Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....