Homeಮುಖಪುಟವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕೋವಿಡ್ ನಿರ್ವಹಣೆಯ ಕುರಿತು ಮೋದಿ ಸರ್ಕಾರಕ್ಕೆ ಕಾಲ ಕಾಲಕ್ಕೆ ಮುನ್ನೆಚ್ಚರಿಕೆ ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರದ ವೈಫಲ್ಯಗಳನ್ನು ಸಹ ಅಷ್ಟೇ ಕಟುವಾಗಿ ಟೀಕಿಸುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆಯಾಗಿ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳು ಮತ್ತು ಪ್ರಧಾನ ಮಂತ್ರಿ ಇಬ್ಬರೂ ತಮ್ಮ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಮೊದಲ ಅಲೆ ಕಾಣಿಸಿಕೊಂಡಾಗ ಸಾವಿರಾರು ಕೋಟಿ ರೂ ಪಿಎಂ ಕೇರ್ಸ್‌ಗೆ ದೇಣಿಗೆಯಾಗಿ ಬಂದಿತ್ತು. ಅದರಲ್ಲಿ ನೂರಾರು ವೆಂಟಿಲೇಟರ್‌ಗಳನ್ನು ಖರೀದಿಸಿ ರಾಜ್ಯಗಳ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಅವುಗಳಲ್ಲಿ ಬಹುತೇಕ ತಾಂತ್ರಿಕ ಕಾರಣದಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿಯಾಗಿತ್ತು. ಈ ಕುರಿತು ಆಡಿಟ್ ಮತ್ತು ತನಿಖೆ ನಡೆಸುವಂತೆ ಮೋದಿ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಪ್ರಧಾನಿಗೂ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳಿಗೂ ಹಲವಾರು ಸಾಮ್ಯತೆಗಳಿವೆ. ಎರಡಕ್ಕೂ ಅತಿಯಾದ ಸುಳ್ಳು ಪ್ರಚಾರ ನೀಡಲಾಯಿತು, ಈ ಎರಡೂ ತಮ್ಮ ಕೆಲಸ ಮಾಡುವಲ್ಲಿ ವಿಫಲವಾಗಿವೆ ಮತ್ತು ಅಗತ್ಯವಿದ್ದಾಗ ಈ ಎರಡನ್ನು ಹುಡುಕುವುದು ಕಷ್ಟ” ಎಂದು ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಬಹಳಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಜ್ಞರ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿದ್ದು, ಲಸಿಕೆ ನೀಡುವಲ್ಲಿ ವಿಫಲರಾಗಿದ್ದು, ಕುಂಭಮೇಳ ಮತ್ತು ಚುಣಾವಣೆಗಳಲ್ಲಿ ನಿರತರಾಗಿದ್ದು ಸೇರಿದಂತೆ ರಾಜ್ಯಗಳಿಗೆ ಅಗತ್ಯವಾಗಿದ್ದ ಆಕ್ಸಿಜನ್, ಔಷಧಿಗಳನ್ನು ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ದೆಹಲಿಯಲ್ಲಿ “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ” ಎಂದು ನೂರಾರು ಪೋಸ್ಟರ್‌ಗಳು ಬ್ಯಾನರ್‌ಗಳು ಕಾಣಿಸಿಕೊಂಡಿದ್ದವು. ಇದರಿಂದ ಕೆಂಡಾಮಂಡಲವಾದ ಕೇಂದ್ರ ಸರ್ಕಾರ 25 ಎಫ್‌ಐಆರ್‌ಗಳನ್ನು ಹಾಕಿ ಹಲವಾರು ಜನರನ್ನು ಬಂಧಿಸಿದೆ. ಅದರಲ್ಲಿ ದಿನಗೂಲಿ ನೌಕರರು, ಆಟೋ ಚಾಲಕರು ಸೇರಿದ್ದಾರೆ. ಅವರಿಗೆ ಬ್ಯಾನರ್‌ನಲ್ಲಿ ಏನಿದೆ ಎಂಬುದು ಸಹ ಗೊತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಸಹ ನಿನ್ನೆ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಬ್ಯಾನರ್ ಹಾಕಿದ್ದು ತಪ್ಪೆಂದು ಬಂಧಿಸುವುದಾದರೆ ನನ್ನನ್ನೂ ಬಂಧಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಅನೇಕ ವಿಪಕ್ಷಗಳು “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ? ನಮ್ಮನ್ನೂ ಬಂಧಿಸಿ” ಎಂಬ ಪ್ರಚಾರಾಂದೋಲನ ನಡೆಸಿದ್ದರು.


ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...