Homeಮುಖಪುಟಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿಗೆ ರಾಹುಲ್ ಗಾಂಧಿ ಆಯ್ಕೆ

ಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿಗೆ ರಾಹುಲ್ ಗಾಂಧಿ ಆಯ್ಕೆ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಮೊದಲ ‘ಉಮ್ಮನ್ ಚಾಂಡಿ ಸಾರ್ವಜನಿಕ ಸೇವಕ ಪ್ರಶಸ್ತಿ’ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಉಮ್ಮನ್ ಚಾಂಡಿ ಫೌಂಡೇಶನ್ ಇಂದು (ಜುಲೈ 21) ಚಾಂಡಿ ಮೊದಲ ಪುಣ್ಯತಿಥಿಯ ಮೂರು ದಿನಗಳ ನಂತರ ಪ್ರಶಸ್ತಿಯನ್ನು ಘೋಷಿಸಿದೆ. ಈ ಗೌರವವು 1 ಲಕ್ಷ ರೂಪಾಯಿಯ ನಗದು ಮತ್ತು ಹೆಸರಾಂತ ಕಲಾವಿದ, ಚಲನಚಿತ್ರ ನಿರ್ಮಾಪಕ ನೇಮೊಮ್ ಪುಷ್ಪರಾಜ್ ವಿನ್ಯಾಸಗೊಳಿಸಿದ ಶಿಲ್ಪವನ್ನು ಒಳಗೊಂಡಿದೆ.

ಭಾರತ್ ಜೋಡೋ ಯಾತ್ರೆ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಂಡ ರಾಷ್ಟ್ರೀಯ ನಾಯಕ ಗಾಂಧಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯ ಪರಿಣಿತ ತೀರ್ಪುಗಾರರ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಉಮ್ಮನ್ ಚಾಂಡಿ ಅವರ ಜೀವನ ದಣಿವರಿಯದ ಪದಕ್ಕೆ ಸಮಾನಾರ್ಥಕ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ (ಜುಲೈ 19) ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿವಂಗತ ಉಮ್ಮನ್ ಚಾಂಡಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಕಾಂಗ್ರೆಸ್ ನಾಯಕರ ಜೀವನವನ್ನು ದಣಿವರಿಯದ ಸಮಾನಾರ್ಥಕ ಎಂದು ಬಣ್ಣಿಸಿದರು.

“ರಾಜಕೀಯವಾಗಿ ಉಮ್ಮನ್‌ ಚಾಂಡಿ ಎದುರುಬದುರು ಇದ್ದಾಗಲೂ ಸೃಜನಾತ್ಮಕ ಪ್ರಸ್ತಾವನೆಗಳನ್ನು ಬೆಂಬಲಿಸುವ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ. ವಿದ್ಯಾರ್ಥಿ-ಯುವಜನ ಚಳವಳಿಗಳ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಕೇರಳ, ಅದರಲ್ಲೂ ಪುತ್ತುಪ್ಪಳ್ಳಿಯೊಂದಿಗೆ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಅದು ಅವರನ್ನು ವಿಭಿನ್ನವಾಗಿಸಿದೆ” ಎಂದು ವಿಜಯನ್ ಹೇಳಿದರು.

“ಸಾರ್ವಜನಿಕ ಸೇವೆಯು ಅವರ ಜೀವನದ ಅವಿಭಾಜ್ಯ ಅಂಗವಾಗಿದೆ. ಹೆಸರಾಂತ ಕವಿ ಕಡಮನಿಟ್ಟ ಅವರು ಉಮ್ಮನ್ ಚಾಂಡಿಯನ್ನು ಗಮನದಲ್ಲಿಟ್ಟುಕೊಂಡು ರಾಬರ್ಟ್ ಫ್ರಾಸ್ಟ್ ಅವರ ‘ಮೈಲ್ಸ್ ಟು ಗೋ ಬಿಫೋರ್ ಐ ಸ್ಲೀಪ್’ ಕವಿತೆಯನ್ನು ಮಲಯಾಳಂಗೆ ಅನುವಾದಿಸಿದಂತೆ ತೋರುತ್ತದೆ. ಅವರು ‘ದಣಿವಿಲ್ಲದ’ ಪದಕ್ಕೆ ಸಮಾನಾರ್ಥಕ” ಎಂದು ವಿಜಯನ್ ಹೇಳಿದರು.

ಇದನ್ನೂ ಓದಿ; ಸರ್ವಪಕ್ಷಗಳ ಸಭೆ: ಲೋಕಸಭೆ ಉಪಸಭಾಪತಿ ಸ್ಥಾನಕ್ಕೆ ಬೇಡಿಕೆ ಇಟ್ಟ ಕಾಂಗ್ರೆಸ್, ನೀಟ್ ವಿವಾದ ಪ್ರಸ್ತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...