Homeಮುಖಪುಟಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

- Advertisement -
- Advertisement -

ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯು ಮಹಾ ವಿಕಾಸ್ ಅಘಾಡಿ ಮೈತ್ರಿ ಬಿರುಕಿಗೆ ಕಾರಣವಾಗಬಹುದು. ಹಾಗಾಗಿ ಭಾರತ್ ಜೋಡೋ ಯಾತ್ರೆ ಮೂಲಕ ಉತ್ತಮ ಕೆಲಸ ಮಾಡುತ್ತಿರುವ ಅವರು ಸಾವರ್ಕರ್ ವಿಷಯ ತೆಗೆಯುವ ಅಗತ್ಯವಿಲ್ಲ ಉದ್ದವ್ ಬಾಳಾಸಾಹೇಬ್ ಠಾಕ್ರೆ ಶಿವಸೇನೆ ಬಣದ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯಿಂದ ಎಂವಿಎ ಮೈತ್ರಿ ಕುಸಿಯುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಎಂವಿಎ ಕುಸಿಯುವುದಿಲ್ಲ. ಆದರೆ ಇದು ನಿಸ್ಸಂಶಯವಾಗಿ ಕಹಿಯನ್ನು ಉಂಟುಮಾಡುತ್ತದೆ. ನಮ್ಮ ಮೈತ್ರಿಯಲ್ಲಿ ಬಿರುಕುಗಳು ಉಂಟಾಗುತ್ತವೆ. ಅದು ಒಳ್ಳೆಯ ಸಂಕೇತವಲ್ಲ” ಎಂದಿದ್ದಾರೆ.

“ದೇಶದ ಇತರ ಭಾಗಗಳಿಗೆ ಹೋಲಿಸಿದರೆ, ಮಹಾರಾಷ್ಟ್ರದಲ್ಲಿ ರಾಹುಲ್ ಅವರ ಭಾರತ್ ಜೋಡೋ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವರ ಯಾತ್ರೆಯು ದೇಶದಲ್ಲಿ ನಡೆಯುತ್ತಿರುವ ದ್ವೇಷವನ್ನು ಕೊನೆಗೊಳಿಸಲು ಮತ್ತು ಏರುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಧ್ವನಿ ಎತ್ತುವ ಗುರಿಯನ್ನು ಹೊಂದಿದೆ. ಅವರು ಈ ಸಮಸ್ಯೆಗಳನ್ನು ಸರಿಯಾಗಿ ಮುನ್ನಲೆಗೆ ತಂದಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ರಾಷ್ಟ್ರದ ಆತ್ಮಸಾಕ್ಷಿಯನ್ನು ಕಲಕುತ್ತಿರುವಾಗ, ಸಾವರ್ಕರ್ ವಿಷಯವನ್ನು ಎತ್ತುವ ಅಗತ್ಯವೆಲ್ಲಿತ್ತು? ಅವರು ಅದನ್ನು ನಿರ್ಲಕ್ಷಿಸಿ ಅವರು ಮಾಡುತ್ತಿರುವ ಉತ್ತಮ ಕೆಲಸದತ್ತ ಗಮನ ಹರಿಸಬೇಕಿತ್ತು” ಎಂದು ರಾವತ್ ಹೇಳಿದ್ದಾರೆ.

ರಾಹುಲ್ ಗಾಂಧಿ ಸಾವರ್ಕರ್ ಕ್ಷಮೆ ಕೇಳಿದುದರ ಬಗ್ಗೆ ಮಾತನಾಡಿದ್ದಾರೆ. ಅದನ್ನು ಪುನಃ ಪುನಃ ಹೇಳುವ ಅಗತ್ಯವಿಲ್ಲ. ದ್ವೇಷ ಕೊನೆಗೊಳಿಸಬೇಕೆಂದು ಹೇಳುವ ಅವರು ಸಾವರ್ಕರ್ ಮೇಲೆಕೆ ಕೋಪ ಹೊಂದಿದ್ದಾರೆ? ನಮಗೆ ಸಾವರ್ಕರ್ ಆರಾಧ್ಯ ದೈವವಾಗಿದ್ದಾರೆ. ನಾವು ಸಾವರ್ಕರ್ ಅವರನ್ನು ಪ್ರೀತಿಸುತ್ತೇವೆ, ಮೆಚ್ಚುತ್ತೇವೆ ಮತ್ತು ಅಪಾರ ನಂಬಿಕೆ ಹೊಂದಿದ್ದೇವೆ. ಹಾಗಾಗಿ ನಾವು ರಾಹುಲ್ ಗಾಂಧಿಯವರ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅದೇ ಸಮಯದಲ್ಲಿ ಅವರು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. “ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದಿದ್ದವರು ಏಕಾಏಕಿ ಸಾವರ್ಕರ್ ಬಗ್ಗೆ ಅಭಿಮಾನ ತೋರಿಸುತ್ತಿದ್ದಾರೆ. ಬಿಜೆಪಿಯು ಸಾವರ್ಕರ್ ಅವರ ಹೆಸರಿನಿಂದ ರಾಜಕೀಯ ಲಾಭಕ್ಕಾಗಿ ನೋಡುತ್ತಿರುವುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಸಾವರ್ಕರ್ ಮೊಮ್ಮಗ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...