Homeಮುಖಪುಟಒಡಿಶಾ ವಿದ್ಯಾರ್ಥಿನಿ ಸಾವು 'ವ್ಯವಸ್ಥೆ ಮಾಡಿದ ಕೊಲೆ': ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಒಡಿಶಾ ವಿದ್ಯಾರ್ಥಿನಿ ಸಾವು ‘ವ್ಯವಸ್ಥೆ ಮಾಡಿದ ಕೊಲೆ’: ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಪ್ರಾಧ್ಯಾಪಕನ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಒಡಿಶಾದ ಕಾಲೇಜು ವಿದ್ಯಾರ್ಥಿನಿಯ ಅಂತ್ಯ ಸಂಸ್ಕಾರ ಬಾಲಸೋರ್ ಜಿಲ್ಲೆಯ ಆಕೆಯ ಸ್ವಗ್ರಾಮದಲ್ಲಿ ಮಂಗಳವಾರ ನೆರವೇರಿದೆ.

ಕುಟುಂಬ ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು, ಬಾಲಸೋರ್ ಸಂಸದ ಪ್ರತಾಪ್ ಸಾರಂಗಿ ಮತ್ತು ಸಾವಿರಾರು ಜನರು ವಿದ್ಯಾರ್ಥಿನಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಘಟನೆಯನ್ನು ಒಡಿಶಾದ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಇದು ವ್ಯವಸ್ಥೆ ನಡೆಸಿದ ಕೊಲೆ’ ಎಂದು ಆರೋಪಿಸಿದ್ದಾರೆ.

ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ಎರಡನೇ ವರ್ಷದ ಬಿ.ಎಡ್ ವಿದ್ಯಾರ್ಥಿನಿ 20 ವರ್ಷದ ಹೆಣ್ಣು ಮಗಳು, ತನ್ನ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಈ ಬಗ್ಗೆ ಕಾಲೇಜಿನ ಆಂತರಿಕ ದೂರು ಸಮಿತಿ (ಐಸಿಸಿ)ಗೆ ದೂರು ನೀಡಿದ್ದರು. ಆದರೆ, ಪ್ರಾಂಶುಪಾಲ ಆದಿಯಾಗಿ ಕಾಲೇಜಿನ ಅಧಿಕಾರಿಗಳು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳುವ ಬದಲು, ದೂರು ಹಿಂಪಡೆಯುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಆಕೆಯ ಸಹಪಾಠಿಗಳು ಕಳೆದ ಶನಿವಾರ ಕಾಲೇಜಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರಾಂಶುಪಾಲರ ಕಚೇರಿ ಮುಂದೆ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಶೇಕಡ 95ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದ ವಿದ್ಯಾರ್ಥಿನಿಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಆಕೆ ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮಂಗಳವಾರ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಝಿ ನಿರ್ದೇಶನ ನೀಡಿದ್ದಾರೆ. ಎಲ್ಲಾ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಸಾವು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಎಂಟು ವಿರೋಧ ಪಕ್ಷಗಳು ಜುಲೈ 17 ರಂದು ‘ಒಡಿಶಾ ಬಂದ್‌’ಗೆ ಕರೆ ಕೊಟ್ಟಿವೆ. ಎಡಪಕ್ಷಗಳು ಸೇರಿದಂತೆ ಎಂಟು ಪಕ್ಷಗಳು ಬಂದ್‌ಗೆ ಬೆಂಬಲ ನೀಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ತಿಳಿಸಿದ್ದಾರೆ.

“ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ಘಟನೆಯು ರಾಜ್ಯ ಸರ್ಕಾರವು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸಿದೆ” ಎಂದು ಭಕ್ತ ಚರಣ್ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಳ್ಳಲು ವಿದ್ಯಾರ್ಥಿನಿ ಪೆಟ್ರೋಲ್ ತಂದಿದ್ದರು. ಆದರೆ, ಎಲ್ಲರೂ ನಿಂತು ನೋಡಿದ್ದಾರೆ. ಯಾರೂ ಏನೂ ಮಾಡಿಲ್ಲ” ಎಂದು ಆಡಳಿತರೂಢ ಬಿಜೆಪಿ ವಿರುದ್ದ ಚರಣ್ ದಾಸ್ ವಾಗ್ವಾಳಿ ನಡೆಸಿದ್ದಾರೆ.

