Homeಮುಖಪುಟಉನ್ನತ ಶಿಕ್ಷಣದಲ್ಲಿ STಯ 83%, SCಯ 60% ಪ್ರಾಧ್ಯಾಪಕ ಹುದ್ದೆಗಳನ್ನು ಉದ್ದೇಶಪೂರ್ವಕ ಖಾಲಿ ಬಿಡಲಾಗಿದೆ: ರಾಹುಲ್...

ಉನ್ನತ ಶಿಕ್ಷಣದಲ್ಲಿ STಯ 83%, SCಯ 60% ಪ್ರಾಧ್ಯಾಪಕ ಹುದ್ದೆಗಳನ್ನು ಉದ್ದೇಶಪೂರ್ವಕ ಖಾಲಿ ಬಿಡಲಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ನವದೆಹಲಿ: ಭಾರತದ ಕಾಲೇಜುಗಳಲ್ಲಿ ಹುದ್ದೆಗಳ ನೇಮಕಾತಿಯಲ್ಲಿ “ಜಾತಿ ತಾರತಮ್ಯ” ಮಿತಿಮೀರುತ್ತಿದ್ದು,  ಸರ್ಕಾರ ಕೂಡಲೇ ಖಾಲಿ ಇರುವ ಮೀಸಲಾತಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ OBC ವರ್ಗದ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಸುಮಾರು 80% ಖಾಲಿ ಉಳಿದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. “ಬಹುಜನರಿಗೆ ಅವರ ಹಕ್ಕುಗಳು ಸಿಗಬೇಕು” ಎಂದು ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಪಂಗಡ (ST) ವರ್ಗದ ಪ್ರಾಧ್ಯಾಪಕರ ಹುದ್ದೆಗಳಲ್ಲಿ 83%, ನಂತರ OBC ವರ್ಗದ ಹುದ್ದೆಗಳಲ್ಲಿ 80%ರಷ್ಟು “ಉದ್ದೇಶಪೂರ್ವಕವಾಗಿ” ಖಾಲಿ ಇಡಲಾಗಿದೆ ಎಂದು ಗಾಂಧಿ ಹೇಳಿದ್ದಾರೆ. “SC (ಪರಿಶಿಷ್ಟ ಜಾತಿ)ಗೆ 64% (ಪ್ರಾಧ್ಯಾಪಕರ ಹುದ್ದೆಗಳು) ಉದ್ದೇಶಪೂರ್ವಕವಾಗಿ ಖಾಲಿ ಇಡಲಾಗಿದೆ” ಎಂದು ಅವರು ಸೇರಿಸಿದ್ದಾರೆ.

“ಅದೇ ರೀತಿ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು – ST: 65%, OBC: 69%, SC: 51% ಸಹ ಭರ್ತಿಯಾಗದೆ ಉಳಿದಿವೆ” ಎಂದು ಅವರು ತಿಳಿಸಿದ್ದಾರೆ. ಈ ವಿಷಯಗಳನ್ನು ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

ಸರ್ಕಾರವು UGC ನಿಯಮಗಳು ಪಾರದರ್ಶಕವಾಗಿವೆ ಎನ್ನುತ್ತದೆ, ಆದರೆ ಈ ಮಾತಿಗೆ ಯಾವುದೇ ಪುರಾವೆ ತೋರಿಸಿಲ್ಲ. ನೇಮಕಾತಿಗಳಲ್ಲಿ ಜಾತಿ ತಾರತಮ್ಯದ ಆರೋಪಗಳನ್ನು ಸರ್ಕಾರ ಖಂಡಿಸಲು ಸಾಧ್ಯವಾಗದ ಕಾರಣ, ಅವಕಾಶ ವಂಚಿತ ಸಮುದಾಯಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡಲಾಗುತ್ತಿದೆ ಎಂಬ ಅನುಮಾನ ಬಲವಾಗಿದೆ. ಈ ರೀತಿಯ ನಿರ್ಲಕ್ಷ್ಯದಿಂದ ಪ್ರತಿಭಾವಂತರಿಗೆ ಹಿನ್ನಡೆಯಾಗುತ್ತದೆ ಎಂದು ‘ಎಕ್ಸ್’ ಖಾತೆಯಲ್ಲಿ ರಾಹುಲ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಪರಿಸ್ಥಿತಿಯು ಜಾತಿ ತಾರತಮ್ಯದ ಸ್ಪಷ್ಟ ರೂಪವಾಗಿದೆ. ಇಲ್ಲಿ ಮೇಲ್ಜಾತಿಯವರ ನಿಯಂತ್ರಣದಿಂದ ಶಿಕ್ಷಣದಲ್ಲಿ ಅಸಮಾನತೆ ಉಂಟಾಗಿದೆ. OBC, ದಲಿತ ಮತ್ತು ಆದಿವಾಸಿ ಸಮುದಾಯಗಳಿಗೆ ಬೋಧಕ ಮತ್ತು ಶೈಕ್ಷಣಿಕ ಹುದ್ದೆಗಳಲ್ಲಿ ಅವಕಾಶಗಳು ಸೀಮಿತವಾಗಿದ್ದು, ಇದು ಶಿಕ್ಷಣ ಕ್ಷೇತ್ರದಲ್ಲಿ ಜಾತಿ ಶ್ರೇಣಿಗಳನ್ನು ಇನ್ನಷ್ಟು ಬಲಪಡಿಸಿದೆ. ಇದು ಸಾಮಾಜಿಕ ಅಸಮಾನತೆಯನ್ನು ಹೆಚ್ಚಿಸಿ, ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಇದು ಕೇವಲ ಪ್ರಾತಿನಿಧ್ಯದ ಕೊರತೆಯಲ್ಲ, ಬದಲಾಗಿ ಒಂದು ನಿರ್ದಿಷ್ಟ ಸಮುದಾಯದ ಸಮಗ್ರ ಬೆಳವಣಿಗೆಯನ್ನು ಉದ್ದೇಶಪೂರ್ವಕವಾಗಿ ತಡೆಯುವ ಪ್ರಯತ್ನ ಎಂದು ರಾಹುಲ್‌ ಗಾಂಧಿ ಆಪಾದಿಸಿದ್ದಾರೆ.

