Homeಕರೋನಾ ತಲ್ಲಣಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇಯ ಅಲೆಯ ಸಂದರ್ಭದಲ್ಲಿ ಸಂಭವಿಸಿದ 90% ಸಾವುಗಳನ್ನು ಸರ್ಕಾರ ತಡೆಯಬಹುದಿತ್ತು. ಪ್ರಧಾನಿಯವರ ಕಣ್ಣೀರಿನಿಂದ ದೇಶದ ಜನರ ಕಣ್ಣೀರನ್ನು ಒರೆಸಲು ಸಾಧ್ಯವಿಲ್ಲ. ಅವರ ಕಣ್ಣೀರಿನಿಂದ ಸಾವುಗಳನ್ನು ತಡೆಗಟ್ಟಲಾಗಲಿಲ್ಲ. ಆದರೆ ಸಕಾಲಕ್ಕೆ ಆಕ್ಸಿಜನ್ ಸಿಕ್ಕಿದರೆ ಸಾವುಗಳನ್ನು ತಡೆಗಟ್ಟಬಹುದಿತ್ತು. ಪ್ರಧಾನಿಗಳು ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಆಕ್ಸಿಜನ್ ಕೊರತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಇದರ ಪರಿಣಾಮ ದೇಶದಲ್ಲಿ ಸಾವಿರಾರು ಜನರು ವೈದ್ಯಕೀಯ ಆಮ್ಮಜನಕದ ಕೊರತೆಯಿಂದ ಪರದಾಡುವಂತಾಯಿತು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ “ಸರ್ಕಾರದ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯ ಕುರಿತು ಶ್ವೇತಪತ್ರವನ್ನು ಹೊರಡಿಸುತ್ತಿದ್ದೇನೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ಭಾರತದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರೊನಾ 3ನೇ ಅಲೆ ವಿರುದ್ಧ ಹೋರಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಸಹಾಯವಾಗಲಿ ಎಂದು ಈ ಶ್ವೇತಪತ್ರ ಹೊರಡಿಸಿದ್ದೇನೆ ಎಂದರು.

ಕೆಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ 4 ಲಕ್ಷ ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುತ್ತಿದೆ. ಆದರೆ ಸರ್ಕಾರದ ಬಳಿ ಕೊರೋನಾದಿಂದ ಮೃತಪಟ್ಟ ಕುಟುಂಬಗಳ ವ್ಯಕ್ತಿಗಳಿಗೆ ಪರಿಹಾರ ನೀಡಲು ಹಣವಿಲ್ಲ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಅಂತಹ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ರಾಹುಲ್ ಗಾಂಧಿ ಕೆಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ಕಾರಣದಿಂದ ಲಕ್ಷಾಂತರ ಜನ ಕಿರು ಉದ್ಯಮಿಗಳು, ಚಿಲ್ಲರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಹಣ್ಣು ತರಕಾರಿ ಮಾರುವವರ ಬದುಕು ಬೀದಿಗೆ ಬಿದ್ದಿದೆ. ಕೆಂದ್ರ ಸರ್ಕಾರ ಇವರೆಲ್ಲರಿಗೆ ನೇರವಾಗಿ ನಗದು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾವು ಹೊರಡಿಸಿರುವ ಶ್ವೇತಪತ್ರ ಕೊರೋನಾ ಸಾಂಕ್ರಾಮಿಕದ 3ನೇ ಅಲೆಯನ್ನು ಎದುರಿಸಲು ಸರ್ಕಾರ ಮಾಡಿಕೊಳ್ಳಬೇಕಾದ ಸಿದ್ಧತೆಯ ನೀಲನಕ್ಷೆಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ಧೇಶವಿಲ್ಲ. ತಜ್ಞರೊಂದಿಗಿನ ಸಮಾಲೋಚನೆಯ ನಂತರ ಈ ಶ್ವೇತಪತ್ರವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕವನ್ನು ಎದುರಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದಲೇ ಇದು ಸಾಬೀತಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳು ಮತ್ತೆ ಮರುಕಳಿಸಬಾರದೆಂಬ ಕಾರಣಕ್ಕೆ ಶ್ವೇತಪತ್ರ ಹೊರಡಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.


ಇದನ್ನೂ ಓದಿ : ಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ – ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...