Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...