Homeಮುಖಪುಟಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.

ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್‌ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

“ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್‌ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.

“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್‌ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್‌ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ​​ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
    My SUGGESTION TRY..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...