Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

ಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಭಾರತ್ ಜೋಡೋ ನ್ಯಾಯ ಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ರಾಹುಲ್‌ ಗಾಂಧಿ ನಾಗರಿಕರ ಜೊತೆ ಸಂವಾದ ನಡೆಸಿದ್ದು, ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇಂದು ಅಸ್ಸಾಂನ ಲಖಿಂಪುರ ಜಿಲ್ಲೆಯಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಸ್ತಾನವನ್ನು ದೆಹಲಿಯಿಂದ ಒಂದೇ ಭಾಷೆ, ಒಬ್ಬ ನಾಯಕನಿಂದ ನಡೆಸಬೇಕು ಎಂದು ಬಯಸುತ್ತದೆ. ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ ಎಂದು ಹೇಳಿದ್ದಾರೆ.

ಅಸ್ಸಾಂನ ಮಜುಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಜನತಾ ಪಕ್ಷವು ಆದಿವಾಸಿಗಳನ್ನು ಅರಣ್ಯಕ್ಕೆ ಸೀಮಿತಗೊಳಿಸಲು ಮತ್ತು ಶಿಕ್ಷಣ ಮತ್ತು ಅವಕಾಶಗಳಿಂದ ವಂಚಿತರನ್ನಾಗಿಸಲು ಬಯಸುತ್ತದೆ. ಕಾಂಗ್ರೆಸ್, ಬುಡಕಟ್ಟು ಜನಾಂಗದವರನ್ನು ‘ಆದಿವಾಸಿಗಳು’ (ಮೊದಲ ನಿವಾಸಿಗಳು) ಎಂದು ಉಲ್ಲೇಖಿಸಿದರೆ, ಬಿಜೆಪಿ ಅವರನ್ನು ಕೇವಲ ‘ವನವಾಸಿಗಳು’ (ಅರಣ್ಯವಾಸಿಗಳು) ಎಂದು ಸೀಮಿತಗೊಳಿಸುತ್ತದೆ ಎಂದು ಅವರು ಹೇಳಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ಮುಂದುವರಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ರಾಹುಲ್‌ ವಾಗ್ದಾಳಿ ನಡೆಸಿದರು. ಮಣಿಪುರದಲ್ಲಿ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರ್ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪ್ರಧಾನಿ ಒಂದೇ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಅಸ್ಸಾಂ ಸಿಎಂ ದೇಶದ ಅತ್ಯಂತ ಭ್ರಷ್ಟ ಸಿಎಂ, ಅವರು ಬಿಜೆಪಿಯ ಇತರ ಸಿಎಂಗಳಿಗೆ ಭ್ರಷ್ಟಾಚಾರ ನಡೆಸಲು ಕಲಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೆಂಗ್ರೈಮುಖ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌರವ್‌ ಗೊಗೋಯ್, ಯಾತ್ರೆ ಮೂಲಕ ನಾವು ಜನರ ಪ್ರಮುಖ ಸಮಸ್ಯೆಯನ್ನು ಎತ್ತಿ ತೋರಿಸುತ್ತೇವೆ. ಮಣಿಪುರದಲ್ಲಿ ನಾವು ಯಾತ್ರೆ ಪ್ರಾರಂಭಿಸಿದ್ದೇವೆ,  ಅಲ್ಲಿ ಹಿಂಸಾಚಾರ ನಡೆಯುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಯಾತ್ರೆ ಸಾಗಿದೆ ಅಲ್ಲಿ ಶಾಂತಿ ಒಪ್ಪಂದದ ಭರವಸೆ ಈಡೇರಿಸಿಲ್ಲ. ಅಸ್ಸಾಂನಲ್ಲಿ ಜನರು ನಮಗೆ ಉದ್ಯೋಗಗಳು ಸಿಗುತ್ತಿಲ್ಲ, ಬೆಲೆಗಳು ಹೆಚ್ಚಿವೆ ಆದರೆ ಇವುಗಳನ್ನು ಪರಿಹರಿಸುವ ಬದಲು ಸಿಎಂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಕುಟುಂಬ ಮತ್ತು ಅವರ ಆಪ್ತರನ್ನು ಶ್ರೀಮಂತರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನಮಗೆ ಹೇಳಿದರು. ಅದಕ್ಕಾಗಿಯೇ ಭ್ರಷ್ಟಾಚಾರದತ್ತ ಗಮನ ಹರಿಸಲಾಗಿದೆ ಎಂದು  ಗೌರವ್‌ ಗೊಗೋಯ್ ಹೇಳಿದ್ದಾರೆ.

7ನೇ ದಿನದ ಭಾರತ್‌ ಜೋಡೋ ನ್ಯಾಯ ಯಾತ್ರೆ ಅರುಣಾಚಲ ಪ್ರದೇಶದಲ್ಲಿ ಸಮಾಪ್ತಿಯಾಗಲಿದೆ. ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬದಲಿಸಿದ್ದಕ್ಕೆ ಯಾತ್ರೆ ಮುಖ್ಯ ಸಂಘಟಕ ಕೆಬಿ ಬೈಜು ವಿರುದ್ಧ ಜೋರ್ಹತ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾತ್ರೆಯ ಹಾದಿಯಲ್ಲಿ ದಿಢೀರ್‌ ಬದಲಾವಣೆಯಿಂದಾಗಿ ಸಂಚಾರ ವ್ಯತ್ಯಯವುಂಟಾಗಿತ್ತಲ್ಲದೆ ಬೈಜಿಯು ಮತ್ತಿತರರು ಟ್ರಾಫಿಕ್‌ ಬ್ಯಾರಿಕೇಡುಗಳನ್ನು ಮುರಿಯಲು ನೆರೆದಿದ್ದವರನ್ನು ಪ್ರಚೋದಿಸಿದರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಾಗಲಿದೆ. ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...