Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...