Homeಮುಖಪುಟಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

- Advertisement -
- Advertisement -

ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯು ಮಹಾ ವಿಕಾಸ್ ಅಘಾಡಿ ಮೈತ್ರಿ ಬಿರುಕಿಗೆ ಕಾರಣವಾಗಬಹುದು. ಹಾಗಾಗಿ ಭಾರತ್ ಜೋಡೋ ಯಾತ್ರೆ ಮೂಲಕ ಉತ್ತಮ ಕೆಲಸ ಮಾಡುತ್ತಿರುವ ಅವರು ಸಾವರ್ಕರ್ ವಿಷಯ ತೆಗೆಯುವ ಅಗತ್ಯವಿಲ್ಲ ಉದ್ದವ್ ಬಾಳಾಸಾಹೇಬ್ ಠಾಕ್ರೆ ಶಿವಸೇನೆ ಬಣದ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯಿಂದ ಎಂವಿಎ ಮೈತ್ರಿ ಕುಸಿಯುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಎಂವಿಎ ಕುಸಿಯುವುದಿಲ್ಲ. ಆದರೆ ಇದು ನಿಸ್ಸಂಶಯವಾಗಿ ಕಹಿಯನ್ನು ಉಂಟುಮಾಡುತ್ತದೆ. ನಮ್ಮ ಮೈತ್ರಿಯಲ್ಲಿ ಬಿರುಕುಗಳು ಉಂಟಾಗುತ್ತವೆ. ಅದು ಒಳ್ಳೆಯ ಸಂಕೇತವಲ್ಲ” ಎಂದಿದ್ದಾರೆ.

“ದೇಶದ ಇತರ ಭಾಗಗಳಿಗೆ ಹೋಲಿಸಿದರೆ, ಮಹಾರಾಷ್ಟ್ರದಲ್ಲಿ ರಾಹುಲ್ ಅವರ ಭಾರತ್ ಜೋಡೋ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವರ ಯಾತ್ರೆಯು ದೇಶದಲ್ಲಿ ನಡೆಯುತ್ತಿರುವ ದ್ವೇಷವನ್ನು ಕೊನೆಗೊಳಿಸಲು ಮತ್ತು ಏರುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಧ್ವನಿ ಎತ್ತುವ ಗುರಿಯನ್ನು ಹೊಂದಿದೆ. ಅವರು ಈ ಸಮಸ್ಯೆಗಳನ್ನು ಸರಿಯಾಗಿ ಮುನ್ನಲೆಗೆ ತಂದಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ರಾಷ್ಟ್ರದ ಆತ್ಮಸಾಕ್ಷಿಯನ್ನು ಕಲಕುತ್ತಿರುವಾಗ, ಸಾವರ್ಕರ್ ವಿಷಯವನ್ನು ಎತ್ತುವ ಅಗತ್ಯವೆಲ್ಲಿತ್ತು? ಅವರು ಅದನ್ನು ನಿರ್ಲಕ್ಷಿಸಿ ಅವರು ಮಾಡುತ್ತಿರುವ ಉತ್ತಮ ಕೆಲಸದತ್ತ ಗಮನ ಹರಿಸಬೇಕಿತ್ತು” ಎಂದು ರಾವತ್ ಹೇಳಿದ್ದಾರೆ.

ರಾಹುಲ್ ಗಾಂಧಿ ಸಾವರ್ಕರ್ ಕ್ಷಮೆ ಕೇಳಿದುದರ ಬಗ್ಗೆ ಮಾತನಾಡಿದ್ದಾರೆ. ಅದನ್ನು ಪುನಃ ಪುನಃ ಹೇಳುವ ಅಗತ್ಯವಿಲ್ಲ. ದ್ವೇಷ ಕೊನೆಗೊಳಿಸಬೇಕೆಂದು ಹೇಳುವ ಅವರು ಸಾವರ್ಕರ್ ಮೇಲೆಕೆ ಕೋಪ ಹೊಂದಿದ್ದಾರೆ? ನಮಗೆ ಸಾವರ್ಕರ್ ಆರಾಧ್ಯ ದೈವವಾಗಿದ್ದಾರೆ. ನಾವು ಸಾವರ್ಕರ್ ಅವರನ್ನು ಪ್ರೀತಿಸುತ್ತೇವೆ, ಮೆಚ್ಚುತ್ತೇವೆ ಮತ್ತು ಅಪಾರ ನಂಬಿಕೆ ಹೊಂದಿದ್ದೇವೆ. ಹಾಗಾಗಿ ನಾವು ರಾಹುಲ್ ಗಾಂಧಿಯವರ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅದೇ ಸಮಯದಲ್ಲಿ ಅವರು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. “ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದಿದ್ದವರು ಏಕಾಏಕಿ ಸಾವರ್ಕರ್ ಬಗ್ಗೆ ಅಭಿಮಾನ ತೋರಿಸುತ್ತಿದ್ದಾರೆ. ಬಿಜೆಪಿಯು ಸಾವರ್ಕರ್ ಅವರ ಹೆಸರಿನಿಂದ ರಾಜಕೀಯ ಲಾಭಕ್ಕಾಗಿ ನೋಡುತ್ತಿರುವುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಸಾವರ್ಕರ್ ಮೊಮ್ಮಗ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...