Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...