Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

ಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಭಾರತ್ ಜೋಡೋ ನ್ಯಾಯ ಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ರಾಹುಲ್‌ ಗಾಂಧಿ ನಾಗರಿಕರ ಜೊತೆ ಸಂವಾದ ನಡೆಸಿದ್ದು, ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇಂದು ಅಸ್ಸಾಂನ ಲಖಿಂಪುರ ಜಿಲ್ಲೆಯಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಸ್ತಾನವನ್ನು ದೆಹಲಿಯಿಂದ ಒಂದೇ ಭಾಷೆ, ಒಬ್ಬ ನಾಯಕನಿಂದ ನಡೆಸಬೇಕು ಎಂದು ಬಯಸುತ್ತದೆ. ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ ಎಂದು ಹೇಳಿದ್ದಾರೆ.

ಅಸ್ಸಾಂನ ಮಜುಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಜನತಾ ಪಕ್ಷವು ಆದಿವಾಸಿಗಳನ್ನು ಅರಣ್ಯಕ್ಕೆ ಸೀಮಿತಗೊಳಿಸಲು ಮತ್ತು ಶಿಕ್ಷಣ ಮತ್ತು ಅವಕಾಶಗಳಿಂದ ವಂಚಿತರನ್ನಾಗಿಸಲು ಬಯಸುತ್ತದೆ. ಕಾಂಗ್ರೆಸ್, ಬುಡಕಟ್ಟು ಜನಾಂಗದವರನ್ನು ‘ಆದಿವಾಸಿಗಳು’ (ಮೊದಲ ನಿವಾಸಿಗಳು) ಎಂದು ಉಲ್ಲೇಖಿಸಿದರೆ, ಬಿಜೆಪಿ ಅವರನ್ನು ಕೇವಲ ‘ವನವಾಸಿಗಳು’ (ಅರಣ್ಯವಾಸಿಗಳು) ಎಂದು ಸೀಮಿತಗೊಳಿಸುತ್ತದೆ ಎಂದು ಅವರು ಹೇಳಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ಮುಂದುವರಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ರಾಹುಲ್‌ ವಾಗ್ದಾಳಿ ನಡೆಸಿದರು. ಮಣಿಪುರದಲ್ಲಿ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರ್ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪ್ರಧಾನಿ ಒಂದೇ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಅಸ್ಸಾಂ ಸಿಎಂ ದೇಶದ ಅತ್ಯಂತ ಭ್ರಷ್ಟ ಸಿಎಂ, ಅವರು ಬಿಜೆಪಿಯ ಇತರ ಸಿಎಂಗಳಿಗೆ ಭ್ರಷ್ಟಾಚಾರ ನಡೆಸಲು ಕಲಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೆಂಗ್ರೈಮುಖ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌರವ್‌ ಗೊಗೋಯ್, ಯಾತ್ರೆ ಮೂಲಕ ನಾವು ಜನರ ಪ್ರಮುಖ ಸಮಸ್ಯೆಯನ್ನು ಎತ್ತಿ ತೋರಿಸುತ್ತೇವೆ. ಮಣಿಪುರದಲ್ಲಿ ನಾವು ಯಾತ್ರೆ ಪ್ರಾರಂಭಿಸಿದ್ದೇವೆ,  ಅಲ್ಲಿ ಹಿಂಸಾಚಾರ ನಡೆಯುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಯಾತ್ರೆ ಸಾಗಿದೆ ಅಲ್ಲಿ ಶಾಂತಿ ಒಪ್ಪಂದದ ಭರವಸೆ ಈಡೇರಿಸಿಲ್ಲ. ಅಸ್ಸಾಂನಲ್ಲಿ ಜನರು ನಮಗೆ ಉದ್ಯೋಗಗಳು ಸಿಗುತ್ತಿಲ್ಲ, ಬೆಲೆಗಳು ಹೆಚ್ಚಿವೆ ಆದರೆ ಇವುಗಳನ್ನು ಪರಿಹರಿಸುವ ಬದಲು ಸಿಎಂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಕುಟುಂಬ ಮತ್ತು ಅವರ ಆಪ್ತರನ್ನು ಶ್ರೀಮಂತರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನಮಗೆ ಹೇಳಿದರು. ಅದಕ್ಕಾಗಿಯೇ ಭ್ರಷ್ಟಾಚಾರದತ್ತ ಗಮನ ಹರಿಸಲಾಗಿದೆ ಎಂದು  ಗೌರವ್‌ ಗೊಗೋಯ್ ಹೇಳಿದ್ದಾರೆ.

7ನೇ ದಿನದ ಭಾರತ್‌ ಜೋಡೋ ನ್ಯಾಯ ಯಾತ್ರೆ ಅರುಣಾಚಲ ಪ್ರದೇಶದಲ್ಲಿ ಸಮಾಪ್ತಿಯಾಗಲಿದೆ. ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬದಲಿಸಿದ್ದಕ್ಕೆ ಯಾತ್ರೆ ಮುಖ್ಯ ಸಂಘಟಕ ಕೆಬಿ ಬೈಜು ವಿರುದ್ಧ ಜೋರ್ಹತ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾತ್ರೆಯ ಹಾದಿಯಲ್ಲಿ ದಿಢೀರ್‌ ಬದಲಾವಣೆಯಿಂದಾಗಿ ಸಂಚಾರ ವ್ಯತ್ಯಯವುಂಟಾಗಿತ್ತಲ್ಲದೆ ಬೈಜಿಯು ಮತ್ತಿತರರು ಟ್ರಾಫಿಕ್‌ ಬ್ಯಾರಿಕೇಡುಗಳನ್ನು ಮುರಿಯಲು ನೆರೆದಿದ್ದವರನ್ನು ಪ್ರಚೋದಿಸಿದರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಾಗಲಿದೆ. ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...