ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಹೋರಾಟಗಾರರ ಪರವಾಗಿ ನಾನು ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಭಾರತ ಐಕ್ಯತಾ ಯಾತ್ರೆಯ ಕರ್ನಾಟಕ ಚರಣದ 6 ನೇ ದಿನ ಹುತಾತ್ಮ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ರವರ ತಾಯಿ ಇಂದಿರಾ ಲಂಕೇಶ್ ಮತ್ತು ಸಹೋದರಿ ಕವಿತಾ ಲಂಕೇಶ್ರವರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.
ತದನಂತರ ಟ್ವಿಟರ್ನಲ್ಲಿ ಭಾರತ ಐಕ್ಯತಾ ಯಾತ್ರೆಯ ಫೋಟೊ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಗೌರಿ ಸತ್ಯದ ಪರ ನಿಂತರು. ಧೈರ್ಯದ ಪರ ನಿಂತರು ಮತ್ತು ಸ್ವಾತಂತ್ರ್ಯಕ್ಕಾಗಿ ನಿಂತರು. ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿಯಾಗಿದ್ದು, ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.
Gauri stood for Truth
Gauri stood for Courage
Gauri stood for FreedomI stand for Gauri Lankesh and countless others like her, who represent the true spirit of India.
Bharat Jodo Yatra is their voice.
It can never be silenced. pic.twitter.com/TIpMIu36nY— Rahul Gandhi (@RahulGandhi) October 7, 2022
ಪಾದಯಾತ್ರೆ ಬಳಿಕ ಈದಿನ.ಕಾಂ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಕವಿತಾ ಲಂಕೇಶ್, “ನಮ್ಮ ತಾಯಿಯನ್ನು ಪ್ರೀತಿಯಿಂದ ಅಪ್ಪಿಕೊಂಡು ರಾಹುಲ್ ಕೈ ಹಿಡಿದು ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಗೌರಿ ಲಂಕೇಶ್ರವರ ಕುರಿತು ಮಾತನಾಡಿ, ವಿಚಾರಣೆಯ ಕುರಿತು ಮಾಹಿತಿ ಪಡೆದುಕೊಂಡರು. ಕೊನೆಗೆ ನಮ್ಮ ತಾಯಿಯನ್ನು ಕಾರಿನವರೆಗೂ ಕರೆದುಕೊಂಡು ಹೋಗಿ ಕಾರು ಹತ್ತುವವರೆಗೂ ಜೊತೆಗಿದ್ದರು. ಆಗ ನನಗೆ ಅವರ ತಾಯಿ ಸೋನಿಯಾ ಗಾಂಧಿಯವರನ್ನು ಕಳಿಸಿಕೊಟ್ಟಿದ್ದು ನೆನಪಿಗೆ ಬಂತು. ರಾಹುಲ್ ಒಬ್ಬ ಜನರೊಟ್ಟಿಗೆ ಬೆರೆಯುವ ಪ್ರಾಮಾಣಿಕ ವ್ಯಕ್ತಿ ಎಂಬ ಭಾವ ಮೂಡಿತು” ಎಂದಿದ್ದಾರೆ.
ಇದನ್ನೂ ಓದಿ; ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ; ಆರೋಪಿಗಳನ್ನು ಗುರುತು ಹಚ್ಚಿದ ಪ್ರಮುಖ ಸಾಕ್ಷಿ
ವ್ಯಾಪಾರಿ ಇಂದ್ರಜಿತ್ ಲಂಕೇಶ್ ಎಲ್ಲಿ ಕಾಣ್ತಿಲ್ಲ!
ಆಪ್ಪ ಈತನನ್ನು ತಲೆ ಮೇಲಿಟ್ಟು ಮೆರೆಸಿದ್ದರು.