಳುವುದೇ ಎನ್ನುವುದರ ಬಗ್ಗೆಯೂ ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಹಾಗೂ ವೆಚ್ಚವನ್ನು ಭರಿಸಲು ಹೊಸ ತೆರಿಗೆಗಳನ್ನು ಪರಿಚಯಿಸಲಾಗುವುದೇ?

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಆಸ್ತಿಗೆ ತೆರಿಗೆ ವಿಧಿಸಲಾಗುತ್ತದೆ ಹಾಗೂ ವಾರಸುದಾರಿಕೆ ತೆರಿಗೆಯೂ ಹಲವಾರು ದೇಶಗಳಲ್ಲಿ ಚಾಲ್ತಿಯಲ್ಲಿದೆ. 100 ಕೋಟಿ ಆಸ್ತಿ ಹೊಂದಿದವರಿಗೆ ಈ ಎರಡೂ ತೆರಿಗೆಗಳನ್ನು ವಿಧಿಸುವುದು ತಪ್ಪಾಗಲಾರದು. ಆ ತೆರಿಗೆಯ ಹಣದಿಂದ ಈ ಯೋಜನೆಯ ವೆಚ್ಚವನ್ನು ಸುಲಭವಾಗಿ ಭರಿಸಬಹುದು. ಆದರೆ ನಮ್ಮ ರಾಜಕೀಯ ಪಕ್ಷಗಳಿಗೆ ಈ ಕ್ರಮವನ್ನು ಕೈಗೊಳ್ಳುವ ಧೈರ್ಯ ಮತ್ತು ಇಚ್ಛಾಶಕ್ತಿ ಇದೆಯೇ? ಇದ್ದರೆ ಅದನ್ನು ಬಹಿರಂಗಪಡಿಸಬಲ್ಲರೆ? ಇವ್ಯಾವ ಇರಾದೆಗಳೂ ಇಲ್ಲದೇ ಹಣ ಹೊಂದಿಸುವುದು ಹೇಗೆ ಎಂದು ಹೇಳದೇ ಹೋದರೆ ಇದನ್ನು ಇನ್ನೊಂದು ಚುನಾವಣಾ ‘ಜುಮ್ಲಾ’ ಎಂತಲೇ ಪರಿಗಣಿಸಬೇಕಾಗುತ್ತದೆ.

ನಿಜಕ್ಕೂ ಇಂತಹದೊಂದು ಯೋಜನೆಯು ಜಾರಿಗೆ ಬರುವುದಾದರೆ, ಅದು ಹಲವು ರೀತಿಯ ಸಕಾರಾತ್ಮಕ ಬೆಳವಣಿಗೆಗಳನ್ನು ತರಲಿದೆ. ದೇಶದ ಜನರಲ್ಲಿನ ಅತ್ಯಂತ ತಳದಲ್ಲಿರುವ ಶೇ.25ರಷ್ಟು ಜನರಿಗೆ ಒಂದಷ್ಟಾದರೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸುತ್ತದೆ. ಅಷ್ಟು ಬೃಹತ್ ಪ್ರಮಾಣದ ಜನರು ಮಾರುಕಟ್ಟೆಯಲ್ಲಿ ಇನ್ನಷ್ಟು ಸರಕುಗಳನ್ನು ಕೊಳ್ಳುವುದು, ಆರ್ಥಿಕತೆಗೆ ಲಾಭ ತಂದುಕೊಡುವುದೇ ಹೊರತು, ಅದು ಹೊರೆಯಾಗುವುದಿಲ್ಲ.

ವಿಶ್ವದ ಅನೇಕ ದೇಶಗಳಲ್ಲಿ ಬೇಸಿಕ್ ಯುನಿವರ್ಸಲ್ ಸ್ಕೀಮ್, ಸೋಷಿಯಲ್ ಸೆಕ್ಯುರಿಟಿ ಸ್ಕೀಮ್ ಮುಂತಾದ ಯೋಜನೆಗಳು ಚಾಲ್ತಿಯಲ್ಲಿವೆ. ಆದರೆ ಗಮನಿಸಬೇಕಾದದ್ದೇನೆಂದರೆ, ಎಲ್ಲ ದೇಶಗಳು ಎರಡನೇ ಮಹಾಯುದ್ಧದಲ್ಲಿ ಗೆದ್ದು ಸೋತು, ಬಸವಳಿದು, ಬಡತನ, ನಿರುದ್ಯೋಗದ ಸಮಸ್ಯೆಗಳನ್ನು ತಮ್ಮ ಸಮರ್ಥ ಆರ್ಥಿಕ ನೀತಿಗಳಿಂದ ಎದುರಿಸಿ ಅಭಿವೃದ್ಧಿ ಹೊಂದಿದ ದೇಶಗಳ ಪಟ್ಟಿಯಲ್ಲಿ ಬರುತ್ತವೆ. ಆ ಎಲ್ಲ ದೇಶಗಳು ಶಿಕ್ಷಣ, ಆರೋಗ್ಯಕ್ಕೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಿ ತದನಂತರ ಇಂತಹ ಯೋಜನೆಗಳನ್ನು ತಂದಿದ್ದು. ಈ ಎಲ್ಲಾ ಪ್ರಶ್ನೆಗಳ ಮೇಲೆ ಚರ್ಚೆ ನಡೆಯಬೇಕಿದೆ. ಎಲ್ಲಾ ಪಕ್ಷಗಳು ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಉತ್ತರ ನೀಡುವಂತೆ ರಾಜಕೀಯ ಪಕ್ಷಗಳನ್ನು ಬೇತಾಳನಂತೆ ಕಾಡುವುದು ನಮ್ಮ ಮಾಧ್ಯಮಗಳ ಮತ್ತು ನಮ್ಮ ಇಂದಿನ ಕರ್ತವ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...