ಭಾರತದಲ್ಲಿ ಸ್ಥಳೀಯ ಹಕ್ಕುಗಳಿಗಾಗಿ ಹೋರಾಡುವ ‘ಟ್ರೈಬಲ್ ಆರ್ಮಿ’ ಸಂಘಟನೆಯು, ಸಾಮಾಜಿಕ ನ್ಯಾಯವನ್ನು ಒದಗಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಟೀಕಿಸಿದೆ. “ಬಿಜೆಪಿ ಪಕ್ಷವು OBC ಪ್ರಧಾನಿ ಮತ್ತು ಆದಿವಾಸಿ ರಾಷ್ಟ್ರಪತಿ ಇರುವುದನ್ನು ಹೇಳಿಕೊಳ್ಳುತ್ತದೆ. ಆದರೆ ವಾಸ್ತವವೆಂದರೆ, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ 80% OBC ಪ್ರಾಧ್ಯಾಪಕ ಹುದ್ದೆಗಳು ಮತ್ತು 83% ST ಪ್ರಾಧ್ಯಾಪಕ ಹುದ್ದೆಗಳು ಭರ್ತಿಯಾಗಿಲ್ಲ” ಎಂದು ಟ್ರೈಬಲ್ ಆರ್ಮಿ ಹೇಳಿಕೆ ನೀಡಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಅಂಕಿಅಂಶಗಳು ತೋರಿಸುವಂತೆ, ಸರ್ಕಾರವು ಕೇವಲ ಸಾಂಕೇತಿಕ ಪ್ರಾತಿನಿಧ್ಯವನ್ನು ನೀಡುತ್ತಿದೆ, ಆದರೆ ನಿಜವಾದ ಸಬಲೀಕರಣವನ್ನು ನಿರ್ಲಕ್ಷಿಸುತ್ತಿದೆ. ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಬಂದಾಗ, ಮೀಸಲಾತಿ ವರ್ಗದ ಅರ್ಹ ಅಭ್ಯರ್ಥಿಗಳನ್ನು “ಅರ್ಹರಲ್ಲ” ಎಂದು ಹೇಳಿ ಉದ್ದೇಶಪೂರ್ವಕವಾಗಿ ಹೊರಗಿಡಲಾಗುತ್ತಿದೆ. ಇದು ಸಾಮಾಜಿಕ ನ್ಯಾಯದ ತತ್ವಗಳಿಗೆ ಮಾಡುವ ದೊಡ್ಡ ಅವಮಾನ ಎಂದು ಟ್ರೈಬಲ್ ಆರ್ಮಿ ಕರೆದಿದ್ದು, ಇದು ಬಡ ಸಮುದಾಯಗಳ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿರುವುದನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ಈ ಹೇಳಿಕೆಗಳು ತೋರಿಸುವಂತೆ, ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಕೇವಲ ವೈಯಕ್ತಿಕ ಸಮಸ್ಯೆ ಅಲ್ಲ. ಇದು ಇಡೀ ಸಮುದಾಯಗಳ ಭವಿಷ್ಯವನ್ನು ಹಾಳುಮಾಡುತ್ತಿದೆ. ಶಿಕ್ಷಣವು ಸಮಾಜದಲ್ಲಿ ಮುಂದೆ ಬರಲು ಮತ್ತು ಸಬಲೀಕರಣಕ್ಕೆ ಮುಖ್ಯ ಮಾರ್ಗವಾಗಿದೆ. ಈ ಅವಕಾಶಗಳು ಸಿಗದಿದ್ದಾಗ, ಅದು ಇಡೀ ಸಮಾಜದ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗುತ್ತದೆ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕೇವಲ ಹುದ್ದೆಗಳನ್ನು ಭರ್ತಿ ಮಾಡುವ ವಿಷಯ ಮಾತ್ರವಲ್ಲ, ಬದಲಾಗಿ ಭಾರತದ ಸಾಮಾಜಿಕ ನ್ಯಾಯ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆ ಇರಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...