Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...