Homeಮುಖಪುಟಒಡಿಶಾ ವಿದ್ಯಾರ್ಥಿನಿ ಸಾವು 'ವ್ಯವಸ್ಥೆ ಮಾಡಿದ ಕೊಲೆ': ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಒಡಿಶಾ ವಿದ್ಯಾರ್ಥಿನಿ ಸಾವು ‘ವ್ಯವಸ್ಥೆ ಮಾಡಿದ ಕೊಲೆ’: ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಪ್ರಾಧ್ಯಾಪಕನ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಒಡಿಶಾದ ಕಾಲೇಜು ವಿದ್ಯಾರ್ಥಿನಿಯ ಅಂತ್ಯ ಸಂಸ್ಕಾರ ಬಾಲಸೋರ್ ಜಿಲ್ಲೆಯ ಆಕೆಯ ಸ್ವಗ್ರಾಮದಲ್ಲಿ ಮಂಗಳವಾರ ನೆರವೇರಿದೆ.

ಕುಟುಂಬ ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು, ಬಾಲಸೋರ್ ಸಂಸದ ಪ್ರತಾಪ್ ಸಾರಂಗಿ ಮತ್ತು ಸಾವಿರಾರು ಜನರು ವಿದ್ಯಾರ್ಥಿನಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಘಟನೆಯನ್ನು ಒಡಿಶಾದ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಇದು ವ್ಯವಸ್ಥೆ ನಡೆಸಿದ ಕೊಲೆ’ ಎಂದು ಆರೋಪಿಸಿದ್ದಾರೆ.

ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ಎರಡನೇ ವರ್ಷದ ಬಿ.ಎಡ್ ವಿದ್ಯಾರ್ಥಿನಿ 20 ವರ್ಷದ ಹೆಣ್ಣು ಮಗಳು, ತನ್ನ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಈ ಬಗ್ಗೆ ಕಾಲೇಜಿನ ಆಂತರಿಕ ದೂರು ಸಮಿತಿ (ಐಸಿಸಿ)ಗೆ ದೂರು ನೀಡಿದ್ದರು. ಆದರೆ, ಪ್ರಾಂಶುಪಾಲ ಆದಿಯಾಗಿ ಕಾಲೇಜಿನ ಅಧಿಕಾರಿಗಳು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳುವ ಬದಲು, ದೂರು ಹಿಂಪಡೆಯುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಆಕೆಯ ಸಹಪಾಠಿಗಳು ಕಳೆದ ಶನಿವಾರ ಕಾಲೇಜಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರಾಂಶುಪಾಲರ ಕಚೇರಿ ಮುಂದೆ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಶೇಕಡ 95ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದ ವಿದ್ಯಾರ್ಥಿನಿಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಆಕೆ ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮಂಗಳವಾರ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಝಿ ನಿರ್ದೇಶನ ನೀಡಿದ್ದಾರೆ. ಎಲ್ಲಾ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಸಾವು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಎಂಟು ವಿರೋಧ ಪಕ್ಷಗಳು ಜುಲೈ 17 ರಂದು ‘ಒಡಿಶಾ ಬಂದ್‌’ಗೆ ಕರೆ ಕೊಟ್ಟಿವೆ. ಎಡಪಕ್ಷಗಳು ಸೇರಿದಂತೆ ಎಂಟು ಪಕ್ಷಗಳು ಬಂದ್‌ಗೆ ಬೆಂಬಲ ನೀಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ತಿಳಿಸಿದ್ದಾರೆ.

“ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ಘಟನೆಯು ರಾಜ್ಯ ಸರ್ಕಾರವು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸಿದೆ” ಎಂದು ಭಕ್ತ ಚರಣ್ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಳ್ಳಲು ವಿದ್ಯಾರ್ಥಿನಿ ಪೆಟ್ರೋಲ್ ತಂದಿದ್ದರು. ಆದರೆ, ಎಲ್ಲರೂ ನಿಂತು ನೋಡಿದ್ದಾರೆ. ಯಾರೂ ಏನೂ ಮಾಡಿಲ್ಲ” ಎಂದು ಆಡಳಿತರೂಢ ಬಿಜೆಪಿ ವಿರುದ್ದ ಚರಣ್ ದಾಸ್ ವಾಗ್ವಾಳಿ ನಡೆಸಿದ್ದಾರೆ.

