Homeಮುಖಪುಟವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕೋವಿಡ್ ನಿರ್ವಹಣೆಯ ಕುರಿತು ಮೋದಿ ಸರ್ಕಾರಕ್ಕೆ ಕಾಲ ಕಾಲಕ್ಕೆ ಮುನ್ನೆಚ್ಚರಿಕೆ ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರದ ವೈಫಲ್ಯಗಳನ್ನು ಸಹ ಅಷ್ಟೇ ಕಟುವಾಗಿ ಟೀಕಿಸುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆಯಾಗಿ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳು ಮತ್ತು ಪ್ರಧಾನ ಮಂತ್ರಿ ಇಬ್ಬರೂ ತಮ್ಮ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಮೊದಲ ಅಲೆ ಕಾಣಿಸಿಕೊಂಡಾಗ ಸಾವಿರಾರು ಕೋಟಿ ರೂ ಪಿಎಂ ಕೇರ್ಸ್‌ಗೆ ದೇಣಿಗೆಯಾಗಿ ಬಂದಿತ್ತು. ಅದರಲ್ಲಿ ನೂರಾರು ವೆಂಟಿಲೇಟರ್‌ಗಳನ್ನು ಖರೀದಿಸಿ ರಾಜ್ಯಗಳ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಅವುಗಳಲ್ಲಿ ಬಹುತೇಕ ತಾಂತ್ರಿಕ ಕಾರಣದಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿಯಾಗಿತ್ತು. ಈ ಕುರಿತು ಆಡಿಟ್ ಮತ್ತು ತನಿಖೆ ನಡೆಸುವಂತೆ ಮೋದಿ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಪ್ರಧಾನಿಗೂ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳಿಗೂ ಹಲವಾರು ಸಾಮ್ಯತೆಗಳಿವೆ. ಎರಡಕ್ಕೂ ಅತಿಯಾದ ಸುಳ್ಳು ಪ್ರಚಾರ ನೀಡಲಾಯಿತು, ಈ ಎರಡೂ ತಮ್ಮ ಕೆಲಸ ಮಾಡುವಲ್ಲಿ ವಿಫಲವಾಗಿವೆ ಮತ್ತು ಅಗತ್ಯವಿದ್ದಾಗ ಈ ಎರಡನ್ನು ಹುಡುಕುವುದು ಕಷ್ಟ” ಎಂದು ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಬಹಳಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಜ್ಞರ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿದ್ದು, ಲಸಿಕೆ ನೀಡುವಲ್ಲಿ ವಿಫಲರಾಗಿದ್ದು, ಕುಂಭಮೇಳ ಮತ್ತು ಚುಣಾವಣೆಗಳಲ್ಲಿ ನಿರತರಾಗಿದ್ದು ಸೇರಿದಂತೆ ರಾಜ್ಯಗಳಿಗೆ ಅಗತ್ಯವಾಗಿದ್ದ ಆಕ್ಸಿಜನ್, ಔಷಧಿಗಳನ್ನು ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ದೆಹಲಿಯಲ್ಲಿ “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ” ಎಂದು ನೂರಾರು ಪೋಸ್ಟರ್‌ಗಳು ಬ್ಯಾನರ್‌ಗಳು ಕಾಣಿಸಿಕೊಂಡಿದ್ದವು. ಇದರಿಂದ ಕೆಂಡಾಮಂಡಲವಾದ ಕೇಂದ್ರ ಸರ್ಕಾರ 25 ಎಫ್‌ಐಆರ್‌ಗಳನ್ನು ಹಾಕಿ ಹಲವಾರು ಜನರನ್ನು ಬಂಧಿಸಿದೆ. ಅದರಲ್ಲಿ ದಿನಗೂಲಿ ನೌಕರರು, ಆಟೋ ಚಾಲಕರು ಸೇರಿದ್ದಾರೆ. ಅವರಿಗೆ ಬ್ಯಾನರ್‌ನಲ್ಲಿ ಏನಿದೆ ಎಂಬುದು ಸಹ ಗೊತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಸಹ ನಿನ್ನೆ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಬ್ಯಾನರ್ ಹಾಕಿದ್ದು ತಪ್ಪೆಂದು ಬಂಧಿಸುವುದಾದರೆ ನನ್ನನ್ನೂ ಬಂಧಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಅನೇಕ ವಿಪಕ್ಷಗಳು “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ? ನಮ್ಮನ್ನೂ ಬಂಧಿಸಿ” ಎಂಬ ಪ್ರಚಾರಾಂದೋಲನ ನಡೆಸಿದ್ದರು.


ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...