HomeUncategorizedರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂದು ಪಕ್ಷದ ಹಿರಿಯ ನಾಯಕ ಶಿವಾನಂದ್ ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂಬ ಹೇಳಿಕೆ ತಮ್ಮ ಪಕ್ಷದ ಹಿರಿಯ ನಾಯಕನ ಹೇಳಿಕೆಗೆ ಆರ್‌ಜೆಡಿ ಪ್ರತಿಕ್ರಿಯಿಸಿದ್ದು, “ಶಿವಾನಂದ್ ತಿವಾರಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗಗನ್ ಹೇಳಿದ್ದಾರೆ.

“ಶಿವಾನಂದ್ ತಿವಾರಿ ಹಿರಿಯ ನಾಯಕ ಮತ್ತು ನಮಗೆ ರಕ್ಷಕರಾಗಿದ್ದಾರೆ. ಆದರೆ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ತೇಜಶ್ವಿ ಯಾದವ್ ಮತ್ತು ಆರ್‌ಜೆಡಿಯ ಇತರ ಹಿರಿಯ ನಾಯಕರು ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸುತ್ತಾರೆ” ಎಂದು ಗಗನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಆ‌ರ್‌‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಅವರಿಗೆ ಆಪ್ತವಾಗಿರುವ ಶಿವಾನಂದ್ ತಿವಾರಿ, “ರಾಹುಲ್ ಗಾಂಧಿ ಬಿಹಾರಕ್ಕೆ ಭೇಟಿ ನೀಡಿ ಮೂರು ದಿನಗಳಲ್ಲಿ, ದಿನಕ್ಕೆ ಎರಡು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಿಯಾಂಕಾ ಗಾಂಧಿ ಎಲ್ಲೂ ಕಾಣಿಸಲಿಲ್ಲ. ಚುನಾವಣಾ ಉತ್ತುಂಗದಲ್ಲಿದ್ದಾಗ, ಅವರು ಶಿಮ್ಲಾದಲ್ಲಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಪಿಕ್ನಿಕ್ ಮಾಡುತ್ತಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಪಕ್ಷದ ಕಳಪೆ ಸಾಧನೆಯ ಕಾರಣಕ್ಕೆ ಮಿತ್ರರಾಷ್ಟ್ರ ಆರ್‌ಜೆಡಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, 70 ಸ್ಥಾನಗಳನ್ನು ನಡೆಸಿದರೂ 70 ರ್‍ಯಾಲಿಯನ್ನು ನಡೆಸಲಿಲ್ಲ. ಕಾಂಗ್ರೆಸ್ ಅರೆ ಮನಸ್ಸಿನಿಂದ ಹೋರಾಟ ನಡೆಸಿದೆ ಎಂದು ತಿವಾರಿ ಆರೋಪಿಸಿದ್ದರು.

ಶಿವಾನಂದ್ ತಿವಾರಿ ಟೀಕೆಗೆ ಕಾಂಗ್ರೆಸ್ ಕೂಡಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು, “ಅವರು ಆರ್‌ಜೆಡಿಯ ಅಧಿಕೃತ ವಕ್ತಾರರಲ್ಲ. ಅವರು ಬಿಜೆಪಿ ಮತ್ತು ಜೆಡಿಯು ಜೊತೆ ಸಂಬಂಧ ಹೊಂದಿದ್ದಾರೆ ಹಾಗೂ ಅವರ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಎಐಸಿಸಿ ಮಾಧ್ಯಮ ಸಮಿತಿ ಸದಸ್ಯ ಪ್ರೇಮ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

“ಗಿರಿರಾಜ್ ಸಿಂಗ್ ಮತ್ತು ಶಹನಾವಾಜ್ ಹುಸೇನ್ ಅವರ ಭಾಷೆ ಮಾತನಾಡುವ ಆರ್‌ಜೆಡಿ ನಾಯಕ ಕಾಂಗ್ರೆಸ್‌ಗೆ ಸ್ವೀಕಾರಾರ್ಹವಲ್ಲ. ಸಮ್ಮಿಶ್ರ ಧರ್ಮ ಎಂಬುವುದು ಇದೆ ಮತ್ತು ಎಲ್ಲಾ ಪಕ್ಷಗಳು ಇದನ್ನು ಅನುಸರಿಸಬೇಕು” ಎಂದು ಅವರು ಟ್ವೀಟ್ ಮಾಡಿ‌ದ್ದರು.

ಕೊರೊನಾ ನಂತರ ದೇಶದಲ್ಲಿ ನಡೆದ ಮೊದಲ ಚುನಾವಣೆಯಾದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಎನ್‌ಡಿಎ ಕೂಟ ಭಾರಿ ಕಷ್ಟ ಪಟ್ಟು ಜಯಗಳಿಸಿದೆ. ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಉತ್ತಮ ಸಾಧನೆ ಮಾಡಿದ್ದು ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊಮ್ಮಿದೆ. ಕಾಂಗ್ರೆಸ್ ತಮಗೆ ನೀಡಿದ್ದ 70 ಕ್ಷೇತ್ರದಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದು ಕಳಪೆ ಸಾಧನೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...