ವಿದ್ಯಾರ್ಥಿಯ ಸಾವು ‘ವ್ಯವಸ್ಥೆ ನಡೆಸಿದ ಸಂಘಟಿತ ಕೊಲೆ’ ಗಿಂತ ಕಡಿಮೆಯೇನಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಒಡಿಶಾದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಹೆಣ್ಣು ಮಗಳ ಸಾವು ಬಿಜೆಪಿಯ ವ್ಯವಸ್ಥೆಯಿಂದ ನಡೆದ ಕೊಲೆಗಿಂತ ಕಡಿಮೆಯಿಲ್ಲ. ಆ ಧೈರ್ಯಶಾಲಿ ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಳು. ಆದರೆ, ಆಕೆಗೆ ನ್ಯಾಯ ಒದಗಿಸುವ ಬದಲು, ಬೆದರಿಕೆ, ಹಿಂಸೆ ನೀಡಲಾಯಿತು. ಪದೇ ಪದೇ ಅವಮಾನಿಸಲಾಯಿತು” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಆಕೆಯನ್ನು ರಕ್ಷಿಸಬೇಕಾದವರೆ ಒಡೆದು ಹಾಕಿದರು. ಎಂದಿನಂತೆ ಬಿಜೆಪಿಯ ವ್ಯವಸ್ಥೆಯು ಇಲ್ಲಿ ಆರೋಪಿಗಳನ್ನು ರಕ್ಷಿಸಿದೆ. ಈ ಮೂಲಕ ಅಮಾಯಕ ಹೆಣ್ಣು ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೆಪಿಸಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ವಿದ್ಯಾರ್ಥಿನಿಯ ಸಾವು ಆತ್ಮಹತ್ಯೆಯಲ್ಲ, ಅದು ವ್ಯವಸ್ಥೆಯಿಂದ ನಡೆದ ಸಂಘಟಿತ ಕೊಲೆ. ಮೋದಿ ಜೀ, ಒಡಿಶಾದಲ್ಲಾಗಲಿ ಅಥವಾ ಮಣಿಪುರದಲ್ಲಾಗಲಿ – ದೇಶದ ಹೆಣ್ಣುಮಕ್ಕಳು ಸಾಯುತ್ತಿದ್ದಾರೆ. ನೀವು ಮೌನವಾಗಿರುತ್ತೀರಿ. ದೇಶಕ್ಕೆ ನಿಮ್ಮ ಮೌನ ಬೇಕಾಗಿಲ್ಲ; ಉತ್ತರಗಳು ಬೇಕು. ಭಾರತದ ಹೆಣ್ಣುಮಕ್ಕಳಿಗೆ ಸುರಕ್ಷತೆ ಮತ್ತು ನ್ಯಾಯ ಬೇಕು” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್, “ಇದು ಸಾಂಸ್ಥಿಕ ದ್ರೋಹ ಮತ್ತು ಯೋಜಿತ ಅನ್ಯಾಯಕ್ಕಿಂತ ಕಡಿಮೆಯಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪಟ್ನಾಯಕ್ “ವಿಫಲ ವ್ಯವಸ್ಥೆಯು ಒಬ್ಬರ ಜೀವವನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದನ್ನು ಯೋಚಿಸುವುದು ತುಂಬಾ ಕಳವಳಕಾರಿಯಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಅತ್ಯಂತ ನೋವಿನ ಸಂಗತಿಯೆಂದರೆ ಇದು ಆಕಸ್ಮಿಕವಲ್ಲ, ಬದಲಾಗಿ ಸಹಾಯ ಮಾಡುವ ಬದಲು ಮೌನವಾಗಿದ್ದ ವ್ಯವಸ್ಥೆಯ ಪರಿಣಾಮವಾಗಿದೆ” ಎಂದು ಎಂದಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...