HomeUncategorizedರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂದು ಪಕ್ಷದ ಹಿರಿಯ ನಾಯಕ ಶಿವಾನಂದ್ ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂಬ ಹೇಳಿಕೆ ತಮ್ಮ ಪಕ್ಷದ ಹಿರಿಯ ನಾಯಕನ ಹೇಳಿಕೆಗೆ ಆರ್‌ಜೆಡಿ ಪ್ರತಿಕ್ರಿಯಿಸಿದ್ದು, “ಶಿವಾನಂದ್ ತಿವಾರಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗಗನ್ ಹೇಳಿದ್ದಾರೆ.

“ಶಿವಾನಂದ್ ತಿವಾರಿ ಹಿರಿಯ ನಾಯಕ ಮತ್ತು ನಮಗೆ ರಕ್ಷಕರಾಗಿದ್ದಾರೆ. ಆದರೆ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ತೇಜಶ್ವಿ ಯಾದವ್ ಮತ್ತು ಆರ್‌ಜೆಡಿಯ ಇತರ ಹಿರಿಯ ನಾಯಕರು ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸುತ್ತಾರೆ” ಎಂದು ಗಗನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಆ‌ರ್‌‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಅವರಿಗೆ ಆಪ್ತವಾಗಿರುವ ಶಿವಾನಂದ್ ತಿವಾರಿ, “ರಾಹುಲ್ ಗಾಂಧಿ ಬಿಹಾರಕ್ಕೆ ಭೇಟಿ ನೀಡಿ ಮೂರು ದಿನಗಳಲ್ಲಿ, ದಿನಕ್ಕೆ ಎರಡು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಿಯಾಂಕಾ ಗಾಂಧಿ ಎಲ್ಲೂ ಕಾಣಿಸಲಿಲ್ಲ. ಚುನಾವಣಾ ಉತ್ತುಂಗದಲ್ಲಿದ್ದಾಗ, ಅವರು ಶಿಮ್ಲಾದಲ್ಲಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಪಿಕ್ನಿಕ್ ಮಾಡುತ್ತಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಪಕ್ಷದ ಕಳಪೆ ಸಾಧನೆಯ ಕಾರಣಕ್ಕೆ ಮಿತ್ರರಾಷ್ಟ್ರ ಆರ್‌ಜೆಡಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, 70 ಸ್ಥಾನಗಳನ್ನು ನಡೆಸಿದರೂ 70 ರ್‍ಯಾಲಿಯನ್ನು ನಡೆಸಲಿಲ್ಲ. ಕಾಂಗ್ರೆಸ್ ಅರೆ ಮನಸ್ಸಿನಿಂದ ಹೋರಾಟ ನಡೆಸಿದೆ ಎಂದು ತಿವಾರಿ ಆರೋಪಿಸಿದ್ದರು.

ಶಿವಾನಂದ್ ತಿವಾರಿ ಟೀಕೆಗೆ ಕಾಂಗ್ರೆಸ್ ಕೂಡಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು, “ಅವರು ಆರ್‌ಜೆಡಿಯ ಅಧಿಕೃತ ವಕ್ತಾರರಲ್ಲ. ಅವರು ಬಿಜೆಪಿ ಮತ್ತು ಜೆಡಿಯು ಜೊತೆ ಸಂಬಂಧ ಹೊಂದಿದ್ದಾರೆ ಹಾಗೂ ಅವರ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಎಐಸಿಸಿ ಮಾಧ್ಯಮ ಸಮಿತಿ ಸದಸ್ಯ ಪ್ರೇಮ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

“ಗಿರಿರಾಜ್ ಸಿಂಗ್ ಮತ್ತು ಶಹನಾವಾಜ್ ಹುಸೇನ್ ಅವರ ಭಾಷೆ ಮಾತನಾಡುವ ಆರ್‌ಜೆಡಿ ನಾಯಕ ಕಾಂಗ್ರೆಸ್‌ಗೆ ಸ್ವೀಕಾರಾರ್ಹವಲ್ಲ. ಸಮ್ಮಿಶ್ರ ಧರ್ಮ ಎಂಬುವುದು ಇದೆ ಮತ್ತು ಎಲ್ಲಾ ಪಕ್ಷಗಳು ಇದನ್ನು ಅನುಸರಿಸಬೇಕು” ಎಂದು ಅವರು ಟ್ವೀಟ್ ಮಾಡಿ‌ದ್ದರು.

ಕೊರೊನಾ ನಂತರ ದೇಶದಲ್ಲಿ ನಡೆದ ಮೊದಲ ಚುನಾವಣೆಯಾದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಎನ್‌ಡಿಎ ಕೂಟ ಭಾರಿ ಕಷ್ಟ ಪಟ್ಟು ಜಯಗಳಿಸಿದೆ. ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಉತ್ತಮ ಸಾಧನೆ ಮಾಡಿದ್ದು ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊಮ್ಮಿದೆ. ಕಾಂಗ್ರೆಸ್ ತಮಗೆ ನೀಡಿದ್ದ 70 ಕ್ಷೇತ್ರದಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದು ಕಳಪೆ ಸಾಧನೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...