Homeಮುಖಪುಟವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕೋವಿಡ್ ನಿರ್ವಹಣೆಯ ಕುರಿತು ಮೋದಿ ಸರ್ಕಾರಕ್ಕೆ ಕಾಲ ಕಾಲಕ್ಕೆ ಮುನ್ನೆಚ್ಚರಿಕೆ ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರದ ವೈಫಲ್ಯಗಳನ್ನು ಸಹ ಅಷ್ಟೇ ಕಟುವಾಗಿ ಟೀಕಿಸುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆಯಾಗಿ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳು ಮತ್ತು ಪ್ರಧಾನ ಮಂತ್ರಿ ಇಬ್ಬರೂ ತಮ್ಮ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಮೊದಲ ಅಲೆ ಕಾಣಿಸಿಕೊಂಡಾಗ ಸಾವಿರಾರು ಕೋಟಿ ರೂ ಪಿಎಂ ಕೇರ್ಸ್‌ಗೆ ದೇಣಿಗೆಯಾಗಿ ಬಂದಿತ್ತು. ಅದರಲ್ಲಿ ನೂರಾರು ವೆಂಟಿಲೇಟರ್‌ಗಳನ್ನು ಖರೀದಿಸಿ ರಾಜ್ಯಗಳ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಅವುಗಳಲ್ಲಿ ಬಹುತೇಕ ತಾಂತ್ರಿಕ ಕಾರಣದಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿಯಾಗಿತ್ತು. ಈ ಕುರಿತು ಆಡಿಟ್ ಮತ್ತು ತನಿಖೆ ನಡೆಸುವಂತೆ ಮೋದಿ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಪ್ರಧಾನಿಗೂ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳಿಗೂ ಹಲವಾರು ಸಾಮ್ಯತೆಗಳಿವೆ. ಎರಡಕ್ಕೂ ಅತಿಯಾದ ಸುಳ್ಳು ಪ್ರಚಾರ ನೀಡಲಾಯಿತು, ಈ ಎರಡೂ ತಮ್ಮ ಕೆಲಸ ಮಾಡುವಲ್ಲಿ ವಿಫಲವಾಗಿವೆ ಮತ್ತು ಅಗತ್ಯವಿದ್ದಾಗ ಈ ಎರಡನ್ನು ಹುಡುಕುವುದು ಕಷ್ಟ” ಎಂದು ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಬಹಳಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಜ್ಞರ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿದ್ದು, ಲಸಿಕೆ ನೀಡುವಲ್ಲಿ ವಿಫಲರಾಗಿದ್ದು, ಕುಂಭಮೇಳ ಮತ್ತು ಚುಣಾವಣೆಗಳಲ್ಲಿ ನಿರತರಾಗಿದ್ದು ಸೇರಿದಂತೆ ರಾಜ್ಯಗಳಿಗೆ ಅಗತ್ಯವಾಗಿದ್ದ ಆಕ್ಸಿಜನ್, ಔಷಧಿಗಳನ್ನು ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ದೆಹಲಿಯಲ್ಲಿ “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ” ಎಂದು ನೂರಾರು ಪೋಸ್ಟರ್‌ಗಳು ಬ್ಯಾನರ್‌ಗಳು ಕಾಣಿಸಿಕೊಂಡಿದ್ದವು. ಇದರಿಂದ ಕೆಂಡಾಮಂಡಲವಾದ ಕೇಂದ್ರ ಸರ್ಕಾರ 25 ಎಫ್‌ಐಆರ್‌ಗಳನ್ನು ಹಾಕಿ ಹಲವಾರು ಜನರನ್ನು ಬಂಧಿಸಿದೆ. ಅದರಲ್ಲಿ ದಿನಗೂಲಿ ನೌಕರರು, ಆಟೋ ಚಾಲಕರು ಸೇರಿದ್ದಾರೆ. ಅವರಿಗೆ ಬ್ಯಾನರ್‌ನಲ್ಲಿ ಏನಿದೆ ಎಂಬುದು ಸಹ ಗೊತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಸಹ ನಿನ್ನೆ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಬ್ಯಾನರ್ ಹಾಕಿದ್ದು ತಪ್ಪೆಂದು ಬಂಧಿಸುವುದಾದರೆ ನನ್ನನ್ನೂ ಬಂಧಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಅನೇಕ ವಿಪಕ್ಷಗಳು “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ? ನಮ್ಮನ್ನೂ ಬಂಧಿಸಿ” ಎಂಬ ಪ್ರಚಾರಾಂದೋಲನ ನಡೆಸಿದ್ದರು.


ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...