Homeಮುಖಪುಟಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿಗೆ ರಾಹುಲ್ ಗಾಂಧಿ ಆಯ್ಕೆ

ಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿಗೆ ರಾಹುಲ್ ಗಾಂಧಿ ಆಯ್ಕೆ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಮೊದಲ ‘ಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿ’ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಉಮ್ಮನ್ ಚಾಂಡಿ ಫೌಂಡೇಶನ್ ಇಂದು (ಜುಲೈ 21) ಚಾಂಡಿ ಮೊದಲ ಪುಣ್ಯತಿಥಿಯ ಮೂರು ದಿನಗಳ ನಂತರ ಪ್ರಶಸ್ತಿಯನ್ನು ಘೋಷಿಸಿದೆ. ಈ ಗೌರವವು 1 ಲಕ್ಷ ರೂಪಾಯಿಯ ನಗದು ಮತ್ತು ಹೆಸರಾಂತ ಕಲಾವಿದ, ಚಲನಚಿತ್ರ ನಿರ್ಮಾಪಕ ನೇಮೊಮ್ ಪುಷ್ಪರಾಜ್ ವಿನ್ಯಾಸಗೊಳಿಸಿದ ಶಿಲ್ಪವನ್ನು ಒಳಗೊಂಡಿದೆ.

ಭಾರತ್ ಜೋಡೋ ಯಾತ್ರೆ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಂಡ ರಾಷ್ಟ್ರೀಯ ನಾಯಕ ಗಾಂಧಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯ ಪರಿಣಿತ ತೀರ್ಪುಗಾರರ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಉಮ್ಮನ್ ಚಾಂಡಿ ಅವರ ಜೀವನ ದಣಿವರಿಯದ ಪದಕ್ಕೆ ಸಮಾನಾರ್ಥಕ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ (ಜುಲೈ 19) ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿವಂಗತ ಉಮ್ಮನ್ ಚಾಂಡಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಕಾಂಗ್ರೆಸ್ ನಾಯಕರ ಜೀವನವನ್ನು ದಣಿವರಿಯದ ಸಮಾನಾರ್ಥಕ ಎಂದು ಬಣ್ಣಿಸಿದರು.

“ರಾಜಕೀಯವಾಗಿ ಉಮ್ಮನ್‌ ಚಾಂಡಿ ಎದುರುಬದುರು ಇದ್ದಾಗಲೂ ಸೃಜನಾತ್ಮಕ ಪ್ರಸ್ತಾವನೆಗಳನ್ನು ಬೆಂಬಲಿಸುವ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ. ವಿದ್ಯಾರ್ಥಿ-ಯುವಜನ ಚಳವಳಿಗಳ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಕೇರಳ, ಅದರಲ್ಲೂ ಪುತ್ತುಪ್ಪಳ್ಳಿಯೊಂದಿಗೆ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಅದು ಅವರನ್ನು ವಿಭಿನ್ನವಾಗಿಸಿದೆ” ಎಂದು ವಿಜಯನ್ ಹೇಳಿದರು.

“ಸಾರ್ವಜನಿಕ ಸೇವೆಯು ಅವರ ಜೀವನದ ಅವಿಭಾಜ್ಯ ಅಂಗವಾಗಿದೆ. ಹೆಸರಾಂತ ಕವಿ ಕಡಮನಿಟ್ಟ ಅವರು ಉಮ್ಮನ್ ಚಾಂಡಿಯನ್ನು ಗಮನದಲ್ಲಿಟ್ಟುಕೊಂಡು ರಾಬರ್ಟ್ ಫ್ರಾಸ್ಟ್ ಅವರ ‘ಮೈಲ್ಸ್ ಟು ಗೋ ಬಿಫೋರ್ ಐ ಸ್ಲೀಪ್’ ಕವಿತೆಯನ್ನು ಮಲಯಾಳಂಗೆ ಅನುವಾದಿಸಿದಂತೆ ತೋರುತ್ತದೆ. ಅವರು ‘ದಣಿವಿಲ್ಲದ’ ಪದಕ್ಕೆ ಸಮಾನಾರ್ಥಕ” ಎಂದು ವಿಜಯನ್ ಹೇಳಿದರು.

ಇದನ್ನೂ ಓದಿ; ಸರ್ವಪಕ್ಷಗಳ ಸಭೆ: ಲೋಕಸಭೆ ಉಪಸಭಾಪತಿ ಸ್ಥಾನಕ್ಕೆ ಬೇಡಿಕೆ ಇಟ್ಟ ಕಾಂಗ್ರೆಸ್, ನೀಟ್ ವಿವಾದ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...