Homeಮುಖಪುಟಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ ಮೈತ್ರಿ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

- Advertisement -
- Advertisement -

ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯು ಮಹಾ ವಿಕಾಸ್ ಅಘಾಡಿ ಮೈತ್ರಿ ಬಿರುಕಿಗೆ ಕಾರಣವಾಗಬಹುದು. ಹಾಗಾಗಿ ಭಾರತ್ ಜೋಡೋ ಯಾತ್ರೆ ಮೂಲಕ ಉತ್ತಮ ಕೆಲಸ ಮಾಡುತ್ತಿರುವ ಅವರು ಸಾವರ್ಕರ್ ವಿಷಯ ತೆಗೆಯುವ ಅಗತ್ಯವಿಲ್ಲ ಉದ್ದವ್ ಬಾಳಾಸಾಹೇಬ್ ಠಾಕ್ರೆ ಶಿವಸೇನೆ ಬಣದ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯಿಂದ ಎಂವಿಎ ಮೈತ್ರಿ ಕುಸಿಯುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಎಂವಿಎ ಕುಸಿಯುವುದಿಲ್ಲ. ಆದರೆ ಇದು ನಿಸ್ಸಂಶಯವಾಗಿ ಕಹಿಯನ್ನು ಉಂಟುಮಾಡುತ್ತದೆ. ನಮ್ಮ ಮೈತ್ರಿಯಲ್ಲಿ ಬಿರುಕುಗಳು ಉಂಟಾಗುತ್ತವೆ. ಅದು ಒಳ್ಳೆಯ ಸಂಕೇತವಲ್ಲ” ಎಂದಿದ್ದಾರೆ.

“ದೇಶದ ಇತರ ಭಾಗಗಳಿಗೆ ಹೋಲಿಸಿದರೆ, ಮಹಾರಾಷ್ಟ್ರದಲ್ಲಿ ರಾಹುಲ್ ಅವರ ಭಾರತ್ ಜೋಡೋ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವರ ಯಾತ್ರೆಯು ದೇಶದಲ್ಲಿ ನಡೆಯುತ್ತಿರುವ ದ್ವೇಷವನ್ನು ಕೊನೆಗೊಳಿಸಲು ಮತ್ತು ಏರುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಧ್ವನಿ ಎತ್ತುವ ಗುರಿಯನ್ನು ಹೊಂದಿದೆ. ಅವರು ಈ ಸಮಸ್ಯೆಗಳನ್ನು ಸರಿಯಾಗಿ ಮುನ್ನಲೆಗೆ ತಂದಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ರಾಷ್ಟ್ರದ ಆತ್ಮಸಾಕ್ಷಿಯನ್ನು ಕಲಕುತ್ತಿರುವಾಗ, ಸಾವರ್ಕರ್ ವಿಷಯವನ್ನು ಎತ್ತುವ ಅಗತ್ಯವೆಲ್ಲಿತ್ತು? ಅವರು ಅದನ್ನು ನಿರ್ಲಕ್ಷಿಸಿ ಅವರು ಮಾಡುತ್ತಿರುವ ಉತ್ತಮ ಕೆಲಸದತ್ತ ಗಮನ ಹರಿಸಬೇಕಿತ್ತು” ಎಂದು ರಾವತ್ ಹೇಳಿದ್ದಾರೆ.

ರಾಹುಲ್ ಗಾಂಧಿ ಸಾವರ್ಕರ್ ಕ್ಷಮೆ ಕೇಳಿದುದರ ಬಗ್ಗೆ ಮಾತನಾಡಿದ್ದಾರೆ. ಅದನ್ನು ಪುನಃ ಪುನಃ ಹೇಳುವ ಅಗತ್ಯವಿಲ್ಲ. ದ್ವೇಷ ಕೊನೆಗೊಳಿಸಬೇಕೆಂದು ಹೇಳುವ ಅವರು ಸಾವರ್ಕರ್ ಮೇಲೆಕೆ ಕೋಪ ಹೊಂದಿದ್ದಾರೆ? ನಮಗೆ ಸಾವರ್ಕರ್ ಆರಾಧ್ಯ ದೈವವಾಗಿದ್ದಾರೆ. ನಾವು ಸಾವರ್ಕರ್ ಅವರನ್ನು ಪ್ರೀತಿಸುತ್ತೇವೆ, ಮೆಚ್ಚುತ್ತೇವೆ ಮತ್ತು ಅಪಾರ ನಂಬಿಕೆ ಹೊಂದಿದ್ದೇವೆ. ಹಾಗಾಗಿ ನಾವು ರಾಹುಲ್ ಗಾಂಧಿಯವರ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅದೇ ಸಮಯದಲ್ಲಿ ಅವರು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. “ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದಿದ್ದವರು ಏಕಾಏಕಿ ಸಾವರ್ಕರ್ ಬಗ್ಗೆ ಅಭಿಮಾನ ತೋರಿಸುತ್ತಿದ್ದಾರೆ. ಬಿಜೆಪಿಯು ಸಾವರ್ಕರ್ ಅವರ ಹೆಸರಿನಿಂದ ರಾಜಕೀಯ ಲಾಭಕ್ಕಾಗಿ ನೋಡುತ್ತಿರುವುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಸಾವರ್ಕರ್ ಮೊಮ್ಮಗ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...