ವಿದ್ಯಾರ್ಥಿಯ ಸಾವು ‘ವ್ಯವಸ್ಥೆ ನಡೆಸಿದ ಸಂಘಟಿತ ಕೊಲೆ’ ಗಿಂತ ಕಡಿಮೆಯೇನಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಒಡಿಶಾದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಹೆಣ್ಣು ಮಗಳ ಸಾವು ಬಿಜೆಪಿಯ ವ್ಯವಸ್ಥೆಯಿಂದ ನಡೆದ ಕೊಲೆಗಿಂತ ಕಡಿಮೆಯಿಲ್ಲ. ಆ ಧೈರ್ಯಶಾಲಿ ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಳು. ಆದರೆ, ಆಕೆಗೆ ನ್ಯಾಯ ಒದಗಿಸುವ ಬದಲು, ಬೆದರಿಕೆ, ಹಿಂಸೆ ನೀಡಲಾಯಿತು. ಪದೇ ಪದೇ ಅವಮಾನಿಸಲಾಯಿತು” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಆಕೆಯನ್ನು ರಕ್ಷಿಸಬೇಕಾದವರೆ ಒಡೆದು ಹಾಕಿದರು. ಎಂದಿನಂತೆ ಬಿಜೆಪಿಯ ವ್ಯವಸ್ಥೆಯು ಇಲ್ಲಿ ಆರೋಪಿಗಳನ್ನು ರಕ್ಷಿಸಿದೆ. ಈ ಮೂಲಕ ಅಮಾಯಕ ಹೆಣ್ಣು ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೆಪಿಸಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ವಿದ್ಯಾರ್ಥಿನಿಯ ಸಾವು ಆತ್ಮಹತ್ಯೆಯಲ್ಲ, ಅದು ವ್ಯವಸ್ಥೆಯಿಂದ ನಡೆದ ಸಂಘಟಿತ ಕೊಲೆ. ಮೋದಿ ಜೀ, ಒಡಿಶಾದಲ್ಲಾಗಲಿ ಅಥವಾ ಮಣಿಪುರದಲ್ಲಾಗಲಿ – ದೇಶದ ಹೆಣ್ಣುಮಕ್ಕಳು ಸಾಯುತ್ತಿದ್ದಾರೆ. ನೀವು ಮೌನವಾಗಿರುತ್ತೀರಿ. ದೇಶಕ್ಕೆ ನಿಮ್ಮ ಮೌನ ಬೇಕಾಗಿಲ್ಲ; ಉತ್ತರಗಳು ಬೇಕು. ಭಾರತದ ಹೆಣ್ಣುಮಕ್ಕಳಿಗೆ ಸುರಕ್ಷತೆ ಮತ್ತು ನ್ಯಾಯ ಬೇಕು” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್, “ಇದು ಸಾಂಸ್ಥಿಕ ದ್ರೋಹ ಮತ್ತು ಯೋಜಿತ ಅನ್ಯಾಯಕ್ಕಿಂತ ಕಡಿಮೆಯಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪಟ್ನಾಯಕ್ “ವಿಫಲ ವ್ಯವಸ್ಥೆಯು ಒಬ್ಬರ ಜೀವವನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದನ್ನು ಯೋಚಿಸುವುದು ತುಂಬಾ ಕಳವಳಕಾರಿಯಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಅತ್ಯಂತ ನೋವಿನ ಸಂಗತಿಯೆಂದರೆ ಇದು ಆಕಸ್ಮಿಕವಲ್ಲ, ಬದಲಾಗಿ ಸಹಾಯ ಮಾಡುವ ಬದಲು ಮೌನವಾಗಿದ್ದ ವ್ಯವಸ್ಥೆಯ ಪರಿಣಾಮವಾಗಿದೆ” ಎಂದು ಎಂದಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...