HomeUncategorizedಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ: ತೆಲಂಗಾಣ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

ಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ: ತೆಲಂಗಾಣ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

- Advertisement -
- Advertisement -

ಹೈದರಾಬಾದ್‌ನ ಅಶೋಕನಗರ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತೆಲಂಗಾಣದ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರವನ್ನು ಕಾಂಗ್ರೆಸ್ ಶನಿವಾರ ತರಾಟೆಗೆ ತೆಗೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ, ಹೈದರಾಬಾದ್‌ನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆಯ ಸುದ್ದಿ ಅತ್ಯಂತ ದುಃಖಕರವಾಗಿದೆ. ಇದು ಆತ್ಮಹತ್ಯೆಯಲ್ಲ, ಇದು ಯುವ ಜನತೆಯ ಕನಸುಗಳು, ಭರವಸೆಗಳು ಮತ್ತು ಆಕಾಂಕ್ಷೆಗಳ ಕೊಲೆಯಾಗಿದೆ ಎಂದು ಹೇಳಿದ್ದಾರೆ.

ಬಿಆರ್‌ಎಸ್‌ ಪಕ್ಷವನ್ನು ಬಿಜೆಪಿಯ ರಿಷ್ತೇದಾರ್‌ ಪಕ್ಷ ಎಂದು ಟೀಕಿಸಿದ ರಾಹುಲ್‌ ಗಾಂಧಿ, ಕಳೆದ 10 ವರ್ಷಗಳಲ್ಲಿ ಬಿಜೆಪಿ ರಿಷ್ತೇದಾರ್‌ ಸಮಿತಿ ಬಿಆರ್‌ಎಸ್ ಮತ್ತು ಬಿಜೆಪಿ ಒಟ್ಟಾಗಿ ತಮ್ಮ ರಾಜ್ಯವನ್ನು ಹಾಳು ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ 1 ತಿಂಗಳಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ಟಿಎಸ್‌ಪಿಎಸ್‌ಸಿಯನ್ನು ಮರುಸಂಘಟಿಸುತ್ತೇವೆ ಮತ್ತು ಒಂದು ವರ್ಷದೊಳಗೆ 2 ಲಕ್ಷ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ.

ಹೈದರಾಬಾದ್‌ನ ಅಶೋಕ್ ನಗರ ಪ್ರದೇಶದ ಖಾಸಗಿ ಹಾಸ್ಟೆಲ್‌ನಲ್ಲಿ ವಾರಂಗಲ್ ಮೂಲದ ಮರ್ರಿ ಪ್ರವಳಿಕಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಗ್ರೂಪ್ 2 ಪರೀಕ್ಷೆ ರದ್ದುಗೊಳಿಸಿದ್ದಕ್ಕಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

ಘಟನೆ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಘಟನೆಯ ಕುರಿತು 48 ಗಂಟೆಗಳ ಒಳಗೆ ವಿವರವಾದ ವರದಿಯನ್ನು ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಗೆ ಸೂಚಿಸಿದ್ದರು.

ಮರ್ರಿ ಪ್ರವಳಿಕಾ ಶುಕ್ರವಾರ ರಾತ್ರಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳ ಕೇಂದ್ರವೆಂದು ಕರೆಯಲ್ಪಡುವ ಅಶೋಕ್ ನಗರ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹರಡುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಹಾಸ್ಟೆಲ್‌ನ ಹೊರಗೆ ಪ್ರತಿಭಟನೆಯನ್ನು ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆಯ ಮೊಬೈಲ್ ಫೋನ್ ವಶಪಡಿಸಿಕೊಂಡು ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ತೆಲಂಗಾಣದಲ್ಲಿ 23 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ವೇದೆನೆಯಾಗಿದೆ. ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆ ಪದೇ ಪದೇ ಮುಂದೂಡಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮರ್ರಿ ಪ್ರವಲ್ಲಿಕಾ ಕುಟುಂಬದ ಜೊತೆ ಈ ದುಃಖ ಮತ್ತು ನೋವಿನ ಸಂದರ್ಭದಲ್ಲಿ ನಾವು ಜೊತೆಯಾಗಿದ್ದೇವೆ ಎಂದು ಹೇಳಿದ್ದಾರೆ.

ತೆಲಂಗಾಣದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗಳನ್ನು ನಡೆಸುವಲ್ಲಿ BRS ಸರ್ಕಾರದ ನಿರಾಸಕ್ತಿಯಿಂದಾಗಿ ಹತಾಶರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ತೆಲಂಗಾಣದ ಯುವಕರು, ಭ್ರಷ್ಟ, ಅಸಮರ್ಥ BRS ಸರ್ಕಾರವನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಿ ರಾಜ್ಯದಲ್ಲಿ ಅಧಿಕಾರದಿಂದ ಹೊರಹಾಕಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...